August 30, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಸಿಟಿ ವಲಯದ 10ನೇ ತರಗತಿ ವಿದ್ಯಾರ್ಥಿಗಳಿಗೆ ಕುಲಶೇಖರದಲ್ಲಿ ಜೀವನ್ ಜ್ಯೋತಿ ಶಿಬಿರ ಆರಂಭ

ಮಂಗಳೂರು ಧರ್ಮಕ್ಷೇತ್ರದ ಸಿಟಿ ವಲಯದ 12 ಚರ್ಚ್‌ಗಳ 10ನೇ ತರಗತಿ ವಿದ್ಯಾರ್ಥಿಗಳಿಗಾಗಿ ಮೂರು ದಿವಸಗಳ ಜೀವನ್ ಜ್ಯೋತಿ ಶಿಬಿರ ಕುಲಶೇಖರ ಚರ್ಚ್‌ನಲ್ಲಿ ಆರಂಭಗೊಂಡಿದೆ. ಉದ್ಘಾಟನಾ ಸಮಾರಂಭದಲ್ಲಿ ಸಿಟಿ ವಲಯದ ಶ್ರೇಷ್ಠ ಗುರು ಹಾಗೂ ವಾಮಂಜೂರು ಚರ್ಚ್‌ನ ಪ್ರಧಾನ ಧರ್ಮಗುರು ವಂದನೀಯ ಫಾದರ್ ಜೇಮ್ಸ್ ಡಿಸೋಜ, ಕುಲಶೇಖರ ಕೋರ್ಡೆಲ್ ಚರ್ಚ್‌ನ ಪ್ರಧಾನ ಧರ್ಮಗುರು ವಂದನೀಯ ಫಾದರ್ ಕ್ಲಿಫರ್ಡ್ ಫೆರ್ನಾಂಡಿಸ್, ವಂದನೀಯ ಫಾದರ್ ಜೀವನ್ ಶೈಲೇಶ್ ಲೋಬೊ, ಸಿಸ್ಟರ್ಸ್ ಆಫ್ ಚಾರಿಟಿಯ ಭಗಿನಿ ಸ್ಟೆಫಾನಿ ಹಾಗೂ ವಿಯಾನಿ ಪಿಂಟೊ ಉಪಸ್ಥಿತರಿದ್ದರು.

ಹತ್ತನೇ ತರಗತಿಯ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ಮೂರು ದಿವಸಗಳ ಜೀವನ್ ಜ್ಯೋತಿ ಶಿಬಿರದಲ್ಲಿ ವಿದ್ಯಾಭ್ಯಾಸವನ್ನು ಉತ್ತಮವಾಗಿ ಮುಂದುವರಿಸುವ ಮಾರ್ಗಗಳು, ಭವಿಷ್ಯದ ಉದ್ಯೋಗ ಜೀವನಕ್ಕೆ ಬೇಕಾದ ಸಿದ್ಧತೆ, ಆರೋಗ್ಯದ ಬಗ್ಗೆ ಕಾಳಜಿ ವಹಿಸುವ ವಿಧಾನಗಳು, ಆಧ್ಯಾತ್ಮಿಕತೆಯ ಅರಿವು, ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳುವುದು, ಸ್ನೇಹಿತರನ್ನು ಗೆಲ್ಲುವ ಕೌಶಲ್ಯಗಳು ಮತ್ತು ಸಮಾಜದಲ್ಲಿ ಪ್ರಭಾವ ಬೀರುವ ಗುಣಗಳನ್ನು ಬೆಳೆಸಿಕೊಳ್ಳುವ ಪಾಠಗಳನ್ನು ಕಲಿಸಲಾಗುತ್ತದೆ. ಇದರಿಂದ ವಿದ್ಯಾರ್ಥಿಗಳು ಶಿಸ್ತು, ಆತ್ಮವಿಶ್ವಾಸ, ಜವಾಬ್ದಾರಿತನ ಹಾಗೂ ಉತ್ತಮ ಜೀವನ ಮೌಲ್ಯಗಳನ್ನು ಅಳವಡಿಸಿಕೊಂಡು, ತಮ್ಮ ಭವಿಷ್ಯವನ್ನು ದಿಟ್ಟವಾಗಿ ಕಟ್ಟಿಕೊಳ್ಳಲು ಸಹಾಯವಾಗುತ್ತದೆ.

ಕೌಮಾರ ದಶೆಯ (Teenage) ವಿದ್ಯಾರ್ಥಿಗಳು ಉತ್ತಮ ದಾರಿಯತ್ತ ಸಾಗಲು ಸಹಾಯ ಮಾಡುವ ಉದ್ದೇಶದಿಂದ ಈ ಶಿಬಿರವು ವಿವಿಧ ಚಟುವಟಿಕೆಗಳು ಹಾಗೂ ಉಪನ್ಯಾಸಗಳ ಮೂಲಕ ವಿದ್ಯಾರ್ಥಿಗಳಿಗೆ ದಿಕ್ಕು ತೋರಿಸುವ ಕಾರ್ಯ ಮಾಡುತ್ತಿದೆ.

You may also like

News

ಸಿಬ್ಬಂದಿ ಕೊರತೆ ನೀಗಿಸಲು ಮೆಸ್ಕಾಂಗೆ 395 ಪವರ್‌ಮ್ಯಾನ್‌ಗಳು – ಅಧ್ಯಕ್ಷ ಕೆ. ಹರೀಶ್ ಕುಮಾರ್

ಮಂಗಳೂರು: ವಿದ್ಯುತ್ ಸರಬರಾಜು ಮತ್ತು ನಿರ್ವಹಣಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಮೆಸ್ಕಾಂ ವ್ಯಾಪ್ತಿಗೆ 395 ಹೊಸ ಪವರ್‌ಮ್ಯಾನ್‌ಗಳನ್ನು ನೇಮಕ ಮಾಡಲಾಗಿದೆ ಎಂದು ಮೆಸ್ಕಾಂ ಅಧ್ಯಕ್ಷ ಕೆ.
News

ಓಣಂ ಸಂಭ್ರಮದ ನಡುವೆ ದುರಂತ – ತೆರೆದ ಬಾವಿಗೆ ಬಿದ್ದು 10ನೇ ತರಗತಿ ವಿದ್ಯಾರ್ಥಿ ಸಾವು

ಓಣಂ ಆಚರಣೆಯ ಸಂಭ್ರಮದ ನಡುವೆ ಸಂಭವಿಸಿದ ದಾರುಣ ಘಟನೆಯೊಂದರಲ್ಲಿ ಶಾಲಾ ವಿದ್ಯಾರ್ಥಿಯೊಬ್ಬ ತೆರೆದ ಬಾವಿಗೆ ಆಕಸ್ಮಿಕವಾಗಿ ಬಿದ್ದು ಮೃತಪಟ್ಟ ಘಟನೆ ಕನ್ಹಂಗಾಡ್ ಸಮೀಪದ ಚೀಮೇನಿಯಲ್ಲಿ ನಡೆದಿದೆ. ಮೃತ

You cannot copy content of this page