July 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಪುತ್ತೂರಿನಲ್ಲಿ ಲಂಚ ಸ್ವೀಕರಿಸುತ್ತಿದ್ದ ಎಫ್.ಡಿ.ಎ. ಲೋಕಾಯುಕ್ತ ಬಲೆಗೆ – ತಹಶೀಲ್ದಾರ್ ಪರಾರಿ

ಪುತ್ತೂರು ತಾಲೂಕಿನ ಆಡಳಿತ ಸೌಧದಲ್ಲಿರುವ ತಹಶೀಲ್ದಾರ್ ಕಚೇರಿಯ ಭೂ ಸುಧಾರಣಾ ಶಾಖೆಯ ಎಫ್.ಡಿ.ಎ. ಸುನೀಲ್ ದೂರುದಾರರಿಂದ 12 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಮಂಗಳೂರು ಲೋಕಾಯುಕ್ತ ಪೊಲೀಸರ ಬಲೆಗೆ ಸಿಕ್ಕಿಬಿದ್ದಿದ್ದಾರೆ. ಇಂದು ಆಗಸ್ಟ್ 28ರಂದು ಗುರುವಾರ ನಡೆದ ಈ ದಾಳಿ ವೇಳೆ ಸುನೀಲ್‌ ರವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಈ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿ ಪುತ್ತೂರು ತಹಶೀಲ್ದಾರ್ ಕುಡಲಗಿ ಪರಾರಿಯಾಗಿದ್ದು, ಆತನಿಗಾಗಿ ಬಲೆ ಬೀಸಲಾಗಿದೆ.

ಪ್ರಕರಣದ ಹಿನ್ನೆಲೆ

ದೂರುದಾರರ ಚಿಕ್ಕಪ್ಪನವರಿಗೆ ಸೇರಿದ 65 ಸೆಂಟ್ಸ್ ಜಮೀನು ಅಕ್ರಮ ಸಕ್ರಮದನ್ವಯ ಮಂಜೂರಾಗಿದ್ದು, ನಂತರ ಅವರು ನೀಲುನಾಮ ಮೂಲಕ ದೂರುದಾರರಿಗೆ ಹಕ್ಕು ಬರೆಸಿಕೊಟ್ಟಿದ್ದರು. ಜಾಗವನ್ನು ಪರಭಾರೆ ಮಾಡಲು ತಹಶೀಲ್ದಾರ್ ನಿರಾಕ್ಷೇಪಣಾ ಪತ್ರ ಅವಶ್ಯಕವಾಗಿದ್ದರಿಂದ 2024ರ ಡಿಸೆಂಬ‌ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಅರ್ಜಿ ಬಾಕಿ ಇರುವುದರಿಂದ ವಿಚಾರಿಸಿದಾಗ, ಕೇಸ್ ವರ್ಕರ್ (ಎಫ್.ಡಿ.ಎ.) ಸುನೀಲ್ ತಹಶೀಲ್ದಾರರ ಸಹಿಗೆ ಲಂಚ ಅವಶ್ಯಕ ಎಂದು ಹೇಳಿ ಹಣ ಬೇಡಿಕೆ ಇಟ್ಟಿದ್ದರು.

ಲೋಕಾಯುಕ್ತ ಬಳ

ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆ ಸೂಚನೆಯಂತೆ ದಾಳಿ ನಡೆಸಿ ಸುನೀಲ್ ಲಂಚ ಸ್ವೀಕರಿಸುವ ವೇಳೆ ಬಲೆಗೆ ಬಿದ್ದರು. ತಹಶೀಲ್ದಾರ್ ಕುಡಲಗಿ ವಿರುದ್ಧವೂ ಪ್ರಕರಣ ದಾಖಲಾಗಿದ್ದು, ಅವರ ಪಾತ್ರದ ಕುರಿತು ತನಿಖೆ ನಡೆಯಲಿದೆ.

ಕಾರ್ಯಾಚರಣೆಯ ತಂಡದಲ್ಲಿ ಲೋಕಾಯುಕ್ತ ಎಸ್ಪಿ (ಪ್ರಭಾರ) ಕುಮಾರ್ ಚಂದ್ರರವರ ನೇತೃತ್ವದಲ್ಲಿ, ಡಿವೈಎಸ್ಪಿ ಡಾ. ಗಾನ ಪಿ. ಕುಮಾರ್, ಇನ್ಸ್‌ಪೆಕ್ಟರ್‌ಗಳು ಭಾರತಿ, ಚಂದ್ರಶೇಖರ್ ಕೆ.ಎನ್., ರವಿ ಪವರ್ ಹಾಗೂ ಸಿಬ್ಬಂದಿ ಮಹೇಶ್, ರಾಜಪ್ಪ, ರಾಧಾಕೃಷ್ಣ, ಅದರ್ಶ, ವಿವೇಕ್, ವಿನಾಯಕ, ಪ್ರವೀಣ್, ಗಂಗಣ್ಣ, ನಾಗಪ್ಪ, ಮಾಹದೇವ, ಪವಿತ್ರ, ದುಂಡಪ್ಪ, ರುದ್ರಗೌಡ, ರಾಜಶೇಖರ್ ಸೇರಿ ದಾಳಿ ನಡೆಸಿದ್ದಾರೆ.

You may also like

News

ಬಸ್ಸಿನಲ್ಲಿ ಕಾಲೇಜು ವಿದ್ಯಾರ್ಥಿನಿಯರಿಗೆ ಗುಪ್ತಾಂಗ ಪ್ರದರ್ಶಿಸಿ ಲೈಂಗಿಕ ಕಿರುಕುಳ – ಸೆಲೆನ ಬಸ್ ಕಂಡಕ್ಟರ್ ಬಂಧನ

ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿಯರನ್ನು ಗುರಿಯಾಗಿಸಿ ಕೊಂಡು ಅಸಭ್ಯವಾಗಿ ವರ್ತಿಸಿ, ಗುಪ್ತಾಂಗ ಪ್ರದರ್ಶನ ಮಾಡಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸೆಲೆನ ಬಸ್ ಕಂಡಕ್ಟರ್‌ನನ್ನು ಮಂಗಳೂರು
News

ದಾರುಸ್ಸಲಾಂ ದಶಮಾನೋತ್ಸವ ಹಾಗೂ ಪ್ರಥಮ ಸನದುದಾನ ಮಹಾಸಭೆ – ಭವ್ಯ ಸ್ವಾಗತ ಸಮಿತಿ ರಚನೆ

ಸ್ಥಳೀಯ ಸಂಸ್ಥೆಯಾದ ದಾರುಸ್ಸಲಾಂ ಸೆಂಟರ್‌ನ 10ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮ ಹಾಗೂ ಪ್ರಥಮ ಸನದುದಾನ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೃಹತ್ ಸ್ವಾಗತ ಸಮಿತಿಯನ್ನು ರಚಿಸಲಾಗಿದೆ. ಈ ಐತಿಹಾಸಿಕ ಕಾರ್ಯಕ್ರಮವು

You cannot copy content of this page