May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಫೋನ್ ಕರೆ ಮಾಡಿ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಗೊಳಿಸುವುದಾಗಿ ಬೆದರಿಕೆ – ಆರೋಪಿಯ ಬಂಧನ

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಸ್ಟ್ 29ರಂದು ಮಂಗಳವಾರ ರಾತ್ರಿ ಅನಾಮಿಕ ವ್ಯಕ್ತಿ ಫೋನ್ ಕರೆ ಮಾಡಿ ಟರ್ಮಿನಲ್ ಬಿಲ್ಡಿಂಗ್ ಅನ್ನು ಖಾಲಿ ಮಾಡಬೇಕು ಇಲ್ಲವಾದರೆ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಮಾಡುವುದಾಗಿ ಬೆದರಿಕೆ ಹಾಕಿದ್ದರು. ಈ ಬಗ್ಗೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಡ್ಯೂಟಿ ಟರ್ಮಿನಲ್ ಮ್ಯಾನೇಜರ್ ರವರು ಬಜಪೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆದರಿಕೆ ಕರೆ ಮಾಡಿದವನು ತಮಿಳುನಾಡು ರಾಜ್ಯದ ವೆಲ್ಲೂರು ಜಿಲ್ಲೆಯ ನಿವಾಸಿ 38 ವರ್ಷ ಪ್ರಾಯದ ಶಶಿಕುಮಾರ್ ಎಂದು ತಿಳಿದುಬಂದಿದ್ದು ಆತನನ್ನು ತಮಿಳುನಾಡಿನ ವೆಲ್ಲೂರ್ ನಲ್ಲಿ ವಶ ಪಡೆಯಲಾಗಿದೆ. ಈತನ ಮೇಲೆ ಮೊ.ನಂ 156/2025 ಕಲಂ:- 351(2), 351(3) BNS U/s:- 3(1)d Suppression of unlawful acts against safety of civil aviation act 1982 ಪ್ರಕರಣ ದಾಖಲಿಸಿಕೊಂಡು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.

ಆರೋಪಿಯನ್ನು ವಿಚಾರಣೆ ನಡೆಸಿದಾಗ ಈತನು ದೇಶದ ಎಲ್ಲಾ ವಿಮಾನ ನಿಲ್ದಾಣಗಳ ಮೊಬೈಲ್ ನಂಬ್ರವನ್ನು ಸಾಮಾಜಿಕ ಜಾಲತನದಲ್ಲಿ ಸರ್ಚ್ ಮಾಡಿ ಕರೆ ಮಾಡಿ ಬೆದರಿಕೆ ಹಾಕಿದ್ದು, ಅದೇ ತರ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾನಕ್ಕೂ ಸಹ ಫೋನ್ ಮಾಡಿ ಟರ್ಮಿನಲ್ ಬಿಲ್ಡಿಂಗ್ ಅನ್ನು ಖಾಲಿ ಮಾಡಲು ತಿಳಿಸಿ ಖಾಲಿ ಮಾಡದೆ ಹೋದರೆ ಟರ್ಮಿನಲ್ ಬಿಲ್ಡಿಂಗ್ ಅನ್ನು ಧ್ವಂಸ ಮಾಡುವುದಾಗಿ ಬೆದರಿಕೆ ಹಾಕಿರುವುದಾಗಿ ತಿಳಿಸಿರುತ್ತಾನೆ. ಆರೋಪಿಯನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದಾನೆ ಎಂದು ತಿಳಿದುಬಂದಿದೆ.

You may also like

News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ
News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು

You cannot copy content of this page