ಕುದಿಯುತ್ತಿದ್ದ ಹಾಲಿನ ಪಾತ್ರೆಗೆ ಬಿದ್ದು ಮಗು ಸಾವು
ಶಾಲೆಯ ಅಡುಗೆ ಕೋಣೆಯಲ್ಲಿ ಇಟ್ಟಿದ್ದ ಕುದಿಯುತ್ತಿದ್ದ ಹಾಲಿನ ಪಾತ್ರೆಗೆ ಬಿದ್ದು ಒಂದೂವರೆ ವರ್ಷದ ಹೆಣ್ಣು ಮಗು ತೀವ್ರ ಗಾಯಗೊಂಡು ಮೃತಪಟ್ಟಿರುವ ಘಟನೆ ಅನಂತಪುರ ಜಿಲ್ಲೆಯ ಬುಕ್ಕರಾಯಸಮುದ್ರಂ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಅಂಬೇಡ್ಕರ್ ಗುರುಕುಲ ಶಾಲೆಯಲ್ಲಿ ಘಟನೆ ಸಂಭವಿಸಿದ್ದು, ಸಿಸಿಟಿವಿಯಲ್ಲಿ ದೃಶ್ಯ ಸೆರೆಯಾಗಿದೆ.




ಅಕ್ಷಿತಾ ಮೃತ ಮಗು. ಮಗುವಿನ ತಾಯಿ ಕೃಷ್ಣವೇಣಿ ಶಾಲೆಯೊಂದರಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು. ವಿದ್ಯಾರ್ಥಿಗಳಿಗೆ ವಿತರಿಸಲು ಸಿದ್ಧಪಡಿಸಿದ್ದ ಬಿಸಿ ಹಾಲನ್ನು ತಣ್ಣಗಾಗಿಸಲು ಸೀಲಿಂಗ್ ಫ್ಯಾನ್ ಅಡಿಯಲ್ಲಿ ಇಡಲಾಗಿತ್ತು. ತಾಯಿ ಅಡುಗೆ ಕೋಣೆಯಲ್ಲಿ ಇಲ್ಲದ ವೇಳೆ ಬೆಕ್ಕನ್ನು ಹಿಂಬಾಲಿಸಿಕೊಡು ಹೋದ ಮಗು ಕುದಿಯುತ್ತಿದ್ದ ಹಾಲಿನ ಪಾತ್ರೆಯೊಳಗೆ ಬಿದ್ದಿದೆ.





