April 15, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಚಂದ್ಕೂರು ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಕ್ಷೇತ್ರ ಕಲೆ ಕಾರಣಿಕದ ನೆಲೆ – ದಯಾನಂದ  ಕತ್ತಲ್ ಸಾರ್

ಚಂದ್ಕೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ತಾಯಿ ದುರ್ಗಾಮಾತೆಗೆ ಅತ್ಯಂತ ಪ್ರೀತಿಯ ಸೇವೆಯಾಗಿರುವ ಪಿಲಿನಲಿಕೆ ಸೇವೆಯನ್ನು ಹೇಮಂತ್‌ ಕೆದ್ದೇಲುರವರು ಉತ್ತಮ ರೀತಿಯಲ್ಲಿ ಆಯೋಜಿಸಿದ್ದಾರೆ. ಕಲಾಸೇವೆಯನ್ನು ಅರ್ಪಿಸುವುದಲ್ಲದೆ, ತುಳುನಾಡಿನ ಸಂಸ್ಕೃತಿ ಆಚರಣೆಯನ್ನು ಉಳಿಸಿ, ಬೆಳೆಸಿ, ಹತ್ತಾರು ಜನಕ್ಕೆ ಪರಿಚಯಿಸುವ ಕಾರ್ಯವನ್ನೂ ಮಾಡಿದ್ದಾರೆ ಎಂದು ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷರು ತುಳು ವಿಧ್ವಾಂಸಾರದ ದಯಾನಂದ ಕತ್ತಲ್ ಸಾರ್ ಹೇಳಿದರು.

ಅವರು ಚಂದ್ಕೂರು ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಅಂಗವಾಗಿ ನಡೆದ ಪಿಲಿನಲಿಕೆ ಕಾರ್ಯಕ್ರಮದ ಸಭಾ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುತ್ತಾ, ಚಂದ್ಕೂರು ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನವು ಕಲೆ ಕಾರಣಿಕದ ನೆಲೆಯಾಗಿದ್ದು, ಪುರಾತನ ಕಾಲದಲ್ಲಿ ಈ ಸನ್ನಿಧಿಯಲ್ಲಿ ಹೊರಾಂಗಣ ಮಾತ್ರವಲ್ಲದೆ ಒಳಂಗಾಣದಲ್ಲೂ ರಥೋತ್ಸವ ನಡೆಯುತ್ತಿದ್ದಂತಹ ವೈಭವದ ಸ್ಥಳವಾಗಿತ್ತು. ಈಗಲೂ ಕ್ಷೇತ್ರದಲ್ಲಿ ಸಾಕಷ್ಟು ಕಾರಣಿಕವಿದೆ. ನಂಬಿದವರನ್ನು ದೇವಿ ಕೈಬಿಟ್ಟಿಲ್ಲ ಎಂದರು.

ಮುಖ್ಯ ಅತಿಥಿಯಾಗಿದ್ದ ಖ್ಯಾತ ವಕೀಲರಾದ ಬಿ. ಧನಂಜಯ್ ರಾವ್ ಮಾತನಾಡಿ, ದೇವಸ್ಥಾನದ ಬ್ರಹ್ಮ ಕಲಶೋತ್ಸವ ಸಮಯದಲ್ಲಿ ಸಹಕರಿಸಿದ ಗ್ರಾಮಸ್ಥರ ಸೇವಾ ಕಾರ್ಯವನ್ನು ಶ್ಲಾಘಿಸಿ ಕ್ಷೇತ್ರವು ಇನ್ನಷ್ಟು ಅಭಿವೃದ್ಧಿಯಾಗಲು ಭಕ್ತಾದಿಗಳು ಸಹಕರಿಸಬೇಕು ಎಂದು ಮನವಿ ಮಾಡಿದರು.

You may also like

News

2026-27 ಶಾಲಾ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ – ಮೇ 29ರಿಂದ ತರಗತಿ ಆರಂಭ

2026-27ನೇ ಸಾಲಿನ ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಶೈಕ್ಷಣಿಕ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿದೆ.
News

ಮಗಳನ್ನೇ ಕೊಂದ ತಾಯಿ ನೇಣಿಗೆ ಶರಣು – ವೈಟ್‌ಫೀಲ್ಡ್‌ನಲ್ಲಿ ಕೌಟುಂಬಿಕ ದುರಂತ

ಸಿಲಿಕಾನ್ ಸಿಟಿಯ ವೈಟ್‌ಫೀಲ್ಡ್‌ನ ಇಮ್ಮಡಿಹಳ್ಳಿಯಲ್ಲಿ ಮರುಕಳಿಸದಂತಹ ದಾರುಣ ಘಟನೆಯೊಂದು ನಡೆದಿದೆ. ಮಾನಸಿಕ ಖಿನ್ನತೆಗೆ ಒಳಗಾಗಿದ್ದ ತಾಯಿಯೊಬ್ಬರು ತನ್ನ ಸ್ವಂತ ಮಗಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ಬಳಿಕ ತಾವೂ

You cannot copy content of this page