April 13, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕಬಕದ ಕಲ್ಲಂದಡ್ಕ ಕೋರೆಯ ನೀರಿನಲ್ಲಿ ಮುಳುಗಿ ಬಾಲಕ ಮೃತ್ಯು

ಕಲ್ಲಿನ ಕೋರೆಯ ನೀರಿನಲ್ಲಿ ಮುಳುಗಿ ಬಾಲಕನೊಬ್ಬ ಮೃತಪಟ್ಟ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಕುಳ ಗ್ರಾಮದ ಕಲ್ಲಂದಡ್ಕ ಎಂಬಲ್ಲಿ ಸೆಪ್ಟೆಂಬರ್ 21ರಂದು ಭಾನುವಾರ ದಂದು ನಡೆದಿದೆ.

ಕಬಕ ನಿವಾಸಿ ಹಸೈನ್ ಎಂಬವವರ ಪುತ್ರ 15 ವರ್ಷ ಪ್ರಾಯಾದ ಮುಹಮ್ಮದ್ ಅಜ್ಞಾನ್ ಮೃತ ಬಾಲಕ. ಈತ ಪುತ್ತೂರಿನ ಸಾಲ್ಮರ ಪ್ರೌಢ ಶಾಲೆಯ 10ನೇ ತರಗತಿಯ ವಿದ್ಯಾರ್ಥಿಯಾಗಿದ್ದನು. ಮುಹಮ್ಮದ್ ಅಜ್ಞಾನ್ ತನ್ನ ಸ್ನೇಹಿತರೊಂದಿಗೆ ಬಳಕೆಯಿಲ್ಲದ ಕೋರೆಯ ಬಳಿಗೆ ತೆರಳಿದ್ದಾಗ ಘಟನೆ ಸಂಭವಿಸಿದೆ. ತಕ್ಷಣ ಸ್ಥಳೀಯರು ನೆರವಿಗೆ ಧಾವಿಸಿದರೂ ಜೀವ ಉಳಿಸಲು ಸಾಧ್ಯವಾಗಲಿಲ್ಲ ಎಂದು ತಿಳಿದು ಬಂದಿದೆ. ಈ ಬಗ್ಗೆ ವಿಟ್ಲ ಪೊಲೀಸ್‌ ಠಾಣೆಯಲ್ಲಿ ಪುಕರಣ ದಾಖಲಾಗಿದೆ.

You may also like

News

ಮಂಗಳೂರು SSVP ಇತಿಹಾಸದಲ್ಲಿ ಹೊಸ ಅಧ್ಯಾಯ – ಮೊದಲ ಮಹಿಳಾ ಅಧ್ಯಕ್ಷೆಯಾಗಿ ಪ್ರೀತಾ ಲೋಬೊ ಅಧಿಕಾರ ಸ್ವೀಕಾರ

ಸೈಂಟ್ ವಿನ್ಸೆಂಟ್ ಡಿ ಪೌಲ್ ಸೊಸೈಟಿ (SSVP) ಮಂಗಳೂರು ಸೆಂಟ್ರಲ್ ಕೌನ್ಸಿಲ್‌ನ 66 ವರ್ಷಗಳ ಸುದೀರ್ಘ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆದಿಡುವಂತಹ ಘಟನೆ ನಡೆದಿದೆ. ಸಂಸ್ಥೆಯ ಪ್ರಥಮ ಮಹಿಳಾ
News

Press Briefing Held for FMCI Graduation Days 2026, 856 Graduates to take oath of healthcare

Mangaluru, April 13, 2026: A press briefing for the upcoming FMCI Graduation Days 2026 was held on April 13, 2026,

You cannot copy content of this page