August 30, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಾಣಿ–ಸಂಪಾಜೆ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಶೀಘ್ರ ಪ್ರಾರಂಭಕ್ಕೆ ಶಾಸಕ ಅಶೋಕ್ ರೈ ಮನವಿ

ಮಾಣಿ–ಸಂಪಾಜೆ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ (NH 275) ಕಾಮಗಾರಿ ಶೀಘ್ರ ಪ್ರಾರಂಭವಾಗುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾದೇಶಿಕ ಅಧಿಕಾರಿ ನರೇಂದ್ರ ಶರ್ಮರವರಿಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ ಸಲ್ಲಿಸಿದ್ದಾರೆ.

ಸೆಪ್ಟೆಂಬರ್ 17ರಂದು ಬುಧವಾರ ಬೆಂಗಳೂರಿನ ರಾಷ್ಟ್ರೀಯ ಹೆದ್ದಾರಿ ಪ್ರಾದೇಶಿಕ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಶಾಸಕರು, “ಮಾಣಿಯಿಂದ ಸಂಪಾಜೆ ತನಕ ಚತುಷ್ಪಥ ಹೆದ್ದಾರಿ ಕಾಮಗಾರಿ ಪ್ರಾರಂಭವಾದರೆ ಈ ಭಾಗದ ಅಭಿವೃದ್ಧಿಗೆ ದೊಡ್ಡ ಮುನ್ನಡೆಯಾಗುತ್ತದೆ. ಈ ಹಿಂದೆಲೇ ಕಾಮಗಾರಿ ಆರಂಭವಾಗಬೇಕಿತ್ತು. ಈಗ ರಾಜ್ಯ ಸರ್ಕಾರವು 3.10 ಕೋಟಿ ರೂಪಾಯಿ ಅನುದಾನವನ್ನು ಬಿಡುಗಡೆಮಾಡಿ ಡಿಪಿಆರ್ ಸಿದ್ಧಪಡಿಸಿದೆ. ಆದ್ದರಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ವಾರ್ಷಿಕ ಯೋಜನೆಗೆ ಸೇರ್ಪಡೆ ಮಾಡಿ ಶೀಘ್ರ ಕಾಮಗಾರಿ ಆರಂಭಿಸಬೇಕು” ಎಂದು ಹೇಳಿದರು.

“ಕಾಮಗಾರಿ ವಿಳಂಬವಾಗಬಾರದು. ಆದಷ್ಟು ಬೇಗ ಕಾಮಗಾರಿ ಆರಂಭವಾಗಿ ಈ ಭಾಗದ ಜನರ ಬಹುಕಾಲದ ಕನಸು ನನಸಾಗಲಿ”ಎಂದು ಪುತ್ತೂರು ಶಾಸಕ ಅಶೋಕ್ ರೈ ಆಶಾಭಾವನೆ ವ್ಯಕ್ತಪಡಿಸಿದರು.

You may also like

News

ಪುತ್ತೂರು ಚಲೋಗೆ ಪೊಲೀಸ್ ಸರ್ಪಗಾವಲು – ಹಿರಿಯ ಅಧಿಕಾರಿಗಳು ಸೇರಿ ಭಾರೀ ಬಂದೋಬಸ್ತ್

ನಗರದಲ್ಲಿ ಇಂದು ಪೊಲೀಸ್ ಪಥಸಂಚಲನ ಪುತ್ತೂರು: ಆಗಸ್ಟ್ 31ರಂದು ಸೋಮವಾರ ನಡೆಯಲಿರುವ ಪುತ್ತೂರು ಚಲೋ ಕಾರ್ಯಕ್ರಮಕ್ಕೆ ಷರತ್ತುಬದ್ಧ ಅನುಮತಿಯನ್ನು ಪೊಲೀಸ್ ಇಲಾಖೆಯಿಂದ ನೀಡಲಾಗಿದೆ. ಕಾರ್ಯಕ್ರಮದ ಹಿನ್ನೆಲೆಯಲ್ಲಿ ಕಾನೂನು
News

ಧರ್ಮಸ್ಥಳದಲ್ಲಿ ‘ಪುನರ್ವಸು’ ಅಂತಾರಾಷ್ಟ್ರೀಯ ಸಮಾವೇಶಕ್ಕೆ ಚಾಲನೆ

ಆಯುರ್ವೇದದಿಂದ ಪಂಚೇಂದ್ರಿಯಗಳ ಬಲವರ್ಧನೆ, ಆರೋಗ್ಯಭಾಗ್ಯ ಸಾಧ್ಯ – ವೈದ್ಯ ಮನೀಷಾ ಕೋಟೆಕಾರ್ ಉಜಿರೆ: ಸಾವಿರಾರು ವರ್ಷಗಳ ಪಾರಂಪರಿಕ ಪರಂಪರೆಯನ್ನು ಹೊಂದಿರುವ ಆಯುರ್ವೇದ ಪದ್ಧತಿಯ ಮೂಲಕ ದೇಹದ ಪಂಚೇಂದ್ರಿಯಗಳನ್ನು

You cannot copy content of this page