April 8, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ದರೋಡೆ ಮತ್ತು ಕಳ್ಳತನ ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಅಶ್ರಫ್ ಬಂಧನ

ವಿಟ್ಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎರಡು ಗಂಭೀರ ಪ್ರಕರಣಗಳ ಆರೋಪಿ ಮಂಜೇಶ್ವರ ತಾಲೂಕಿನ ಕೂಳೂರು ಗ್ರಾಮದ 32 ವರ್ಷ ಪ್ರಾಯದ ಅಶ್ರಫ್ @ ಚಿಲ್ಲಿ ಅಶ್ರಫ್ ಎಂಬಾತನನ್ನು ಸೆಪ್ಟೆಂಬರ್ 21ರಂದು ಭಾನುವಾರ ಕೂಳೂರು, ಮಂಜೇಶ್ವರದಲ್ಲಿ ಪೊಲೀಸರು ದಸ್ತಗಿರಿ ಮಾಡಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

🔹 ಪ್ರಕರಣ – 1: ವಿಟ್ಲ ಪೊಲೀಸ್ ಠಾಣಾ ಅ.ಕ್ರ. 165/2015, ಕಲಂ 397 IPC. 07-08-2015 ರಂದು ವಿಟ್ಲಪೇಟೆಯಲ್ಲಿ ಜಗದೀಶ್ ಕಾಮತ್ ಎಂಬುವವರಿಗೆ ಮೆಣಸಿನ ಪುಡಿ ಎರಚಿ ದರೋಡೆ ನಡೆಸಿದ ಪ್ರಕರಣ. ಈ ಪ್ರಕರಣದಲ್ಲಿ ಆರೋಪಿ ದಸ್ತಗಿರಿಯಾಗದೇ ತಲೆಮರೆಸಿಕೊಂಡಿದ್ದರಿಂದ LPC-03/2025 ರಂತೆ ವಾರೆಂಟ್ ಜಾರಿಯಾಗಿತ್ತು.

🔹 ಪ್ರಕರಣ – 2: ವಿಟ್ಲ ಪೊಲೀಸ್ ಠಾಣಾ ಅ.ಕ್ರ. 16/2016, ಕಲಂ 457, 380 IPC. 23-01-2016 ರಂದು ಕೊಲ್ನಾಡು ಗ್ರಾಮದ ವೈನ್ ಶಾಪ್‌ನ ಬಾಗಿಲು ಮುರಿದು ನಗದು ಕಳ್ಳತನ ಮಾಡಿದ ಪ್ರಕರಣ. ಈ ಪ್ರಕರಣದಲ್ಲಿಯೂ ಆರೋಪಿ ತಲೆಮರೆಸಿಕೊಂಡಿದ್ದರಿಂದ ಮಾನ್ಯ ನ್ಯಾಯಾಲಯವು ಕಲಂ 82 ಹಾಗೂ 83ರ ಪ್ರಕಾರ ವಾರೆಂಟ್ ಜಾರಿಗೊಳಿಸಿತ್ತು.

ಈ ಎರಡು ಪ್ರಕರಣಗಳಲ್ಲಿಯೂ ಭಾಗಿಯಾಗಿದ್ದ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

You may also like

News

ಆರಿಫ್ ಹತ್ಯೆ ಪ್ರಕರಣ – ಏಳು ಮಂದಿ ಪ್ರಮುಖ ಆರೋಪಿಗಳ ಬಂಧನ

ಮಂಗಳೂರು ಪೊಲೀಸ್ ಕಮೀಷನರ್ ಅವರಿಂದ ಪತ್ರಿಕಾ ಪ್ರಕಟನೆ ನಗರದ ಆರಿಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ತಂಡವು ಮಹತ್ವದ ಪ್ರಗತಿ ಸಾಧಿಸಿದ್ದು, ಏಳು ಮಂದಿ ಪ್ರಮುಖ ಆರೋಪಿಗಳನ್ನು
News

Mangalore Physiocon 2026 – Pre-Conference Hands-on Workshop at Father Muller College of Physiotherapy

The Pre-conference Hands-on Workshop of Mangalore Physiocon 2026 was successfully conducted by Father Muller College of Physiotherapy in association with

You cannot copy content of this page