May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕದ್ರಿಯ ಲೋಬೊ ಲೇನ್‌ನಲ್ಲಿ ನಕಲಿ ವೈನ್ ತಯಾರಿಕಾ ಮನೆ ಪತ್ತೆ

ರೂಪಾಯಿ 5.57 ಲಕ್ಷ ಮೌಲ್ಯದ ವಸ್ತು ಜಪ್ತಿಆರೋಪಿಯ ಬಂಧನ

ಮಾನ್ಯ ಅಬಕಾರಿ ಜಂಟಿ ಆಯುಕ್ತರು ಮಂಗಳೂರು ವಿಭಾಗದ ನಿರ್ದೇಶನದಂತೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಮಾನ್ಯ ಅಬಕಾರಿ ಉಪ ಆಯುಕ್ತರ ಮಾರ್ಗದರ್ಶನದಲ್ಲಿ, ಮಂಗಳೂರು ಉಪ ವಿಭಾಗ–1 ರ ಅಬಕಾರಿ ಉಪ ಅಧೀಕ್ಷಕರ ನೇತೃತ್ವದಲ್ಲಿ ಮಂಗಳೂರು, ತಲಪಾಡಿ ತನಿಖಾ ಠಾಣೆ ಹಾಗೂ ಮಂಗಳೂರು ದಕ್ಷಿಣ ವಲಯ–1 ರ ಅಬಕಾರಿ ನಿರೀಕ್ಷಕರ ತಂಡವು ಸೆಪ್ಟೆಂಬರ್ 22ರಂದು ಕದ್ರಿಯ ಲೋಬೊ ಲೇನ್ ಪ್ರದೇಶದಲ್ಲಿರುವ ಮನೆ ಮೇಲೆ ದಾಳಿ ನಡೆಸಿತು.

ಮೈಕಲ್ ಬ್ಲೈಸ್ ಮಿನೇಜಸ್ ಎಂಬುವವರ ಮನೆಯಲ್ಲಿ ನಡೆದ ದಾಳಿಯಲ್ಲಿ, ಅಧಿಕಾರಿಗಳು ಪಂಚಸಾಕ್ಷಿಗಳ ಸಮ್ಮುಖದಲ್ಲಿ ಕೆಳಕಂಡ ವಸ್ತುಗಳನ್ನು ಪತ್ತೆಹಚ್ಚಿ ಜಪ್ತಿ ಮಾಡಿದರು. ನಕಲಿ ವೈನ್ – 238.500 ಲೀಟರ್, ವೈನ್ ತಯಾರಿಸಲು ಬಳಸಿದ ಕೊಳೆ – 1,500 ಲೀಟರ್, ಮದ್ಯ – 3.180 ಲೀಟರ್ ಹಾಗೂ ನಕಲಿ ವೈನ್ ತಯಾರಿಕಾ ಸಲಕರಣೆಗಳು.

ಸದರಿ ಆರೋಪಿಯನ್ನು ಬಂಧಿಸಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಆರೋಪಿಯ ವಿರುದ್ಧ ಕರ್ನಾಟಕ ಅಬಕಾರಿ ಕಾಯ್ದೆ 1965ರ ಕಲಂ 13(1)(a), 13(1)(f), 14, 15, 32(1), 32(2)(e), 34, 38(A) ರಂತೆ ಪ್ರಕರಣ ದಾಖಲಿಸಲಾಗಿದೆ. ಈ ದಾಳಿಯಲ್ಲಿ ಜಪ್ತಿ ಮಾಡಿದ ವಸ್ತುಗಳ ಒಟ್ಟು ಅಂದಾಜು ಮೌಲ್ಯ ರೂಪಾಯಿ 5,57,690/- ಎಂದು ಅಬಕಾರಿ ಇಲಾಖೆ ತಿಳಿಸಿದೆ.

You may also like

News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ
News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು

You cannot copy content of this page