October 8, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

CITU ನೂತನ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಬಿ. ಎಂ. ಭಟ್, ಪ್ರಧಾನ ಕಾರ್ಯದರ್ಶಿಯಾಗಿ ಸುನಿಲ್ ಕುಮಾರ್ ಬಜಾಲ್ ಸರ್ವಾನುಮತದಿಂದ ಆಯ್ಕೆ

ಕೇಂದ್ರ ಕಾರ್ಮಿಕ ಸಂಘಟನೆಯಾದ CITU ನ 18ನೇ ದಕ್ಷಿಣ ಕನ್ನಡ ಜಿಲ್ಲಾ ಸಮ್ಮೇಳನವು ಅಕ್ಟೋಬರ್ 5 ಮತ್ತು 6ರಂದು ಎರಡು ದಿನಗಳ ಕಾಲ ಮಂಗಳೂರಿನ ಬೋಳಾರದಲ್ಲಿ ಅತ್ಯಂತ ಯಶಸ್ವಿಯಾಗಿ ಜರುಗಿತು. ಜಿಲ್ಲೆಯ ಕಾರ್ಮಿಕ ವರ್ಗಕ್ಕೆ ಭಾಧಿಸುವ ಹಲವಾರು ಅಂಶಗಳ ಬಗ್ಗೆ ನಿರ್ಣಯಗಳನ್ನು ಕೈಗೊಂಡ ಸಮ್ಮೇಳನವು ಮುಂಬರುವ ದಿನಗಳಲ್ಲಿ ಪ್ರಬಲ ಹೋರಾಟಗಳನ್ನು ರೂಪಿಸಲು ತೀರ್ಮಾನ ಕೈಗೊಂಡಿತು. ಸಮ್ಮೇಳನವು ಮುಂದಿನ ಮೂರು ವರ್ಷಕ್ಕೆ ನೂತನ ಜಿಲ್ಲಾ ಸಮಿತಿಯನ್ನು ಆಯ್ಕೆಗೊಳಿಸಿತು.

ನೂತನ ಜಿಲ್ಲಾಧ್ಯಕ್ಷರಾಗಿ ಬಿ. ಎಂ. ಭಟ್, ಪ್ರಧಾನ ಕಾರ್ಯದರ್ಶಿಯಾಗಿ ಸುನಿಲ್ ಕುಮಾರ್ ಬಜಾಲ್ ಹಾಗೂ ಖಜಾಂಚಿಯಾಗಿ ಯೋಗೀಶ್ ಜಪ್ಪಿನಮೊಗರು ಅವರನ್ನು ಸರ್ವಾನುಮತದಿಂದ ಆರಿಸಲಾಯಿತು. ಉಪಾಧ್ಯಕ್ಷರುಗಳಾಗಿ ಜೆ. ಬಾಲಕೃಷ್ಣ ಶೆಟ್ಟಿ, ಸುಕುಮಾರ್ ತೊಕ್ಕೋಟು, ವಸಂತ ಆಚಾರಿ, ಪದ್ಮಾವತಿ ಶೆಟ್ಟಿ, ರಮಣಿ ಮೂಡಬಿದ್ರೆ, ಯಾದವ ಶೆಟ್ಟಿ, ಸುಂದರ ಕುಂಪಲ, ನೋಣಯ್ಯ ಗೌಡ ಹಾಗೂ ಕಾರ್ಯದರ್ಶಿಗಳಾಗಿ ರಾಧಾ ಮೂಡಬಿದ್ರೆ, ರವಿಚಂದ್ರ ಕೊಂಚಾಡಿ, ಗಿರಿಜಾ ಮೂಡಬಿದ್ರೆ, ಬಿ. ಕೆ. ಇಮ್ತಿಯಾಜ್, ವಸಂತಿ ಕುಪ್ಪೆಪದವು, ಲೋಕಾಕ್ಷಿ ಬಂಟ್ವಾಳ, ಈಶ್ಬರೀ ಬೆಳ್ತಂಗಡಿ, ರೋಹಿದಾಸ್ ಭಟ್ನಗರ, ಭವ್ಯಾ ಮುಚ್ಚೂರುರವರು ಆಯ್ಕೆಗೊಂಡರು. ಜಿಲ್ಲಾ ಸಮಿತಿ ಸದಸ್ಯರುಗಳಾಗಿ ವಿವಿಧ ಯೂನಿಯನ್ ಹಾಗೂ ಸಂಘಟನೆಗಳ 35 ಮಂದಿ ಪ್ರಮುಖ ನಾಯಕರುಗಳನ್ನು ಆರಿಸಲಾಯಿತು.

You may also like

News

Devotional Procession Marks Grand Finale of Marian Exhibition at Saint Anthony Ashram

The two-day grand Marian Rosary exhibition held at Saint Anthony Ashram, Jeppu, came to a devout conclusion on Tuesday, October
News

ಪಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ ಅಕ್ಟೋಬರ್ 12 ರಂದು ವಾರ್ಷಿಕ ಹಬ್ಬದ ಸಂಭ್ರಮ

ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ಎಲಿಯಾಸ್ ಫೆರ್ನಾಂಡಿಸ್ ರವರಿಂದ ಪತ್ರಿಕಾ ಪ್ರಕಟನೆ ಮಂಗಳೂರು ಧರ್ಮಕ್ಷೇತ್ರಕ್ಕೆ ಒಳಪಟ್ಟ ಪಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ ಅಕ್ಟೋಬರ್ 12ರಂದು ಭಾನುವಾರ

You cannot copy content of this page