April 15, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮೊಂತಿ ಹಬ್ಬ- ಮೇರಿ ಮಾತೆಯ ಜನ್ಮ ದಿನವು ಕುಟುಂಬ ಏಕತೆಗೆ ಸಂತಸ-ಸಡಗರದ ಹಬ್ಬ

ಸೃಷ್ಟಿ ಸಂರಕ್ಷಣೆಗೆ ಕರೆ ನೀಡಿದ ಬಿಷಪ್ ಪೀಟರ್ ಪಾವ್ಲ್ ಸಲ್ಡಾನ್ಹಾ

ಇಂದು ಸೆಪ್ಟೆಂಬರ್ 8ರಂದು ಸೋಮವಾರ ಆಚರಿಸಲ್ಪಡುವ ಮೇರಿ ಮಾತೆಯ ಜನನದ ಹಬ್ಬದ ಅಂಗವಾಗಿ ಮಂಗಳೂರು ಧರ್ಮಕ್ಷೇತ್ರದ ಬಿಷಪ್ ಅತೀ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ದಾನ್ಹಾರವರು ವಿಶೇಷ ಸಂದೇಶ ನೀಡಿದ್ದಾರೆ. ”ಈ ದಿನ ಪುಟಾಣಿ ಮಕ್ಕಳು ಹೂವುಗಳನ್ನು ತಂದು, ಹೊಲಗದ್ದೆಗಳಲ್ಲಿ ಬೆಳೆದ ಹೊಸ ಬೆಳೆಯನ್ನು ದೇವರಿಗೆ ಅರ್ಪಿಸುತ್ತಾರೆ. ಹೊಸ ಬೆಳೆ, ಮೇರಿ ಮಾತೆಯ ಜನ್ಮ ದಿನ ಮತ್ತು ನಮ್ಮ ಮನೆಗಳ ಹೆಣ್ಣು ಮಕ್ಕಳು – ಈ ಮೂವರ ಆರೈಕೆ ಮಾಡುವುದು ದೇವರಿಂದ ಬಂದಿರುವ ವಿಶೇಷ ಆಹ್ವಾನವಾಗಿದೆ” ಎಂದು ಬಿಷಪ್ ತಿಳಿಸಿದ್ದಾರೆ.

“ಮಾತೆಯ ಜನ್ಮ ದಿನಾಚರಣೆಗೆ ನಾವು ನೀಡುವ ಗೌರವವು ನಮಗೆ ಮರಳಿ ಲಭಿಸುತ್ತದೆ. ಕುಟುಂಬದ ಹೆಣ್ಣು ಮಕ್ಕಳು ನಿಜವಾಗಿಯೂ ನಮ್ಮ ಕುಟುಂಬದ ಭಂಡಾರವಾಗಿದ್ದಾರೆ.” ಎಂದರು.

ಬಿಷಪ್ ತಮ್ಮ ಸಂದೇಶದಲ್ಲಿ “ಸೆಪ್ಟೆಂಬರ್ 1ರಿಂದ ಅಕ್ಟೋಬರ್ 4 ಸಂತ ಫ್ರಾನ್ಸಿಸ್ ಆಸಿಸಿ ಹಬ್ಬದ ತನಕ ಕಥೊಲಿಕ್ ಧರ್ಮ ಸಭೆಯು ‘ಸೃಷ್ಟಿಯ ಕಾಲ’ ವನ್ನು ಆಚರಿಸುತ್ತಿದೆ. ಈ ಹಿನ್ನಲೆಯಲ್ಲಿ ಮೇರಿ ಮಾತೆಯ ಜನ್ಮ ದಿನಾಚರಣೆ, ನಮ್ಮ ಸಂಸ್ಕೃತಿ ಮತ್ತು ಸಂಪ್ರದಾಯದಲ್ಲಿ ಹೊಸ ಬೆಳೆಗೆ, ಹೆಣ್ಣು ಮಕ್ಕಳಿಗೆ ಮತ್ತು ಕುಟುಂಬದ ಏಕತೆಗೆ ಹೆಚ್ಚಿನ ಮಹತ್ವ ನೀಡುತ್ತದೆ.

“ಸೃಷ್ಟಿಯ ಸಂರಕ್ಷಣೆಗಾಗಿ ಪ್ರಾರ್ಥಿಸೋಣ, ಪರಸ್ಪರ ಸೇವೆ ಮಾಡೋಣ, ಪ್ರೀತಿಯಿಂದ ಸೃಷ್ಟಿಯನ್ನು ಉಳಿಸೋಣ ಮತ್ತು ದೇವರಿಗೆ ಕೃತಜ್ಞತೆಯನ್ನು ಸಲ್ಲಿಸೋಣ” ಎಂದು ಬಿಷಪ್ ಡಾ. ಪೀಟರ್ ಪಾವ್ಲ್ ಸಲ್ದಾನ್ಹಾ ಕರೆ ನೀಡಿದರು.

You may also like

News

2026-27 ಶಾಲಾ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ – ಮೇ 29ರಿಂದ ತರಗತಿ ಆರಂಭ

2026-27ನೇ ಸಾಲಿನ ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಶೈಕ್ಷಣಿಕ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿದೆ.
News

ಮಗಳನ್ನೇ ಕೊಂದ ತಾಯಿ ನೇಣಿಗೆ ಶರಣು – ವೈಟ್‌ಫೀಲ್ಡ್‌ನಲ್ಲಿ ಕೌಟುಂಬಿಕ ದುರಂತ

ಸಿಲಿಕಾನ್ ಸಿಟಿಯ ವೈಟ್‌ಫೀಲ್ಡ್‌ನ ಇಮ್ಮಡಿಹಳ್ಳಿಯಲ್ಲಿ ಮರುಕಳಿಸದಂತಹ ದಾರುಣ ಘಟನೆಯೊಂದು ನಡೆದಿದೆ. ಮಾನಸಿಕ ಖಿನ್ನತೆಗೆ ಒಳಗಾಗಿದ್ದ ತಾಯಿಯೊಬ್ಬರು ತನ್ನ ಸ್ವಂತ ಮಗಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ಬಳಿಕ ತಾವೂ

You cannot copy content of this page