November 8, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕೊಂಕಣಿ ಲೇಖಕರ ಸಂಘ, ಕರ್ನಾಟಕ  – ವಾರ್ಷಿಕ ಸಭೆ

ಕೊಂಕಣಿ ಲೇಖಕರ ಸಂಘ, ಕರ್ನಾಟಕದ ವಾರ್ಷಿಕ ಸಭೆ ಸಂದೇಶ ಪ್ರತಿಷ್ಠಾನದಲ್ಲಿ ನಡೆಯಿತು. ಸಂಘದ ಸಂಚಾಲಕರಾದ ರಿಚ್ಚಾರ್ಡ್ ಮೊರಸ್ ಖರ್ಚು–ವೆಚ್ಚದ ಲೆಕ್ಕಪತ್ರವನ್ನು ಮಂಡಿಸಿದ್ದು, ಸಭೆಯಲ್ಲಿ ಸರ್ವಾನುಮತದಿಂದ ಅಂಗೀಕರಿಸಲಾಯಿತು.

ಮುಖ್ಯ ಆಕರ್ಷಣೆಯಾಗಿ ನಿವೃತ್ತ ಪೋಸ್ಟ್ ಮಾಸ್ಟರ್ ಜನರಲ್ ಡಾ. ಚಾರ್ಲ್ಸ್ ಲೋಬೊ IPS ಅವರೊಂದಿಗೆ ಖ್ಯಾತ ಕವಿ–ಲೇಖಕ ಅ್ಯಂಡ್ರು ಎಲ್. ಡಿಕುನ್ಹಾ ಮುಕ್ತ ಸಂವಾದ ನಡೆಸಿದರು. ಡಾ. ಲೋಬೊ ಅವರ ವೃತ್ತಿ ಜೀವನ, ಆಡಳಿತ ಸಾಧನೆಗಳು ಹಾಗೂ ಕೊಂಕಣಿ ಭಾಷೆ–ಸಾಹಿತ್ಯಕ್ಕೆ ನೀಡಿದ ಕೊಡುಗೆಗಳನ್ನು ಈ ಸಂದರ್ಭದಲ್ಲಿ ವಿವರಿಸಲಾಯಿತು.

ಸಭೆಗೆ ಡೊಲ್ಫಿ ಕಾಸ್ಸಿಯಾ ಪ್ರಾಸ್ತವಿಕ  ಭಾಷಣ ಮಾಡಿ ಸ್ವಾಗತ ಮಾಡಿದರು. ಹೆನ್ರಿ ಮಸ್ಕರೇನಸ್ ಧನ್ಯವಾದ ಸಲ್ಲಿಸಿದರು. ಕಾರ್ಯಕ್ರಮವನ್ನು ಡಾ. ಅ್ಯನಿ ಕ್ಯಾಸ್ತಲಿನೊ ನುಡಿಗಟ್ಟುಗಳೊಂದಿಗೆ ಸುಂದರವಾಗಿ ನಿರ್ವಹಿಸಿದರು.

You may also like

News

ಮಾಣಿ ಗ್ರಾಮದಲ್ಲಿ ಹಳೆ ಮನೆ ದುರಸ್ತಿ ಪರವಾನಗಿ ಪಡೆದು ಸರಕಾರಿ ಜಮೀನಿನ ಮೇಲೆ ಅಕ್ರಮವಾಗಿ ನಿರ್ಮಿಸಿದ ಐಶಾರಾಮಿ ಬಂಗ್ಲೆ

ಯಾವುದೇ ದಾಖಲೆಗಳಿಲ್ಲದೆ ಸರಕಾರಕ್ಕೆ ವಂಚನೆ ಮಾಡಿದ್ದನ್ನು ಬಯಲಿಗೆಳೆದ ಸಾಮಾಜಿಕ ಕಾರ್ಯಕರ್ತ ಅತಿಕ್ರಮಿತ ಕಟ್ಟಡ ಕೂಡಲೇ ತೆರವುಗೊಳಿಸಲು ಲೂಸಿಯಾ ಮೆಟಿಲ್ಡಾ ಪಿಂಟೊರವರಿಗೆ ಬಂಟ್ವಾಳ ತಹಶೀಲ್ದಾರ್ ನೋಟಿಸ್ ಜಾರಿ ಮಾಣಿ
News

ನಕಲಿ ದಾಖಲೆ ಪ್ರಕರಣದಲ್ಲಿ ಆರೋಪಿ ಅಬ್ದುಲ್ ಹಾಶೀಮ್ ಬಂಧನ

ನಕಲಿ ದಾಖಲೆ ಸೃಷ್ಟಿಸಿ ನ್ಯಾಯಾಲಯವನ್ನು ವಂಚಿಸಿದ ಭೂಪ ಪುತ್ತೂರು ತಾಲೂಕಿನ ಪಡುವನ್ನೂರು ಗ್ರಾಮದ 34 ವರ್ಷ ಪ್ರಾಯದ ಅಬ್ದುಲ್ ಹಾಶೀಮ್  ಎಂಬಾತನನ್ನು ಉಪ್ಪಿನಂಗಡಿ ಪೊಲೀಸರು ನವೆಂಬರ್ 6ರಂದು

You cannot copy content of this page