July 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ಉಪಾಧ್ಯಕ್ಷರಾಗಿ ಸಯಾನ್ ಜೋಶ್ವಾ ಪಿರೇರಾ ಆಯ್ಕೆ

ದೆರೆಬೈಲ್ ಚರ್ಚ್ ನ ಯುವಕ ಜಿಲ್ಲಾ ಮಟ್ಟದ ಚುನಾವಣೆಯಲ್ಲಿ ಮೆರೆದ ಸಾಧನೆ

ದಕ್ಷಿಣ ಕನ್ನಡ ಜಿಲ್ಲೆಯ ಪಿಯುಸಿ ವಿದ್ಯಾರ್ಥಿಗಳ ಸರ್ವ ಕಾಲೇಜು ವಿದ್ಯಾರ್ಥಿ ಸಂಘ (ರಿ.) ಇದರ ಉಪಾಧ್ಯಕ್ಷರಾಗಿ ಸಯಾನ್ ಜೋಶ್ವಾ ಪಿರೇರಾ ಆಯ್ಕೆಯಾಗಿದ್ದಾರೆ.

ಮಂಗಳೂರು ಸಂತ ಅಲೋಸಿಯಸ್ ಕಾಲೇಜಿನಲ್ಲಿ ಪಿಯುಸಿ ಕಲಿಯುತ್ತಿರುವ ಸಯಾನ್ ರವರು ತಮ್ಮ ನಾಯಕತ್ವ ಗುಣ, ವಿನಯಶೀಲತೆ ಹಾಗೂ ಇತರರನ್ನು ಪ್ರೇರೇಪಿಸುವ ಸಾಮರ್ಥ್ಯದಿಂದ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ತಂಡಭಾವನೆ, ಜವಾಬ್ದಾರಿತನ ಮತ್ತು ವಿದ್ಯಾರ್ಥಿ ಕಲ್ಯಾಣದ ದೃಷ್ಟಿಕೋನ ಇವರನ್ನು ಈ ಗೌರವಾನ್ವಿತ ಸ್ಥಾನಕ್ಕೆ ತಂದು ನಿಲ್ಲಿಸಿದೆ.

ಆತ್ಮವಿಶ್ವಾಸಿ ಮತ್ತು ಸಹಾನುಭೂತಿಶೀಲ ಯುವ ನಾಯಕನಾದ ಸಯಾನ್ ರವರು ಸೇವಾ ಮನೋಭಾವ ಮತ್ತು ಶ್ರೇಷ್ಠತೆಗಾಗಿ ಮಾಡಿದ ಹೋರಾಟದ ಪ್ರತೀಕವಾಗಿದ್ದಾರೆ. ಈ ಹೊಸ ನಾಯಕತ್ವದ ಅಧ್ಯಾಯದಲ್ಲಿ ದೇವರ ಆಶೀರ್ವಾದದೊಂದಿಗೆ ಯಶಸ್ಸುಗಳು ದೊರಕಲಿ ಎಂದು ಮಂಗಳೂರು ಧರ್ಮಕ್ಷೇತ್ರದ ದೆರೆಬೈಲ್ ಧರ್ಮಕೇಂದ್ರದ ಸಮುದಾಯ ಹಾರೈಸಿದೆ.

ಸಯಾನ್ ಜೋಶ್ವಾರವರಿಗೆ ದೆರೆಬೈಲ್ ಚರ್ಚ್ ನ ಪ್ರಧಾನ ಧರ್ಮಗುರು ವಂದನೀಯ ಪಾದರ್ ಜೋಸೆಫ್ ಮಾರ್ಟಿಸ್, ಸಹಾಯಕ ಧರ್ಮಗುರು ವಂದನೀಯ ಪಾದರ್ ಸ್ಟೀವನ್ ನೆಲ್ಸನ್ ಪೆರಿಸ್, ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷೆ ಶೀಲಾ ಡಿಸೋಜ, ಕಾರ್ಯದರ್ಶಿ ಡೆನ್ಸಿಲ್ ಪಿಂಟೊ, ಆಯೋಗಗಳ ಸಂಯೋಜಕ ಅನಿಲ್ ಪಾತ್ರಾವೊ, AICU ರಾಜ್ಯಾಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್, ಕರ್ನಾಟಕ ರಾಜ್ಯ ವಾಯುಮಾಲಿನ್ಯ ನಿಯಂತ್ರಣ ಮಂಡಳಿ ಸದಸ್ಯ ಹಾಗೂ ಉದ್ಯಮಿ ಪಿಯೂಸ್ ಎಲ್. ರೊಡ್ರಿಗಸ್, ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ಇದರ ಕೇಂದ್ರೀಯ ಅಧ್ಯಕ್ಷ ಸಂತೋಷ್ ಡಿಸೋಜ ಬಜ್ಪೆ, ಪ್ರಧಾನ ಕಾರ್ಯದರ್ಶಿ ವಿಲ್ಮಾ ಮೊಂತೇರೊ ದೆರೆಬೈಲ್, ದೆರೆಬೈಲ್ ಘಟಕ ಅಧ್ಯಕ್ಷ ನೆಲ್ಸನ್ ಕ್ಯಾಸ್ತೆಲಿನೊ, ಕಾರ್ಯದರ್ಶಿ ಶೈಲಾ ನೊರೊನ್ಹಾ ಮತ್ತು ದೆರೆಬೈಲ್ ಧರ್ಮಕೇಂದ್ರದ ಸದಸ್ಯರಿಂದ ಶುಭಾಶಯಗಳು ಮತ್ತು ಆಶೀರ್ವಾದಗಳ ಮಹಾಪೂರವೇ ಹರಿದು ಬಂದಿದೆ.

ಸಯಾನ್ ಜೋಶ್ವಾ ಪಿರೇರಾರವರು ದೆರೆಬೈಲ್ ನ ಜೋಸೆಫ್ ಪಿರೇರಾ ಮತ್ತು ಸೀಮಾ ದಂಪತಿಗಳ ಪುತ್ರ.

You may also like

News

ಬಸ್ಸಿನಲ್ಲಿ ಕಾಲೇಜು ವಿದ್ಯಾರ್ಥಿನಿಯರಿಗೆ ಗುಪ್ತಾಂಗ ಪ್ರದರ್ಶಿಸಿ ಲೈಂಗಿಕ ಕಿರುಕುಳ – ಸೆಲೆನ ಬಸ್ ಕಂಡಕ್ಟರ್ ಬಂಧನ

ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿಯರನ್ನು ಗುರಿಯಾಗಿಸಿ ಕೊಂಡು ಅಸಭ್ಯವಾಗಿ ವರ್ತಿಸಿ, ಗುಪ್ತಾಂಗ ಪ್ರದರ್ಶನ ಮಾಡಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸೆಲೆನ ಬಸ್ ಕಂಡಕ್ಟರ್‌ನನ್ನು ಮಂಗಳೂರು
News

ದಾರುಸ್ಸಲಾಂ ದಶಮಾನೋತ್ಸವ ಹಾಗೂ ಪ್ರಥಮ ಸನದುದಾನ ಮಹಾಸಭೆ – ಭವ್ಯ ಸ್ವಾಗತ ಸಮಿತಿ ರಚನೆ

ಸ್ಥಳೀಯ ಸಂಸ್ಥೆಯಾದ ದಾರುಸ್ಸಲಾಂ ಸೆಂಟರ್‌ನ 10ನೇ ವರ್ಷದ ವಾರ್ಷಿಕೋತ್ಸವ ಸಂಭ್ರಮ ಹಾಗೂ ಪ್ರಥಮ ಸನದುದಾನ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೃಹತ್ ಸ್ವಾಗತ ಸಮಿತಿಯನ್ನು ರಚಿಸಲಾಗಿದೆ. ಈ ಐತಿಹಾಸಿಕ ಕಾರ್ಯಕ್ರಮವು

You cannot copy content of this page