November 8, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ನಾಳೆ ಅಕ್ಟೋಬರ್ 5ರಂದು ಮಿಲಾಗ್ರಿಸ್ ಜುಬಿಲಿ ಸಭಾಭವನದಲ್ಲಿ 2023–25ರ ರಚನಾ ಪ್ರಶಸ್ತಿ ಪ್ರದಾನ ಸಮಾರಂಭ

ರಚನಾ®️ ಕ್ಯಾಥೊಲಿಕ್ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರಿ ಮಂಗಳೂರು ವತಿಯಿಂದ 2023–25ರ ರಚನಾ ಪ್ರಶಸ್ತಿ ಪ್ರದಾನ ಸಮಾರಂಭವು ಅಕ್ಟೋಬರ್ 5ರಂದು ಭಾನುವಾರ ಸಂಜೆ 6 ಗಂಟೆಗೆ ಮಂಗಳೂರಿನ ಮಿಲಾಗ್ರಿಸ್ ಜುಬಿಲಿ ಸಭಾಭವನದಲ್ಲಿ ಜರುಗಲಿದೆ.

ಈ ಬಾರಿ ರಚನಾ ಉದ್ಯಮಿ ಪ್ರಶಸ್ತಿಗೆ ಬೆಂಗಳೂರಿನ ಆಸ್ಟಿನ್ ರೋಚ್, ರಚನಾ ವೃತ್ತಿಪರ ಪ್ರಶಸ್ತಿಗೆ ಮಂಗಳೂರಿನ ಜೋನ್ ರಿಚ್ಚರ್ಡ್ ಲೋಬೊ KAS, ರಚನಾ ಕೃಷಿಕ ಪ್ರಶಸ್ತಿಗೆ ಬೆಳುವಾಯಿಯ ಡಾ. ಗೊಡ್ವಿನ್ ರೊಡ್ರಿಗಸ್ PhD, ರಚನಾ ಎನ್‌ಆರ್‌ಐ ಉದ್ಯಮಿ ಪ್ರಶಸ್ತಿಗೆ ರೊನಾಲ್ಡ್ ಕುಲಾಸೊ ಹಾಗೂ ಕುಟುಂಬದಿಂದ ಪ್ರಾಯೋಜಿತ್ ದುಬಾಯ್ ಪ್ರತಾಪ್ ಮೆಂಡೋನ್ಸಾ ಹಾಗೂ ರಚನಾ ಶ್ರೇಷ್ಠ ಮಹಿಳಾ ಪ್ರಶಸ್ತಿಗೆ ದುಬಾಯ್ ಶೋಭಾ ಮೆಂಡೋನ್ಸಾ ಆಯ್ಕೆಗೊಂಡಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಗಳೂರು ಧರ್ಮಕ್ಷೇತ್ರದ ಬಿಷಪ್ ಅತೀ ವಂದನೀಯ ಡಾ. ಪೀಟರ್ ಪಾವ್ಲ್ ಸಲ್ದಾನ್ಹಾರವರು ವಹಿಸಲಿದ್ದು, ಕರ್ನಾಟಕ ಸರ್ಕಾರದ ಇಂಧನ ಸಚಿವರಾದ ಕೆ. ಜೆ. ಜಾರ್ಜ್ ಮುಖ್ಯ ಅತಿಥಿಗಳಾಗಿರುತ್ತಾರೆ. ಕರ್ನಾಟಕ ಸರ್ಕಾರದ ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜ, UAE ಬರ್ಝೀಲ್ ಹೋಲ್ಡಿಂಗ್ಸ್ ಗ್ರೂಪ್ ಸಿಇಒ ಜೋನ್ ಸುನಿಲ್ ಹಾಗೂ ಬೆಂಗಳೂರು ವಿಶ್ವವಿದ್ಯಾಲಯದ ಮಾಜಿ ಕಾರ್ಯನಿರ್ವಹಣಾ ಕುಲಪತಿ ಡಾ. ಸಿಂಥಿಯಾ ಮಿನೇಜಸ್ ಗೌರವ ಅತಿಥಿಗಳಾಗಿ ಉಪಸ್ಥಿತರಿರುವರು.

ರಚನಾ ಪ್ರಸ್ತುತ ಅಧ್ಯಕ್ಷ ಜೋನ್ ಬಿ. ಮೊಂತೇರೊ, ಕಾರ್ಯದರ್ಶಿ ವಿಜಯ್ ವಿ. ಲೋಬೊ ಹಾಗೂ ಪ್ರಶಸ್ತಿ ಸಂಯೋಜಕಿ ಯುಲಾಲಿಯಾ ಡಿಸೋಜರವರು, ಎಲ್ಲಾ ಸದಸ್ಯರನ್ನು ಹಾಗೂ ಸಾರ್ವಜನಿಕರನ್ನು ಈ ಸಮಾರಂಭದಲ್ಲಿ ಪಾಲ್ಗೊಳ್ಳಲು ಆತ್ಮೀಯವಾಗಿ ಆಹ್ವಾನಿಸಿದ್ದಾರೆ. ಸಮಾರಂಭದ ನಂತರ ಸ್ನೇಹಸಮಾಗಮ ಮತ್ತು ಭೋಜನವನ್ನು ಏರ್ಪಡಿಸಲಾಗಿದೆ.

You may also like

News

ಮಾಣಿ ಗ್ರಾಮದಲ್ಲಿ ಹಳೆ ಮನೆ ದುರಸ್ತಿ ಪರವಾನಗಿ ಪಡೆದು ಸರಕಾರಿ ಜಮೀನಿನ ಮೇಲೆ ಅಕ್ರಮವಾಗಿ ನಿರ್ಮಿಸಿದ ಐಶಾರಾಮಿ ಬಂಗ್ಲೆ

ಯಾವುದೇ ದಾಖಲೆಗಳಿಲ್ಲದೆ ಸರಕಾರಕ್ಕೆ ವಂಚನೆ ಮಾಡಿದ್ದನ್ನು ಬಯಲಿಗೆಳೆದ ಸಾಮಾಜಿಕ ಕಾರ್ಯಕರ್ತ ಅತಿಕ್ರಮಿತ ಕಟ್ಟಡ ಕೂಡಲೇ ತೆರವುಗೊಳಿಸಲು ಲೂಸಿಯಾ ಮೆಟಿಲ್ಡಾ ಪಿಂಟೊರವರಿಗೆ ಬಂಟ್ವಾಳ ತಹಶೀಲ್ದಾರ್ ನೋಟಿಸ್ ಜಾರಿ ಮಾಣಿ
News

ನಕಲಿ ದಾಖಲೆ ಪ್ರಕರಣದಲ್ಲಿ ಆರೋಪಿ ಅಬ್ದುಲ್ ಹಾಶೀಮ್ ಬಂಧನ

ನಕಲಿ ದಾಖಲೆ ಸೃಷ್ಟಿಸಿ ನ್ಯಾಯಾಲಯವನ್ನು ವಂಚಿಸಿದ ಭೂಪ ಪುತ್ತೂರು ತಾಲೂಕಿನ ಪಡುವನ್ನೂರು ಗ್ರಾಮದ 34 ವರ್ಷ ಪ್ರಾಯದ ಅಬ್ದುಲ್ ಹಾಶೀಮ್  ಎಂಬಾತನನ್ನು ಉಪ್ಪಿನಂಗಡಿ ಪೊಲೀಸರು ನವೆಂಬರ್ 6ರಂದು

You cannot copy content of this page