May 1, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಅವಸರವೇ ಅಪಘಾತಕ್ಕೆ ಕಾರಣ – ತಲಪಾಡಿ ಬಳಿ ಭೀಕರ ರಸ್ತೆ ದುರಂತದಲ್ಲಿ 6 ಮಂದಿ ಸಾವು, ಹಲವರು ಗಾಯ

ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ನಿಗಮ ಭರಿಸಲಿದೆ

ಕಾಸರಗೋಡು–ಮಂಗಳೂರು ಮಾರ್ಗದಲ್ಲಿ ಮಂಗಳೂರು-1ನೇ ಘಟಕದ ಕೆ.ಎಸ್.ಆರ್.ಟಿ.ಸಿ.  ಬಸ್ (KA19 F 3407) ಅತೀವೇಗವಾಗಿ ಚಲಿಸುತ್ತಿದ್ದಾಗ ತಲಪಾಡಿ ಟೋಲ್‌ನಿಂದ ಕೇವಲ 150 ಮೀಟರ್ ಹಿಂದಕ್ಕೆ ಭೀಕರ ಅಪಘಾತ ಸಂಭವಿಸಿದೆ. ಇಂದು ಆಗಸ್ಟ್ 28ರಂದು ಗುರುವಾರ ಮಧ್ಯಾಹ್ನ 1.45ರ ಹೊತ್ತಿಗೆ, ಎದುರು ಬಂದ ಆಟೋಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಬಸ್ ಚಾಲಕ ಬ್ರೇಕ್ ಹಾಕಿದರೂ, ನಿಯಂತ್ರಣ ತಪ್ಪಿದ ಬಸ್ ಮೊದಲು ಆಟೋಗೆ ಭಾರೀ ಡಿಕ್ಕಿ ಹೊಡೆದು ಬಳಿಕ ಹಠಾತ್ತನೆ ತಿರುಗಿ, ಇಳಿಜಾರಿನಲ್ಲಿ ಹಿಮ್ಮುಖವಾಗಿ ಚಲಿಸಿ ರಸ್ತೆಬದಿಯಲ್ಲಿ ಕಾಯುತ್ತಿದ್ದ ಪ್ರಯಾಣಿಕರಿಗೆ ಗುದ್ದಿದೆ.

ಈ ದುರಂತದಲ್ಲಿ —ಆಟೋದಲ್ಲಿದ್ದ ಇಬ್ಬರು ಪ್ರಯಾಣಿಕರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಆಟೋ ಚಾಲಕ ಸೇರಿ ನಾಲ್ವರು ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾರೆ. ಹಿಂಬದಿಯಲ್ಲಿ ನಿಂತಿದ್ದ ಇನ್ನಿಬ್ಬರು ಪ್ರಯಾಣಿಕರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಪಘಾತಕ್ಕೊಳಗಾದ ಬಸ್ ಹೊಸದಾಗಿ FC ನವೀಕರಿಸಿಕೊಂಡಿದ್ದು, ತಾಂತ್ರಿಕ ದೋಷದಿಂದ ಅಪಘಾತ ಸಂಭವಿಸಿರುವ ಸಾಧ್ಯತೆಯಿಲ್ಲವೆಂದು ಸ್ಪಷ್ಟಪಡಿಸಲಾಗಿದೆ. ಸುಮಾರು 14 ವರ್ಷಗಳಿಂದ ಸೇವೆಯಲ್ಲಿರುವ ಮತ್ತು ಇದೇ ಮಾರ್ಗದಲ್ಲಿ 3 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿರುವ ಚಾಲಕನ ಅತಿವೇಗ ಹಾಗೂ ಅಜಾಗರೂಕತೆ ಈ ದುರಂತಕ್ಕೆ ಕಾರಣವೆಂದು ನಿಗಮ ತಿಳಿಸಿದೆ. ಕೆ.ಎಸ್.ಆರ್.ಟಿ.ಸಿ. ನಿಗಮವು ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಭರಿಸಲು ಮುಂದಾಗಿದೆ.

ಸಂತಾಪ ಸೂಚನೆ

ನಿಗಮವು ಈ ಅಪಘಾತವನ್ನು ಅತ್ಯಂತ ದುಃಖಕರವೆಂದು ಪರಿಗಣಿಸಿ, ಮೃತರ ಆತ್ಮಗಳಿಗೆ ಶಾಂತಿ ದೊರೆಯಲಿ ಎಂದು ಪ್ರಾರ್ಥಿಸುತ್ತದೆ. ಅವರ ಕುಟುಂಬಗಳಿಗೆ ದುಃಖವನ್ನು ಸಹಿಸುವ ಶಕ್ತಿ ನೀಡಲೆಂದು ದೇವರಲ್ಲಿ ಬೇಡಿಕೊಳ್ಳುತ್ತದೆ. ಅಪಘಾತ ತಪ್ಪಿಸಲು ನಿರಂತರ ತರಬೇತಿ, ತಿಳುವಳಿಕೆ ಮತ್ತು ಜಾಗೃತ ಕಾರ್ಯಕ್ರಮಗಳನ್ನು ನಡೆಸುತ್ತಿದ್ದಾಗ್ಯೂ ಸಹ, ಈ ರೀತಿಯ ಅಪಘಾತಗಳು ಸಂಭವಿಸಿರುವುದು ಅತ್ಯಂತ ದುಃಖಕರ. ತಪ್ಪಿತಸ್ಥ ಚಾಲಕನ (ನಿಜಲಿಂಗಪ್ಪ ಚಲವಾದಿ) ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದೆಂದು ಅಕ್ರಂ ಪಾಷ ಭಾಆಸೇ, ವ್ಯವಸ್ಥಾಪಕ ನಿರ್ದೇಶಕರು, ಕೆ.ಎಸ್.ಆರ್.ಟಿ.ಸಿ. ಅವರು ತಿಳಿಸಿದ್ದಾರೆ.

You may also like

News

ವಾಣಿಜ್ಯ ಸಿಲಿಂಡರ್ ದರ ಏರಿಕೆ – ಕೇಂದ್ರದ ವಿರುದ್ಧ MLC ಐವನ್ ಡಿಸೋಜ ಆಕ್ರೋಶ

ರಾಜ್ಯಾದ್ಯಂತ ಪ್ರತಿಭಟನೆಯ ಎಚ್ಚರಿಕೆ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಯನ್ನು ₹991ಕ್ಕೆ ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ಕ್ರಮವು ಜನವಿರೋಧಿಯಾಗಿದ್ದು, ಇದನ್ನು ವಿಧಾನ ಪರಿಷತ್ ಸದಸ್ಯರಾದ ಐವನ್
News

ನೀರುಮಾರ್ಗ ಚರ್ಚ್‌ನಲ್ಲಿ ಸಂಭ್ರಮದ ‘ಸಮುದಾಯ ದಿನಾಚರಣೆ’ – ಇಂದು ಸಂಜೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಭೋಜನ

ಮಂಗಳೂರು ಧರ್ಮಕ್ಷೇತ್ರಕ್ಕೆ ಒಳಪಟ್ಟ ನೀರುಮಾರ್ಗದ ಸೈಂಟ್ ಜೋಸೆಫ್ ದಿ ವರ್ಕರ್ ಚರ್ಚ್‌ನಲ್ಲಿ ಇಂದು ‘ಸಮುದಾಯ ದಿನಾಚರಣೆ’ಯನ್ನು ಅತ್ಯಂತ ಸಡಗರದಿಂದ ಆಚರಿಸಲಾಗುತ್ತಿದೆ. ಈ ವಿಶೇಷ ದಿನದ ಅಂಗವಾಗಿ ಚರ್ಚ್

You cannot copy content of this page