July 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಪಾಲ್ದನೆ ಸಂತ ಮದರ್ ತೆರೆಜಾ ಚರ್ಚ್ ನಲ್ಲಿ ಸ್ತ್ರೀ ಆಯೋಗದ ಸಂಘಟನೆಯ ಉದ್ಘಾಟನೆ

ಸ್ಥಾಪಕ ಅಧ್ಯಕ್ಷೆಯಾಗಿ ಶೀಲಾ ಡಿಸೋಜ ಮತ್ತು ಕಾರ್ಯದರ್ಶಿಯಾಗಿ ವೆಲೆಂಟಿನಾ ರೊಡ್ರಿಗಸ್ ಆಯ್ಕೆ

ಮಂಗಳೂರು ಧರ್ಮಕ್ಷೇತ್ರಕ್ಕೆ ಒಳಪಟ್ಟ ಪಾಲ್ದನೆ ಸಂತ ಮದರ್ ತೆರೆಸಾ ಚರ್ಚ್ ನಲ್ಲಿ ಸ್ತ್ರೀ ಆಯೋಗದ ಸಂಘಟನೆಯ ಉದ್ಘಾಟನೆಯು ಸೆಪ್ಟೆಂಬರ್ 13ರಂದು ಶನಿವಾರ ಚರ್ಚ್ ಸಭಾಂಗಣದಲ್ಲಿ ನೆರವೇರಿತು. ಉದ್ಘಾಟನಾ ಸಮಾರಂಭದಲ್ಲಿ ಚರ್ಚ್ ಧರ್ಮಗುರು ವಂದನೀಯ ಫಾದರ್ ರಿಚ್ಚರ್ಡ್ ಅಲೋಸಿಯಸ್ ಕುವೆಲ್ಲೊರವರು ಭಾಗವಹಿಸಿ ಬಳಿಕ ಮಾತನಾಡಿ, ನೂತನವಾಗಿ ಉದ್ಘಾಟನೆಗೊಂಡ ಸ್ತ್ರೀ ಆಯೋಗದ ನೂತನ ಅಧ್ಯಕ್ಷ, ಪದಾಧಿಕಾರಿಗಳಿಗೆ ಹಾಗೂ ಘಟಕಕ್ಕೆ ಶುಭ ಹಾರೈಸಿದರು.

ನೂತನ ಘಟಕದ ಸ್ಥಾಪಕ ಅಧ್ಯಕ್ಷರಾಗಿ ಶೀಲಾ ಡಿಸೋಜ, ಕಾರ್ಯದರ್ಶಿಯಾಗಿ ವೆಲೆಂಟಿನಾ ರೊಡ್ರಿಗಸ್, ಖಜಾಂಚಿಯಾಗಿ ಲಿಝೀ ಫೆರ್ನಾಂಡಿಸ್, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಪ್ರೆಸಿಲ್ಲಾ ಫೆರ್ನಾಂಡಿಸ್, ಶಾಂತಿ ಮೊಂತೇರೊ, ಶೋಭಾ ಸಿಕ್ವೇರಾ, ಜೂಲಿಯಾನಾ ಫೆರ್ನಾಂಡಿಸ್ ರವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.

ಈ ಸಂದರ್ಭದಲ್ಲಿ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ಎಲಿಯಾಸ್ ಫೆರ್ನಾಂಡಿಸ್, ಕಾರ್ಯದರ್ಶಿ ಆಸ್ಟಿನ್ ಮೊಂತೇರೊ, ಸರ್ವ ಆಯೋಗಗಳ ಸಂಚಾಲಕಿ ಜೋಸ್ಲಿನ್ ಲೋಬೊ, ಸ್ತ್ರೀ ಆಯೋಗದ ಕೇಂದ್ರೀಯ ಸಮಿತಿಯ ಪ್ರತಿನಿಧಿಗಳಾಗಿ ಕಾರ್ಯದರ್ಶಿ ಅನಿತಾ ಫ್ರ್ಯಾಂಕ್ ಮತ್ತು ಕಾರ್ಯಕಾರಿ ಸಮಿತಿ ಸದಸ್ಯೆ ಉಷಾ ಫೆರ್ನಾಂಡಿಸ್ ರವರು ಉಪಸ್ಥಿತರಿದ್ದರು.

You may also like

News

ಬಸ್ಸಿನಲ್ಲಿ ಕಾಲೇಜು ವಿದ್ಯಾರ್ಥಿನಿಯರಿಗೆ ಗುಪ್ತಾಂಗ ಪ್ರದರ್ಶಿಸಿ ಲೈಂಗಿಕ ಕಿರುಕುಳ – ಸೆಲೆನ ಬಸ್ ಕಂಡಕ್ಟರ್ ಬಂಧನ

ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿಯರನ್ನು ಗುರಿಯಾಗಿಸಿ ಕೊಂಡು ಅಸಭ್ಯವಾಗಿ ವರ್ತಿಸಿ, ಗುಪ್ತಾಂಗ ಪ್ರದರ್ಶನ ಮಾಡಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸೆಲೆನ ಬಸ್ ಕಂಡಕ್ಟರ್‌ನನ್ನು ಮಂಗಳೂರು
News

ದಾರುಸ್ಸಲಾಂ ದಶಮಾನೋತ್ಸವ ಹಾಗೂ ಪ್ರಥಮ ಸನದುದಾನ ಮಹಾಸಭೆ – ಭವ್ಯ ಸ್ವಾಗತ ಸಮಿತಿ ರಚನೆ

ಸ್ಥಳೀಯ ಸಂಸ್ಥೆಯಾದ ದಾರುಸ್ಸಲಾಂ ಸೆಂಟರ್‌ನ 10ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮ ಹಾಗೂ ಪ್ರಥಮ ಸನದುದಾನ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೃಹತ್ ಸ್ವಾಗತ ಸಮಿತಿಯನ್ನು ರಚಿಸಲಾಗಿದೆ. ಈ ಐತಿಹಾಸಿಕ ಕಾರ್ಯಕ್ರಮವು

You cannot copy content of this page