April 30, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ದರೋಡೆ ಮತ್ತು ಕಳ್ಳತನ ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಅಶ್ರಫ್ ಬಂಧನ

ವಿಟ್ಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎರಡು ಗಂಭೀರ ಪ್ರಕರಣಗಳ ಆರೋಪಿ ಮಂಜೇಶ್ವರ ತಾಲೂಕಿನ ಕೂಳೂರು ಗ್ರಾಮದ 32 ವರ್ಷ ಪ್ರಾಯದ ಅಶ್ರಫ್ @ ಚಿಲ್ಲಿ ಅಶ್ರಫ್ ಎಂಬಾತನನ್ನು ಸೆಪ್ಟೆಂಬರ್ 21ರಂದು ಭಾನುವಾರ ಕೂಳೂರು, ಮಂಜೇಶ್ವರದಲ್ಲಿ ಪೊಲೀಸರು ದಸ್ತಗಿರಿ ಮಾಡಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

🔹 ಪ್ರಕರಣ – 1: ವಿಟ್ಲ ಪೊಲೀಸ್ ಠಾಣಾ ಅ.ಕ್ರ. 165/2015, ಕಲಂ 397 IPC. 07-08-2015 ರಂದು ವಿಟ್ಲಪೇಟೆಯಲ್ಲಿ ಜಗದೀಶ್ ಕಾಮತ್ ಎಂಬುವವರಿಗೆ ಮೆಣಸಿನ ಪುಡಿ ಎರಚಿ ದರೋಡೆ ನಡೆಸಿದ ಪ್ರಕರಣ. ಈ ಪ್ರಕರಣದಲ್ಲಿ ಆರೋಪಿ ದಸ್ತಗಿರಿಯಾಗದೇ ತಲೆಮರೆಸಿಕೊಂಡಿದ್ದರಿಂದ LPC-03/2025 ರಂತೆ ವಾರೆಂಟ್ ಜಾರಿಯಾಗಿತ್ತು.

🔹 ಪ್ರಕರಣ – 2: ವಿಟ್ಲ ಪೊಲೀಸ್ ಠಾಣಾ ಅ.ಕ್ರ. 16/2016, ಕಲಂ 457, 380 IPC. 23-01-2016 ರಂದು ಕೊಲ್ನಾಡು ಗ್ರಾಮದ ವೈನ್ ಶಾಪ್‌ನ ಬಾಗಿಲು ಮುರಿದು ನಗದು ಕಳ್ಳತನ ಮಾಡಿದ ಪ್ರಕರಣ. ಈ ಪ್ರಕರಣದಲ್ಲಿಯೂ ಆರೋಪಿ ತಲೆಮರೆಸಿಕೊಂಡಿದ್ದರಿಂದ ಮಾನ್ಯ ನ್ಯಾಯಾಲಯವು ಕಲಂ 82 ಹಾಗೂ 83ರ ಪ್ರಕಾರ ವಾರೆಂಟ್ ಜಾರಿಗೊಳಿಸಿತ್ತು.

ಈ ಎರಡು ಪ್ರಕರಣಗಳಲ್ಲಿಯೂ ಭಾಗಿಯಾಗಿದ್ದ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

You may also like

News

ಧರ್ಮಸ್ಥಳದಲ್ಲಿ 54ನೇ ವರ್ಷದ ಸಾಮೂಹಿಕ ವಿವಾಹ – 106 ಜೋಡಿಗಳ ದಾಂಪತ್ಯ ಆರಂಭ

ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಏಪ್ರಿಲ್ 29ರಂದು ಬುಧವಾರ ಸಂಜೆ 6.40ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ
News

Saint Theresa’s School Mangaluru Records 22nd Consecutive Year of 100% Success in ICSE Class X Exams 2025–26

Principal Sr Lourdes  and faculty congratulate students on their success MANGALURU: In a resounding celebration of intellectual brilliance and disciplined

You cannot copy content of this page