July 9, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕೊಂಕಣಿ ಭಾಷಾ ಮಂಡಳ್ ಕರ್ನಾಟಕ (ರಿ.) ನೂತನ ಪದಾಧಿಕಾರಿಗಳ ಆಯ್ಕೆ

ರಾಜ್ಯದ ಅಧ್ಯಕ್ಷರಾಗಿ ರೇಮಂಡ್ ಡಿಕೂನಾ ತಾಕೊಡೆ – ಕಾರ್ಯದರ್ಶಿಯಾಗಿ ಲಿಸ್ಟನ್ ಡಿಸೋಜ 

ಮಂಗಳೂರಿನ ಹಿರಿಯ ಪತ್ರಕರ್ತ, ಬಹುಭಾಷಾ ಸಾಹಿತಿ ರೇಮಂಡ್ ಡಿಕೂನಾ ತಾಕೊಡೆ ಇವರನ್ನು ಕೊಂಕಣಿ ಭಾಷಾ ಮಂಡಳ್ ಕರ್ನಾಟಕ (ರಿ.) ಇದರ ರಾಜ್ಯಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ವಕೀಲ ಲಿಸ್ಟನ್ ಡಿಸೋಜರವರನ್ನು ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಗಿದೆ.

ಹಿರಿಯ ಪತ್ರಕರ್ತರಾಗಿರುವ ರೇಮಂಡ್ ಡಿಕೂನಾ ತಾಕೊಡೆಯವರು 1985ರಿಂದಲೇ ಪತ್ರಿಕಾ ಮತ್ತು ಸಾಹಿತ್ಯ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಕೊಂಕಣಿ ಮತ್ತು ಕನ್ನಡದಲ್ಲಿ 17ಕ್ಕೂ ಹೆಚ್ಚು ಕೃತಿಗಳನ್ನು ಪ್ರಕಟಿಸಿದ್ದಾರೆ. ಮಿತ್ರ್, ಅಮ್ಚೊ ಸಂದೇಶ್, ಪಿಂಗಾರ ಸೇರಿದಂತೆ ಪತ್ರಿಕೆಗಳಲ್ಲಿ ಸಂಪಾದಕತ್ವ ವಹಿಸಿ ಕೊಂಕಣಿ ಪತ್ರಿಕೋದ್ಯಮಕ್ಕೆ ಮಹತ್ವದ ಕೊಡುಗೆ ನೀಡಿದ್ದಾರೆ.

ಅವಿರೋಧವಾಗಿ ಆಯ್ಕೆಯಾದ ಪದಾಧಿಕಾರಿಗಳು:

ಉಪಾಧ್ಯಕ್ಷೆ: ಮೀನಾಕ್ಷಿ ಪೈ (ಜಿಎಸ್‌ಬಿ ಮಹಿಳಾ ಮಂಡಳ್ ಕಾರ್ಯಕರ್ತೆ)

ಸಹ ಕಾರ್ಯದರ್ಶಿ: ಪ್ರಸಾದ್ ಶೆಣೈ (ಯುವ ಉದ್ಯಮಿ)

ಖಜಾಂಚಿ: ಲಯನ್ ಕೆ. ವಸಂತ ರಾವ್ (ನಿವೃತ್ತ ಬ್ಯಾಂಕ್ ಯೂನಿಯನ್ ನಾಯಕ)

ಚುನಾವಣಾ ಅಧಿಕಾರಿಯಾಗಿ ಗೀತಾ ಸಿ. ಕಿಣಿ ಕಾರ್ಯನಿರ್ವಹಿಸಿ ಹೊಸ ಪದಾಧಿಕಾರಿಗಳ ಘೋಷಣೆ ಮಾಡಿದರು. ಜೂಲಿಯೆಟ್ ಫೆರ್ನಾಂಡಿಸ್, ಲಾರೆನ್ಸ್ ಪಿಂಟೊ, ಜೊಸ್ಸಿ ಪಿಂಟೊ, ಸುರೇಶ್ ಶೆಣೈ, ಎಡೊಲ್ಫ್ ಡಿಸೋಜ, ಝೀನಾ ಫೆರ್ನಾಂಡಿಸ್, ಅರವಿಂದ್ ಶಾನ್ ಭಾಗ್ ಮತ್ತು ಶಾಂತಿ ವೆರೊನಿಕಾ ಸೇರಿದಂತೆ ಅನೇಕ ಸದಸ್ಯರು ಹಾಜರಿದ್ದರು.

You may also like

News

ಹಿರಿಯ ಕಲಾವಿದ ಎಲ್.ಕೆ. ಧರಣ್ ಮಾಣಿ ಅವರ ಪಿತೃ ವಿಯೋಗ

ಭಜನಾ ಗಾಯಕ ರುಕ್ಮಯ್ಯ ಲಾಡ್ರುಕೋಡಿ ನಿಧನ ಖ್ಯಾತ ಹಿನ್ನೆಲೆ ಗಾಯಕ, ಕಲಾವಿದ ಹಾಗೂ ಸಂಕೀರ್ತನಕಾರ ಎಲ್.ಕೆ. ಧರಣ್ ಮಾಣಿ ಅವರ ತಂದೆ, ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ
News

ಪುತ್ತೂರಿನಲ್ಲಿ ಯುವತಿಗೆ ಚಾಕು ತೋರಿಸಿ ಬೆದರಿಕೆ ಹಾಕಿದ ಆರೋಪ – ಸತ್ಯಾಂಶ ಬಿಚ್ಚಿಟ್ಟ ಪೊಲೀಸರು

ಉಭಯ ಕಡೆಯಿಂದ ದೂರು ದಾಖಲು! ಸುಳ್ಳು ಸುದ್ದಿ ಅಥವಾ ವದಂತಿಗಳನ್ನು ಹಬ್ಬಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ – ಜಿಲ್ಲಾ SP ಡಾ. ಅರುಣ್ ಕೆ. ಯುವತಿಯೊಬ್ಬಳು

You cannot copy content of this page