July 13, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಚಂದ್ಕೂರು ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಕ್ಷೇತ್ರ ಕಲೆ ಕಾರಣಿಕದ ನೆಲೆ – ದಯಾನಂದ  ಕತ್ತಲ್ ಸಾರ್

ಚಂದ್ಕೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ತಾಯಿ ದುರ್ಗಾಮಾತೆಗೆ ಅತ್ಯಂತ ಪ್ರೀತಿಯ ಸೇವೆಯಾಗಿರುವ ಪಿಲಿನಲಿಕೆ ಸೇವೆಯನ್ನು ಹೇಮಂತ್‌ ಕೆದ್ದೇಲುರವರು ಉತ್ತಮ ರೀತಿಯಲ್ಲಿ ಆಯೋಜಿಸಿದ್ದಾರೆ. ಕಲಾಸೇವೆಯನ್ನು ಅರ್ಪಿಸುವುದಲ್ಲದೆ, ತುಳುನಾಡಿನ ಸಂಸ್ಕೃತಿ ಆಚರಣೆಯನ್ನು ಉಳಿಸಿ, ಬೆಳೆಸಿ, ಹತ್ತಾರು ಜನಕ್ಕೆ ಪರಿಚಯಿಸುವ ಕಾರ್ಯವನ್ನೂ ಮಾಡಿದ್ದಾರೆ ಎಂದು ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷರು ತುಳು ವಿಧ್ವಾಂಸಾರದ ದಯಾನಂದ ಕತ್ತಲ್ ಸಾರ್ ಹೇಳಿದರು.

ಅವರು ಚಂದ್ಕೂರು ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಅಂಗವಾಗಿ ನಡೆದ ಪಿಲಿನಲಿಕೆ ಕಾರ್ಯಕ್ರಮದ ಸಭಾ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುತ್ತಾ, ಚಂದ್ಕೂರು ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನವು ಕಲೆ ಕಾರಣಿಕದ ನೆಲೆಯಾಗಿದ್ದು, ಪುರಾತನ ಕಾಲದಲ್ಲಿ ಈ ಸನ್ನಿಧಿಯಲ್ಲಿ ಹೊರಾಂಗಣ ಮಾತ್ರವಲ್ಲದೆ ಒಳಂಗಾಣದಲ್ಲೂ ರಥೋತ್ಸವ ನಡೆಯುತ್ತಿದ್ದಂತಹ ವೈಭವದ ಸ್ಥಳವಾಗಿತ್ತು. ಈಗಲೂ ಕ್ಷೇತ್ರದಲ್ಲಿ ಸಾಕಷ್ಟು ಕಾರಣಿಕವಿದೆ. ನಂಬಿದವರನ್ನು ದೇವಿ ಕೈಬಿಟ್ಟಿಲ್ಲ ಎಂದರು.

ಮುಖ್ಯ ಅತಿಥಿಯಾಗಿದ್ದ ಖ್ಯಾತ ವಕೀಲರಾದ ಬಿ. ಧನಂಜಯ್ ರಾವ್ ಮಾತನಾಡಿ, ದೇವಸ್ಥಾನದ ಬ್ರಹ್ಮ ಕಲಶೋತ್ಸವ ಸಮಯದಲ್ಲಿ ಸಹಕರಿಸಿದ ಗ್ರಾಮಸ್ಥರ ಸೇವಾ ಕಾರ್ಯವನ್ನು ಶ್ಲಾಘಿಸಿ ಕ್ಷೇತ್ರವು ಇನ್ನಷ್ಟು ಅಭಿವೃದ್ಧಿಯಾಗಲು ಭಕ್ತಾದಿಗಳು ಸಹಕರಿಸಬೇಕು ಎಂದು ಮನವಿ ಮಾಡಿದರು.

You may also like

News

ಮಂಗಳೂರಿನಲ್ಲಿ ರಾಷ್ಟ್ರೀಯ ಚಾರೊಳಿ ಸಾಹಿತ್ಯ ಸಮ್ಮೇಳನ; ಇಬ್ಬರು ಹಿರಿಯ ಕವಯತ್ರಿಯರಿಗೆ ಗೌರವ – ರೇಮಂಡ್ ಡಿಕುನಾ ತಾಕೊಡೆ

ಮಂಗಳೂರಿನಲ್ಲಿ ಜುಲೈ 19ರಂದು ಭಾನುವಾರ ನಡೆಯಲಿರುವ 5ನೇ ರಾಷ್ಟ್ರೀಯ ಕೊಂಕಣಿ ಚಾರೊಳಿ ಸಾಹಿತ್ಯ ಸಮ್ಮೇಳನದಲ್ಲಿ ಮಂಗಳೂರಿನ ಹಿರಿಯ ಕವಯತ್ರಿ ಅರುಂಧತಿ ವಿ. ರಾವ್ ಹಾಗೂ ಗೋವಾದ ಹಿರಿಯ
News

Mangalore Diocese Equips Parish Convenors to Strengthen Inter-Religious Harmony

The Inter-Religious Dialogue Commission of the Diocese of Mangalore conducted a training programme for Parish Convenors on Sunday at the

You cannot copy content of this page