August 30, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕಾಜೂರು ಆಡಳಿತ ಮಂಡಳಿಗೆ ನೂತನ ಪದಾಧಿಕಾರಿಗಳ ಆಯ್ಕೆ

ಮೂರನೇ ಅವಧಿಗೆ ಅಧ್ಯಕ್ಷರಾಗಿ ಕೆ.ಯು. ಇಬ್ರಾಹಿಂ, ಕಾರ್ಯದರ್ಶಿಯಾಗಿ ಜೆ.ಹೆಚ್. ಅಬೂಬಕ್ಕರ್  ಸಿದ್ದೀಕ್

ರಹ್ಮಾನಿಯಾ ಜುಮ್ಮಾ ಮಸ್ಜಿದ್ ಹಾಗೂ‌ ದರ್ಗಾ ಶರೀಫ್ ಕಾಜೂರು ಇದರ 2025-28 ಸಾಲಿನ ಅದ್ಯಕ್ಷರಾಗಿ ಕೆ.ಯು. ಇಬ್ರಾಹಿಂ, ಉಪಾದ್ಯಕ್ಷರಾಗಿ ಮುಹಮ್ಮದ್ ಬಶೀರ್ ಅಹ್ಸನಿ, ಪ್ರಧಾನ ಕಾರ್ಯದರ್ಶಿಯಾಗಿ ಜೆ.ಹೆಚ್. ಅಬೂಬಕ್ಕರ್ ಸಿದ್ದೀಕ್ ಹಾಗೂ ಕೋಶಾಧಿಕಾರಿಯಾಗಿ ಡಿ.ವೈ. ಉಮರ್ ಕುಕ್ಕಾವು ಇವರು ಆಯ್ಕೆಯಾಗಿದ್ದಾರೆ.

ಕಾರ್ಯಕಾರಿ ಸಮಿತಿ ನಿರ್ದೇಶಕರುಗಳಾಗಿ ಅಬ್ದುಲ್ ಸಲೀಂ, ಕೆ.ಯು. ಹನೀಫ್, ಬದ್ರುದ್ದೀನ್ ಹೆಚ್., ಅಬ್ದುಲ್ ಹಕೀಂ ಕೆ.ಕೆ., ಕೆ.ಯು. ಮುಹಮ್ಮದ್ ಸಖಾಫಿ, ಶರೀಫ್ ಸ‌ಅದಿ ಮತ್ತು ಯಾಕೂಬ್ ಎನ್. ಎಂ. ನಿರ್ದೇಶಕರುಗಳಾಗಿ ಆಯ್ಕೆಯಾಗಿದ್ದಾರೆ. ವಕ್ಫ್ ನಿಯಮಾವಳಿಯಂತೆ ಇತ್ತೀಚೆಗೆ ಮತದಾನದ ಮೂಲಕ 11 ಮಂದಿಯ ಆಯ್ಕೆ ನಡೆದಿತ್ತು. ಚುನಾಯಿತ ಪ್ರತಿನಿಧಿಗಳು ಸೆಪ್ಟೆಂಬರ್ 17ರಂದು ಬುಧವಾರ ಸಭೆ ಸೇರಿ ನೂತನ ಪದಾಧಿಕಾರಿಗಳನ್ನು ಆಯ್ಕೆಗೊಳಿಸಿದರು. ಅಧ್ಯಕ್ಷತೆಗೆ ನಡೆದ ಗುಪ್ತ ಮತದಾನದಲ್ಲಿ ಬಶೀರ್ ಅಹ್ಸನಿ ಮತ್ತು ಕೆ.ಯು. ಇಬ್ರಾಹಿಂರವರು ಸ್ಪರ್ಧಿಸಿ ಮತದಾನದ ವೇಳೆ ಕೆ.ಯು. ಇಬ್ರಾಹಿಂ ಅವರು 6 ಮತಗಳು ಮತ್ತು ಬಶೀರ್ ಅಹ್ಸನಿ ಅವರು 5 ಮತಗಳನ್ನು ಪಡೆದರು.

ಸಯ್ಯಿದ್ ಕಾಜೂರು ತಂಙಳ್ ರವರು ಸಭೆಯ ಅಧ್ಯಕ್ಷತೆ ವಹಿಸಿದ್ದರು. ಚುನಾವಣಾ ವೀಕ್ಷಕರಾಗಿ ಮತ್ತು ಚುನಾವಣಾಧಿಕಾರಿಯಾಗಿ ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಅಧಿಕಾರಿ ಅಬೂಬಕ್ಕರ್ ಹಾಜಿ ಮಂಗಳೂರು ಸಬೆ ನಡೆಸಿಕೊಟ್ಟರು.

You may also like

News

ಪುತ್ತೂರು ಚಲೋಗೆ ಪೊಲೀಸ್ ಸರ್ಪಗಾವಲು – ಹಿರಿಯ ಅಧಿಕಾರಿಗಳು ಸೇರಿ ಭಾರೀ ಬಂದೋಬಸ್ತ್

ನಗರದಲ್ಲಿ ಇಂದು ಪೊಲೀಸ್ ಪಥಸಂಚಲನ ಪುತ್ತೂರು: ಆಗಸ್ಟ್ 31ರಂದು ಸೋಮವಾರ ನಡೆಯಲಿರುವ ಪುತ್ತೂರು ಚಲೋ ಕಾರ್ಯಕ್ರಮಕ್ಕೆ ಷರತ್ತುಬದ್ಧ ಅನುಮತಿಯನ್ನು ಪೊಲೀಸ್ ಇಲಾಖೆಯಿಂದ ನೀಡಲಾಗಿದೆ. ಕಾರ್ಯಕ್ರಮದ ಹಿನ್ನೆಲೆಯಲ್ಲಿ ಕಾನೂನು
News

ಧರ್ಮಸ್ಥಳದಲ್ಲಿ ‘ಪುನರ್ವಸು’ ಅಂತಾರಾಷ್ಟ್ರೀಯ ಸಮಾವೇಶಕ್ಕೆ ಚಾಲನೆ

ಆಯುರ್ವೇದದಿಂದ ಪಂಚೇಂದ್ರಿಯಗಳ ಬಲವರ್ಧನೆ, ಆರೋಗ್ಯಭಾಗ್ಯ ಸಾಧ್ಯ – ವೈದ್ಯ ಮನೀಷಾ ಕೋಟೆಕಾರ್ ಉಜಿರೆ: ಸಾವಿರಾರು ವರ್ಷಗಳ ಪಾರಂಪರಿಕ ಪರಂಪರೆಯನ್ನು ಹೊಂದಿರುವ ಆಯುರ್ವೇದ ಪದ್ಧತಿಯ ಮೂಲಕ ದೇಹದ ಪಂಚೇಂದ್ರಿಯಗಳನ್ನು

You cannot copy content of this page