August 31, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಪೆನ್ನಿನ ವಿಚಾರಕ್ಕೆ ಗಲಾಟೆ – ಕಣ್ಣು ಗುಡ್ಡೆಯನ್ನೇ ಕಳೆದುಕೊಂಡ ವಿದ್ಯಾರ್ಥಿ

ಪೆನ್ನಿನ ವಿಚಾರಕ್ಕೆ ಶಾಲೆಯಲ್ಲಿ ಇಬ್ಬರು ವಿದ್ಯಾರ್ಥಿಗಳ ನಡುವೆ  ಗಲಾಟೆಯಾಗಿ ಅದರಲ್ಲಿ ಓರ್ವ ವಿದ್ಯಾರ್ಥಿ ಕಣ್ಣುಗುಡ್ಡೆಯನ್ನೇ ಕಳೆದುಕೊಂಡಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಒಂದನೇ ತರಗತಿ ವಿದ್ಯಾರ್ಥಿಗೆ ಐದನೇ ತರಗತಿ ವಿದ್ಯಾರ್ಥಿ ಪೆನ್ ನೀಡಿದ್ದ. ಅದನ್ನು ವಾಪಾಸ್ ಕೇಳಿದ್ದಕ್ಕೆ ಇಬ್ಬರ ನಡುವೆ ಗಲಾಟೆಯಾಗಿದೆ. ಈ ವೇಳೆ 1ನೇ ತರಗತಿ ವಿದ್ಯಾರ್ಥಿ ಕಟ್ಟಿಗೆಯಿಂದ 5ನೇ ತರಗತಿ ವಿದ್ಯಾರ್ಥಿಯ ಬಲಗಣ್ಣಿಗೆ ಇರಿದಿದ್ದಾನೆ.

ಇದರಿಂದ ತೀವ್ರ ಗಾಯಗೊಂಡಿರುವ 5ನೇ ತರಗತಿ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ದಾಖಲಿಸಿದ್ದು, ಇದೀಗ ವೈದ್ಯರು ಕಣ್ಣುಗುಡ್ಡೆಯನ್ನೇ ತೆಗೆದಿದ್ದಾರೆ. ಕಣ್ಣು ಕಳೆದುಕೊಂಡ ಈ ವಿದ್ಯಾರ್ಥಿಗೆ ಸರಕಾರ ಪರಿಹಾರ ನೀಡಬೇಕೆಂದು ಮನವಿ ಮಾಡಲಾಗಿದೆ.

You may also like

News

ಪುತ್ತೂರಿನಲ್ಲಿ ಸೆಪ್ಟೆಂಬರ್ 2 ರಂದು KSRTC ನೌಕರರ ಕೂಟದ ನೂತನ ಸಂಘಟನೆ ಪ್ರಾರಂಭೋತ್ಸವ

ಪದೋನ್ನತಿ ಪಡೆದ ಜೀವನ್ ಸಂತೋಷ್ ಮಾರ್ಟಿಸ್ ಅವರಿಗೆ ಸನ್ಮಾನ ಪುತ್ತೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ (ರಿ.) ಇದರ ಪುತ್ತೂರು ವಿಭಾಗದ ನೂತನ ಕೂಟ
News

ಸೆಪ್ಟೆಂಬರ್ 8ರಂದು ಮಾತೆ ಮರಿಯಳ ಜನ್ಮದಿನದ ಹಬ್ಬಕ್ಕೆ ಸಾರ್ವತ್ರಿಕ ರಜೆ ನೀಡಲು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರಿಗೆ ಮನವಿ

ಬೈಂದೂರು: ಸೆಪ್ಟೆಂಬರ್ 8ರಂದು ಆಚರಿಸಲಾಗುವ ಕ್ರೈಸ್ತ ಸಮುದಾಯದ ಪ್ರಮುಖ ಹಬ್ಬವಾದ ತೆನೆ ಹಬ್ಬ ಹಾಗೂ ಮಾತೆ ಮರಿಯಳ ಜನ್ಮದಿನದ ಹಬ್ಬದ ಅಂಗವಾಗಿ ಸಾರ್ವತ್ರಿಕ ರಜೆ ಘೋಷಿಸಬೇಕು ಎಂದು

You cannot copy content of this page