May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕೆಲರಾಯ್ ಚರ್ಚ್‌ನಲ್ಲಿ ಕ್ರೈಸ್ತ ಸಮುದಾಯದ ಭವ್ಯ “ಲಾಯಿಕೋತ್ಸವ್ 2025” – ಕ್ರೈಸ್ತ ಸಮುದಾಯದ ಏಕತೆಯನ್ನು ಬಲಪಡಿಸಲು ಪ್ರಯತ್ನ

ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆಗಳ ನಿರ್ದೇಶಕರಾದ ಫಾದರ್ ಫಾವುಸ್ಟಿನ್ ಲುಕಾಸ್ ಲೋಬೊರವರಿಂದ  ಸೆಪ್ಟಂಬರ್ 21ರಂದು ಕಾರ್ಯಕ್ರಮದ ಉದ್ಘಾಟನೆ

ಕಥೊಲಿಕ್ ಸಭಾ ಕೆಲರಾಯ್ ಘಟಕದ ಜಂಟಿ ಆಶ್ರಯ

ಮಂಗಳೂರು ಧರ್ಮಕ್ಷೇತ್ರಕ್ಕೆ ಒಳಪಟ್ಟ ಕೆಲರಾಯ್ ಸೈಂಟ್ ಆ್ಯನ್ಸ್ ಚರ್ಚ್ ಮತ್ತು ಕಥೊಲಿಕ್ ಸಭಾ ಕೆಲರಾಯ್ ಘಟಕದ ಆಶ್ರಯದಲ್ಲಿ “ಕ್ರೈಸ್ತ ಸಮುದಾಯದ ಜನೋತ್ಸವ ಲಾಯಿಕೋತ್ಸವ್ – 2025” ಸೆಪ್ಟೆಂಬರ್ 21ರಂದು ಆದಿತ್ಯವಾರ ಕೆಲರಾಯ್ ಗೋಲ್ಡನ್ ಜುಬಿಲಿ ಸಭಾಂಗಣದಲ್ಲಿ ಭವ್ಯವಾಗಿ ನಡೆಯಲಿದೆ.

“ಕ್ರೈಸ್ತ ಸಮುದಾಯದ ಜನೋತ್ಸವ ಲಾಯಿಕೋತ್ಸವ್ – 2025 ಕಾರ್ಯಕ್ರಮದ ಮುಖ್ಯ ಉದ್ದೇಶ ಕ್ರೈಸ್ತ ಸಮುದಾಯದ ಮುಖಂಡರು, ಯುವಕರು ಹಾಗೂ ಸಮಾಜಮುಖಿ ಮತ್ತು ರಾಜಕೀಯ ಕ್ಷೇತ್ರದಲ್ಲಿ ಆಸಕ್ತಿ ಹೊಂದಿರುವವರಿಗೆ ತರಬೇತಿ ನೀಡುವುದು, ಮಾಹಿತಿ ಹಂಚಿಕೊಳ್ಳುವುದು, ಸಮಾಲೋಚನೆ ನಡೆಸುವುದು ಮತ್ತು ಸಮುದಾಯದ ಏಕತೆಯನ್ನು ಬಲಪಡಿಸುವುದಾಗಿದೆ.” ಆದಿತ್ಯವಾರ ಬೆಳಗ್ಗೆ 8.30ರಿಂದ ಮಧ್ಯಾಹ್ನ 1.00 ಗಂಟೆಯವರೆಗೆ ನಡೆಯುವ ಈ ಕಾರ್ಯಕ್ರಮದಲ್ಲಿ ನೀರುಮಾರ್ಗ, ಬೊಂಡಂತಿಲ, ಉಳಾಯಿಬೆಟ್ಟು, ಮಲ್ಲೂರು, ಅಡ್ಯಾರ್, ಅರ್ಕುಳ, ಮೂಡುಶೆಡ್ಡೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಜೊತೆಗೆ ಮಂಗಳೂರು ಮಹಾನಗರ ಪಾಲಿಕೆಯ ಪದವು ಹಾಗೂ ವಾಮಂಜೂರು ವಾರ್ಡ್‌ಗಳ ವ್ಯಾಪ್ತಿಗೆ ಬರುವ ಐದು ಚರ್ಚ್ ಗಳ (ಕೆಲರಾಯ್, ನೀರುಮಾರ್ಗ, ಪೆರ್ಮಾಯ್, ಪಾಲ್ದನೆ ಮತ್ತು ವಾಮಂಜೂರು) ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ.

ಕಥೊಲಿಕ್ ಸಭಾ ಸದಸ್ಯರು, ಐಸಿವೈಎಂ ಸದಸ್ಯರು, ಚರ್ಚ್ ಪಾಲನಾ ಸಮಿತಿಯ ಸದಸ್ಯರು ಹಾಗೂ ವಿವಿಧ ಮುಖಂಡರು ಸೇರಿದಂತೆ ಸುಮಾರು 700ಕ್ಕೂ ಹೆಚ್ಚು ಸದಸ್ಯರು ಈ ಭವ್ಯ ಸಮಾರಂಭದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ.

ಈ ಭವ್ಯ ಕಾರ್ಯಕ್ರಮದ ಉದ್ಘಾಟನೆಯನ್ನು ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆಗಳ ನಿರ್ದೇಶಕರಾದ ವಂದನೀಯ ಫಾದರ್ ಫಾವುಸ್ಟಿನ್ ಲುಕಾಸ್ ಲೋಬೊರವರು ನೆರವೇರಿಸಲಿದ್ದಾರೆ ಎಂದು ಕೆಲರಾಯ್ ಚರ್ಚ್ ಪ್ರಧಾನ ಧರ್ಮಗುರು ವಂದನೀಯ ಫಾದರ್ ಸಿಲ್ವೆಸ್ಟರ್ ಡಿಕೋಸ್ಟಾ ಮತ್ತು ಕಥೊಲಿಕ್ ಸಭಾ ಕೆಲರಾಯ್ ಘಟಕದ ಅಧ್ಯಕ್ಷೆ ಡೊಟ್ಟಿ ಬ್ರ್ಯಾಗ್ಸ್ ರವರು ಇಂದು ಸೆಪ್ಟೆಂಬರ್ 18ರಂದು ಗುರುವಾರ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

You may also like

News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ
News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು

You cannot copy content of this page