November 8, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಅಕ್ರಮ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ನಾಲ್ವರ ಬಂಧನ – ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲು

ಬಂಟ್ವಾಳ ತಾಲೂಕು ಅಳಿಕೆ ಗ್ರಾಮದ ಎರುಂಬು ರಸ್ತೆಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ನಾಲ್ವರನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಸೆಪ್ಟೆಂಬರ್ 15ರಂದು ರಾತ್ರಿ ಪೆಟ್ರೋಲಿಂಗ್ ವೇಳೆ ಬಾತ್ಮಿದಾರರಿಂದ ಬಂದ ಖಚಿತ ಮಾಹಿತಿಯ ಆಧಾರದ ಮೇಲೆ ವಿಟ್ಲ ಠಾಣೆಯ ಪೊಲೀಸ್ ಉಪನಿರೀಕ್ಷಕ ರಾಮಕೃಷ್ಣ ಹಾಗೂ ಸಿಬ್ಬಂದಿ ದಾಳಿ ನಡೆಸಿದರು. ಈ ವೇಳೆ ಸಂಶಯಾಸ್ಪದವಾಗಿ ನಿಂತಿದ್ದ ಮೂವರನ್ನು ವಿಚಾರಿಸಿದಾಗ, ಅವರು ಗಾಂಜಾ ಮಾರಾಟ ಮಾಡಲು ಬಂದಿರುವುದು ಬಹಿರಂಗವಾಯಿತು.

ಬಂಧಿತರಾದವರು — 23 ವರ್ಷ ಪ್ರಾಯದ ಸನತ್‌ ಕುಮಾರ್‌, 23 ವರ್ಷ ಪ್ರಾಯದ ಮಹಮ್ಮದ್‌ ರಾಝಿಕ್‌ ಹಾಗೂ 23 ವರ್ಷ ಪ್ರಾಯದ ಚೇತನ್‌, ಮಂಗಳಪದವು, ವಿಟ್ಲ ಕಸಬಾ ಪೊಲೀಸರು ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ 6.27 ಗ್ರಾಂ ಗಾಂಜಾ, ಮೂರು ಮೊಬೈಲ್‌ ಫೋನ್‌ಗಳು, ಒಂದು ಸಣ್ಣ ಚೂರಿ ಹಾಗೂ ಒಂದು ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿದ್ದಾರೆ.

ಈ ಸಂಬಂಧ ವಿಟ್ಲ ಠಾಣೆಯಲ್ಲಿ ಅಕ್ರ.126/2025, ಕಲಂ 8(b), 20(b)(ii)(A) NDPS Act ಮತ್ತು 3(5) BNS 2023ರಂತೆ ಪ್ರಕರಣ ದಾಖಲಿಸಲಾಗಿದೆ. ತನಿಖೆ ಮುಂದುವರಿಸಿರುವ ಪೊಲೀಸರು ಮತ್ತೊಬ್ಬ ಆರೋಪಿಯಾದ 23 ವರ್ಷ ಪ್ರಾಯದ ಧ್ಯಾನ್ ಕರ್ಕೆರ, ಎರ್ಮೆ ಮಜಲು ನಿವಾಸಿಯನ್ನು ಸಹ ವಶಕ್ಕೆ ಪಡೆದಿದ್ದಾರೆ.

You may also like

News

ಮಾಣಿ ಗ್ರಾಮದಲ್ಲಿ ಹಳೆ ಮನೆ ದುರಸ್ತಿ ಪರವಾನಗಿ ಪಡೆದು ಸರಕಾರಿ ಜಮೀನಿನ ಮೇಲೆ ಅಕ್ರಮವಾಗಿ ನಿರ್ಮಿಸಿದ ಐಶಾರಾಮಿ ಬಂಗ್ಲೆ

ಯಾವುದೇ ದಾಖಲೆಗಳಿಲ್ಲದೆ ಸರಕಾರಕ್ಕೆ ವಂಚನೆ ಮಾಡಿದ್ದನ್ನು ಬಯಲಿಗೆಳೆದ ಸಾಮಾಜಿಕ ಕಾರ್ಯಕರ್ತ ಅತಿಕ್ರಮಿತ ಕಟ್ಟಡ ಕೂಡಲೇ ತೆರವುಗೊಳಿಸಲು ಲೂಸಿಯಾ ಮೆಟಿಲ್ಡಾ ಪಿಂಟೊರವರಿಗೆ ಬಂಟ್ವಾಳ ತಹಶೀಲ್ದಾರ್ ನೋಟಿಸ್ ಜಾರಿ ಮಾಣಿ
News

ನಕಲಿ ದಾಖಲೆ ಪ್ರಕರಣದಲ್ಲಿ ಆರೋಪಿ ಅಬ್ದುಲ್ ಹಾಶೀಮ್ ಬಂಧನ

ನಕಲಿ ದಾಖಲೆ ಸೃಷ್ಟಿಸಿ ನ್ಯಾಯಾಲಯವನ್ನು ವಂಚಿಸಿದ ಭೂಪ ಪುತ್ತೂರು ತಾಲೂಕಿನ ಪಡುವನ್ನೂರು ಗ್ರಾಮದ 34 ವರ್ಷ ಪ್ರಾಯದ ಅಬ್ದುಲ್ ಹಾಶೀಮ್  ಎಂಬಾತನನ್ನು ಉಪ್ಪಿನಂಗಡಿ ಪೊಲೀಸರು ನವೆಂಬರ್ 6ರಂದು

You cannot copy content of this page