November 8, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮೈಸೂರು ಧರ್ಮಕ್ಷೇತ್ರದ ನೂತನ ಧರ್ಮಾಧ್ಯಕ್ಷರ ಪ್ರತಿಷ್ಠಾಪನಾ ಹಾಗೂ ಅಧಿಕಾರ ಹಸ್ತಾಂತರ

ನಾಳೆ ಅಕ್ಟೋಬರ್ 7ರಂದು ಮಂಗಳವಾರ ಸಂಜೆ 4:30ಕ್ಕೆ ಮೈಸೂರಿನ ಸಂತ ಜೋಸೆಫ್ ಪ್ರಧಾನ ದೇವಾಲಯದಲ್ಲಿ ಭವ್ಯ ಸಮಾರಂಭ

ಮೈಸೂರು ಧರ್ಮಕ್ಷೇತ್ರದ ನೂತನ ಬಿಷಪ್ ಆಗಿ ನೇಮಕಗೊಂಡ ಪರಮಪೂಜ್ಯ ಡಾ. ಫ್ರಾನ್ಸಿಸ್ ಸೆರಾವೋ ಎಸ್‌.ಜೆ. ರವರ ಪ್ರತಿಷ್ಠಾಪನೆ ಮತ್ತು ಅಧಿಕಾರ ಹಸ್ತಾಂತರ ಸಮಾರಂಭ ನಾಳೆ ಅಕ್ಟೋಬರ್ 7ರಂದು ಮಂಗಳವಾರ ಸಂಜೆ 4:30ಕ್ಕೆ ಮೈಸೂರಿನ ಸಂತ ಜೋಸೆಫ್ ಪ್ರಧಾನ ದೇವಾಲಯದಲ್ಲಿ ನಡೆಯಲಿದೆ.

ಈ ಭವ್ಯ ಸಮಾರಂಭಕ್ಕೆ ಬೆಂಗಳೂರು ಮಹಾ ಧರ್ಮಕ್ಷೇತ್ರದ ಅತೀ ಗೌರವಾನ್ವಿತ ಆರ್ಚ್‌ ಬಿಷಪ್ ಡಾ. ಪೀಟರ್ ಮಚಾದೊರವರು ಆಗಮಿಸಲಿದ್ದಾರೆ. ಅಭಿನಂದನಾ ಕಾರ್ಯಕ್ರಮವನ್ನು ಭಾರತ ಮತ್ತು ನೇಪಾಳದ ಅಪೊಸ್ತೋಲಿಕ್ ನುಂಸಿಯೋ ಅತೀ ಗೌರವಾನ್ವಿತ ಡಾ. ಲಿಯೋ ಪೋಲ್ಡೋ ಗಿರೆಲ್ಲಿ ಅವರ ಅಧ್ಯಕ್ಷತೆಯಲ್ಲಿ ನಡೆಸಲಾಗುವುದು.

ಬೆಂಗಳೂರು ಮಹಾ ಧರ್ಮಕ್ಷೇತ್ರದ ನಿವೃತ್ತ ಆರ್ಚ್ ಬಿಷಪ್ ಹಾಗೂ ಪ್ರಸ್ತುತ ಮೈಸೂರು ಧರ್ಮಕ್ಷೇತ್ರದ ಅಪೊಸ್ತೋಲಿಕ್ ಆಡಳಿತಾಧಿಕಾರಿಯಾಗಿರುವ ಅತೀ ವಂದನೀಯ ಡಾ. ಬರ್ನಾರ್ಡ್ ಮೊರಾಸ್ ಈ ಸಂದರ್ಭದಲ್ಲಿ ಉಪಸ್ಥಿತಲಿರುವರು. ವಿವಿಧ ಧರ್ಮಕ್ಷೇತ್ರಗಳ ಧರ್ಮಾಧ್ಯಕ್ಷರು, ಧರ್ಮಗುರುಗಳು, ಧರ್ಮ ಭಗಿನಿಯರು ಹಾಗೂ ಸಾವಿರಾರು ಭಕ್ತಾಧಿಗಳು ಈ ಪ್ರತಿಷ್ಠಾಪನಾ ಭವ್ಯ ಸಮಾರಂಭಕ್ಕೆ ಸಾಕ್ಷಿಯಾಗಲಿರುವರು.

You may also like

News

ಮಾಣಿ ಗ್ರಾಮದಲ್ಲಿ ಹಳೆ ಮನೆ ದುರಸ್ತಿ ಪರವಾನಗಿ ಪಡೆದು ಸರಕಾರಿ ಜಮೀನಿನ ಮೇಲೆ ಅಕ್ರಮವಾಗಿ ನಿರ್ಮಿಸಿದ ಐಶಾರಾಮಿ ಬಂಗ್ಲೆ

ಯಾವುದೇ ದಾಖಲೆಗಳಿಲ್ಲದೆ ಸರಕಾರಕ್ಕೆ ವಂಚನೆ ಮಾಡಿದ್ದನ್ನು ಬಯಲಿಗೆಳೆದ ಸಾಮಾಜಿಕ ಕಾರ್ಯಕರ್ತ ಅತಿಕ್ರಮಿತ ಕಟ್ಟಡ ಕೂಡಲೇ ತೆರವುಗೊಳಿಸಲು ಲೂಸಿಯಾ ಮೆಟಿಲ್ಡಾ ಪಿಂಟೊರವರಿಗೆ ಬಂಟ್ವಾಳ ತಹಶೀಲ್ದಾರ್ ನೋಟಿಸ್ ಜಾರಿ ಮಾಣಿ
News

ನಕಲಿ ದಾಖಲೆ ಪ್ರಕರಣದಲ್ಲಿ ಆರೋಪಿ ಅಬ್ದುಲ್ ಹಾಶೀಮ್ ಬಂಧನ

ನಕಲಿ ದಾಖಲೆ ಸೃಷ್ಟಿಸಿ ನ್ಯಾಯಾಲಯವನ್ನು ವಂಚಿಸಿದ ಭೂಪ ಪುತ್ತೂರು ತಾಲೂಕಿನ ಪಡುವನ್ನೂರು ಗ್ರಾಮದ 34 ವರ್ಷ ಪ್ರಾಯದ ಅಬ್ದುಲ್ ಹಾಶೀಮ್  ಎಂಬಾತನನ್ನು ಉಪ್ಪಿನಂಗಡಿ ಪೊಲೀಸರು ನವೆಂಬರ್ 6ರಂದು

You cannot copy content of this page