February 18, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ರಾಷ್ಟ್ರ ಮಟ್ಟದ ಮಿಸ್ & ಮಿಸೆಸ್ ಇಂಡಿಯಾ ಅಸ್ಟ್ರಲ್ ಸ್ಪರ್ಧೆಯಲ್ಲಿ ಮಂಗಳೂರಿಗರ ಮೆರುಗು

ಎಲ್ಲಾ ವಿಭಾಗಗಳಲ್ಲಿ ಪ್ರಶಸ್ತಿ ಪಡೆದು ಮಂಗಳೂರಿಗರಿಗೆ ಹೆಮ್ಮೆ ತಂದ ಪ್ರತಿಭೆಗಳು

ರಾಷ್ಟ್ರೀಯ ಮಿಸ್ & ಮಿಸೆಸ್ ಇಂಡಿಯಾ ಅಸ್ಟ್ರಲ್ ಪೇಜೆಂಟ್ಸ್‌ 2025ರ 9ನೇ ಆವೃತ್ತಿಯ ಗ್ಯ್ರಾಂಡ್‌ ಫಿನಾಲೆ ಬೆಂಗಳೂರಿನಲ್ಲಿ ಇತ್ತೀಚೆಗೆ ಅದ್ಧೂರಿಯಾಗಿ ಜರಗಿದ್ದು, ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ ಮಂಗಳೂರಿನ ವನಿತೆಯರು, ಯುವತಿಯರು ಹಾಗೂ ಮಕ್ಕಳು ಬಹುತೇಕ ಎಲ್ಲಾ ವಿಭಾಗಗಳಲ್ಲಿ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿರುವುದು ಮಂಗಳೂರಿಗರ ಹೆಮ್ಮೆಗೆ ಕಾರಣವಾಗಿದೆ.

ಬೆಂಗಳೂರಿನ ಕಿಂಗ್ಸ್‌ ಮೆಡೋಸ್‌ನಲ್ಲಿ ನಡೆದ ಈ ಸ್ಪರ್ಧೆ ಸೆಪ್ಟೆಂಬರ್‌ 4ರಿಂದ 6ರವರೆಗೆ ಮೂರು ದಿನಗಳ ಕಾಲ ವಿವಿಧ ರೀತಿಯ ಚಟುವಟಿಕೆಗಳ ಮೂಲಕ ನಡೆದು, ಸೆಪ್ಟೆಂಬರ್  6ರ ಶನಿವಾರ ಸಂಜೆ ಗ್ರ್ಯಾಂಡ್‌ ಫಿನಾಲೆ ಆಯೋಜಿಸಲಾಯಿತು.

ಪ್ರಿ ಜೂನಿಯರ್ ವಿಭಾಗದಲ್ಲಿ ಸನ್ವಿತಾ ಡಿಸೋಜಾ ಪ್ರಿ ಜೂನಿಯರ್ ಮಿಸ್ ಇಂಡಿಯಾ ಕಿರೀಟವನ್ನು ಪಡೆದು ಮಂಗಳೂರಿಗೆ ಕೀರ್ತಿ ತಂದರು. ಪ್ರತಿಭಾ ಸೌನ್ಶಿಮಠ್ ಅವರ ನೇತೃತ್ವದಲ್ಲಿ ಆಯೋಜಿಸಲಾದ ಈ ಸೌಂದರ್ಯ ಸ್ಪರ್ಧೆಯಲ್ಲಿ ಪ್ರಶಸ್ತಿ ಗೆದ್ದ ಮಂಗಳೂರಿನ ಸ್ಪರ್ಧಿಗಳು, ನಗರದ ಪಾತ್ ವೇ ಮಾಡೆಲಿಂಗ್‌ ಸ್ಟುಡಿಯೋ ದೀಪಕ್ ಗಂಗೂಲಿ ಅವರಿಂದ ತರಬೇತಿ ಪಡೆದವರು.

ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು ನಿರ್ದೇಶಕರೂ ಆದ ಮರ್ಸಿ ವೀಣಾ ಡಿಸೋಜಾ ಸೇರಿದಂತೆ ಹಲವಾರು ಗಣ್ಯರು ಹಾಜರಿದ್ದರು.

You may also like

News

ಅಧಿಕಾರಕ್ಕಿಂತ ಸಮುದಾಯದ ಹಿತವೇ ಮುಖ್ಯ – MLC ಐವನ್ ಡಿಸೋಜ ಕಾರ್ಯವೈಖರಿಗೆ ಹಿರಿಯ ಪತ್ರಕರ್ತ ಹ್ಯಾರಿ ಡಿಸೋಜ ಬೆಂಗಳೂರು ಮೆಚ್ಚುಗೆ

ಬೆಂಗಳೂರು: ರಾಜಕಾರಣಿಗಳು ಸಾಮಾನ್ಯವಾಗಿ ಅಧಿಕಾರವನ್ನು ಉಳಿಸಿಕೊಳ್ಳಲು ಸ್ವಾರ್ಥದ ರಾಜಕಾರಣ ಮಾಡುವುದು ಸಹಜ. ಆದರೆ, ಫೆಬ್ರವರಿ 17ರಂದು ಮಂಗಳವಾರ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ
News

ಮೆಸ್ಕಾಂ ಗ್ರಾಹಕರ ಸಲಹಾ ಸಮಿತಿ ಸದಸ್ಯರಾಗಿ ಸ್ಟೀವನ್ ಡಿಸೋಜ ಆಯ್ಕೆ

ಮಂಗಳೂರು ವಿದ್ಯುಚ್ಚಕ್ತಿ ಸರಬರಾಜು ಕಂಪನಿ ನಿಯಮಿತ (ಮೆಸ್ಕಾಂ) ವ್ಯಾಪ್ತಿಯ ವಿದ್ಯುತ್ ಸಂಬಂಧಿತ ಸಮಸ್ಯೆಗಳನ್ನು ಸ್ಥಳೀಯ ಮಟ್ಟದಲ್ಲಿ ಚರ್ಚಿಸಿ, ಪರಿಣಾಮಕಾರಿಯಾಗಿ ಪರಿಹರಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರವು ಮಹತ್ವದ ಹೆಜ್ಜೆ

You cannot copy content of this page