July 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಪ್ರತಿಯೊಂದು ಮನೆಗೂ ಸಿಸಿ ಕ್ಯಾಮರಾ – ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯ ಮುಂದಾಳತ್ವ

ಭಟ್ಕಳ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚಿನ ದಿನಗಳಲ್ಲಿ ಸಿಸಿ ಕ್ಯಾಮರಾಗಳ ಕೊರತೆ ತೀವ್ರವಾಗಿ ಕಂಡುಬರುತ್ತಿತ್ತು. ಇದರಿಂದ ಸ್ವತ್ತಿನ ಅಪರಾಧಗಳ ಪತ್ತೆ ಹಚ್ಚುವಲ್ಲಿ ದೊಡ್ಡ ಮಟ್ಟದ ಹಿನ್ನಡೆ ಉಂಟಾಗುತ್ತಿತ್ತು. ಕಳ್ಳತನ, ದರೋಡೆ, ಸುಲಿಗೆಯಂತಹ ಪ್ರಕರಣಗಳ ತನಿಖೆಗೆ ಸಾಕಷ್ಟು ಅಡ್ಡಿ ಉಂಟಾಗಿ, ಅಪರಾಧಿಗಳನ್ನು ಗುರುತಿಸುವಲ್ಲಿ ಪೊಲೀಸ್ ಇಲಾಖೆಗೆ ತೊಂದರೆಯಾಗುತ್ತಿತ್ತು.

ಪ್ರತಿ ಬೀದಿ ಮತ್ತು ಮನೆಗಳಲ್ಲಿ ಕಣ್ಣಿನಂತೆ ಕೆಲಸ ಮಾಡುವ ಸಿಸಿ ಕ್ಯಾಮರಾಗಳು

ಈ ಹಿನ್ನಲೆಯಲ್ಲಿ, “ಪ್ರತಿ ಮನೆ ಮನೆಗೆ ಸಿಸಿ ಕ್ಯಾಮರಾ” ಎಂಬ ಕಾರ್ಯಕ್ರಮವನ್ನು ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯ ಆಶ್ರಯದಲ್ಲಿ ಪ್ರಾರಂಭಿಸಲಾಗಿದೆ. ಸಿಸಿ ಕ್ಯಾಮರಾಗಳ ಅಳವಡಿಕೆ ಮೂಲಕ ಅಪರಾಧಗಳನ್ನು ತಡೆಯಲು ಹಾಗೂ ನಡೆದ ಅಪರಾಧಗಳ ಪತ್ತೆ ಹಚ್ಚಲು ಹೆಚ್ಚಿನ ನೆರವಾಗಲಿದೆ. ಪ್ರತಿ ಬೀದಿ ಮತ್ತು ಮನೆಗಳಲ್ಲಿ ಕಣ್ಣಿನಂತೆ ಕೆಲಸ ಮಾಡುವ ಸಿಸಿ ಕ್ಯಾಮರಾಗಳು ಕಾನೂನು ಸುವ್ಯವಸ್ಥೆ ಕಾಪಾಡಲು ಪರಿಣಾಮಕಾರಿ ಆಯುಧವಾಗಲಿವೆ.

ಪ್ರತಿ ಮನೆ ಮನೆಗೆ ಸಿಸಿ ಕ್ಯಾಮರಾ” ಯೋಜನೆಗೆ ಚಾಲನೆ

ಈ ಕಾರ್ಯಕ್ರಮವನ್ನು ಶ್ರೀ ಚಿತ್ರಾಪುರ ಮಠದ ಆವರಣದಲ್ಲಿ ಆಯೋಜಿಸಲಾಗಿದ್ದು, ಅದನ್ನು ಶೈಕ್ಷಣಿಕ ಸಲಹೆಗಾರರಾದ ಡಾ. ರವೀಂದ್ರ ಕಾಯ್ಕಿಣಿ ಹಾಗೂ ಜಾಲಿ ಪಟ್ಟಣ ಪಂಚಾಯತ ಮುಖ್ಯಾಧಿಕಾರಿಗಳಾದ ಎಂ. ಮಂಜಪ್ಪ ಹಸಿರು ನಿಶಾನೆ ತೋರಿಸುವುದರ ಮೂಲಕ ಉದ್ಘಾಟಿಸಿದರು.

ಪೋಲೀಸರು ಹೇಳುವಂತೆ, ಸಿಸಿ ಕ್ಯಾಮರಾ ಅಳವಡಿಸಿದ ಮನೆಗಳಲ್ಲಿ ಕಳ್ಳತನ ಅಥವಾ ಅಪರಾಧ ಸಂಭವಿಸುವ ಸಾಧ್ಯತೆ ಕಡಿಮೆಯಾಗುತ್ತದೆ. ಜೊತೆಗೆ, ತನಿಖೆಯ ಸಂದರ್ಭದಲ್ಲಿ ವಿಡಿಯೋ ಸಾಕ್ಷಿಗಳು ದೊರೆತು ಅಪರಾಧಿಗಳನ್ನು ತಕ್ಷಣ ಪತ್ತೆ ಹಚ್ಚುವಲ್ಲಿ ಸಹಾಯಕವಾಗುತ್ತದೆ.

ಭಟ್ಕಳ ಗ್ರಾಮೀಣ ಪಿ.ಐ. ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮಕ್ಕೆ ಸ್ಥಳೀಯ ನಾಗರಿಕರು ಸಹಕಾರ ನೀಡಿದ್ದು, ಭವಿಷ್ಯದಲ್ಲಿ ಭಟ್ಕಳ ಗ್ರಾಮೀಣ ವ್ಯಾಪ್ತಿಯಲ್ಲಿ ಸಿಸಿ ಕ್ಯಾಮರಾಗಳ ಅಳವಡಿಕೆ ವೇಗ ಪಡೆಯುವ ನಿರೀಕ್ಷೆಯಿದೆ.

You may also like

News

ಬಸ್ಸಿನಲ್ಲಿ ಕಾಲೇಜು ವಿದ್ಯಾರ್ಥಿನಿಯರಿಗೆ ಗುಪ್ತಾಂಗ ಪ್ರದರ್ಶಿಸಿ ಲೈಂಗಿಕ ಕಿರುಕುಳ – ಸೆಲೆನ ಬಸ್ ಕಂಡಕ್ಟರ್ ಬಂಧನ

ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿಯರನ್ನು ಗುರಿಯಾಗಿಸಿ ಕೊಂಡು ಅಸಭ್ಯವಾಗಿ ವರ್ತಿಸಿ, ಗುಪ್ತಾಂಗ ಪ್ರದರ್ಶನ ಮಾಡಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸೆಲೆನ ಬಸ್ ಕಂಡಕ್ಟರ್‌ನನ್ನು ಮಂಗಳೂರು
News

ದಾರುಸ್ಸಲಾಂ ದಶಮಾನೋತ್ಸವ ಹಾಗೂ ಪ್ರಥಮ ಸನದುದಾನ ಮಹಾಸಭೆ – ಭವ್ಯ ಸ್ವಾಗತ ಸಮಿತಿ ರಚನೆ

ಸ್ಥಳೀಯ ಸಂಸ್ಥೆಯಾದ ದಾರುಸ್ಸಲಾಂ ಸೆಂಟರ್‌ನ 10ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮ ಹಾಗೂ ಪ್ರಥಮ ಸನದುದಾನ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೃಹತ್ ಸ್ವಾಗತ ಸಮಿತಿಯನ್ನು ರಚಿಸಲಾಗಿದೆ. ಈ ಐತಿಹಾಸಿಕ ಕಾರ್ಯಕ್ರಮವು

You cannot copy content of this page