August 7, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ತುಮಕೂರು ಜಿಲ್ಲೆಯಲ್ಲಿ 406 ಅಧಿಕಾರಿಗಳಿಗೆ ಮಾಹಿತಿ ಹಕ್ಕು ಕಾಯ್ದೆ ಉಲ್ಲಂಘನೆ — ದಂಡ ಮತ್ತು ಶಿಸ್ತು ಕ್ರಮ ಆರಂಭ

ಮಾಹಿತಿ ಹಕ್ಕು ಅರ್ಜಿಗಳ ಆನ್‌ಲೈನ್ ಮ್ಯಾಪಿಂಗ್‌ಗೆ ಎನ್‌ಐಸಿಗೆ ಸೂಚನೆ – ರಾಜ್ಯ ಮಾಹಿತಿ ಆಯೋಗದ ಆಯುಕ್ತ ಡಾ. ಹರೀಶ್ ಕುಮಾರ್ ಹಾಗೂ ಬದ್ರುದ್ದೀನ್ ಕೆ.

ತುಮಕೂರು ಜಿಲ್ಲೆಯಲ್ಲಿ ಮಾಹಿತಿ ಹಕ್ಕು ಕಾಯ್ದೆಯಡಿ ಸಲ್ಲಿಕೆಯಾಗುವ ಅರ್ಜಿಗಳನ್ನು ಪಾರದರ್ಶಕವಾಗಿ ನಿರ್ವಹಿಸಲು ರಾಷ್ಟ್ರೀಯ ಮಾಹಿತಿ ಕೇಂದ್ರ (NIC) ಗೆ ಆನ್‌ಲೈನ್ ಮ್ಯಾಪಿಂಗ್ ವ್ಯವಸ್ಥೆ ರೂಪಿಸಲು ಸೂಚನೆ ನೀಡಲಾಗಿದೆ. ಈ ಕ್ರಮದಿಂದ ಜನಸಾಮಾನ್ಯರಿಗೆ ಸಕಾಲದಲ್ಲಿ ಮಾಹಿತಿ ಸಿಗುವುದರ ಜೊತೆಗೆ ಇಲಾಖಾ ಕಾರ್ಯಗಳಲ್ಲಿ ಪಾರದರ್ಶಕತೆ ಹೆಚ್ಚುವ ನಿರೀಕ್ಷೆಯಿದೆ. ಎಲ್ಲಾ ಸರ್ಕಾರಿ ಇಲಾಖೆಗಳು ತಮ್ಮ ಇಲಾಖೆಗೆ ಬಂದಿರುವ ಅರ್ಜಿಗಳನ್ನು ಎನ್‌ಐಸಿಗೆ ಒದಗಿಸಲು ಸೂಚಿಸಲಾಗಿದೆ.

ವಿಳಂಬ, ನಿರ್ಲಕ್ಷ್ಯ ಮತ್ತು ಸುಳ್ಳು ಮಾಹಿತಿ ನೀಡಿದವರಿಗೆ ಕಟ್ಟುನಿಟ್ಟಿನ ಕ್ರಮ

ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿದಾರರಿಗೆ ಸಮಯಕ್ಕೆ ಸರಿಯಾಗಿ ಮಾಹಿತಿ ನೀಡದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗಿದ್ದು, ಈವರೆಗೆ 406 ಅಧಿಕಾರಿಗಳಿಗೆ ದಂಡ ವಿಧಿಸಲಾಗಿದೆ. ವಿಳಂಬದಿಂದ ಅರ್ಜಿದಾರರಿಗೆ ನಷ್ಟ ಉಂಟಾದರೆ ಒಂದು ಲಕ್ಷ ರೂಪಾಯಿವರೆಗೆ ಪರಿಹಾರ ನೀಡಲು ಆಯೋಗಕ್ಕೆ ಅಧಿಕಾರವಿದೆ. ಅರ್ಜಿ ತಿರಸ್ಕಾರ ಅಥವಾ ಸುಳ್ಳು ಮಾಹಿತಿ ನೀಡಿದರೆ ಕ್ರಿಮಿನಲ್ ಪ್ರಕರಣವೂ ದಾಖಲಿಸುವ ಸಾಧ್ಯತೆ ಇದೆ ಎಂದು ರಾಜ್ಯ ಮಾಹಿತಿ ಆಯೋಗ ಎಚ್ಚರಿಸಿದೆ.

ಮಾಹಿತಿ ಹಕ್ಕು ಅರ್ಜಿಗಳ ವಿಲೇವಾರಿಯಲ್ಲಿ ತುಮಕೂರು ಜಿಲ್ಲೆ ರಾಜ್ಯದ 9ನೇ ಸ್ಥಾನದಲ್ಲಿ

ಮಾಹಿತಿ ಹಕ್ಕು ಕಾಯ್ದೆಯಡಿ ಸಾರ್ವಜನಿಕರಿಂದ ಬಂದ ಅರ್ಜಿಗಳನ್ನು 30 ದಿನಗಳೊಳಗೆ ವಿಲೇವಾರಿ ಮಾಡಬೇಕಾದರೂ, ಕೆಲ ಅಧಿಕಾರಿಗಳ ನಿರ್ಲಕ್ಷ್ಯದಿಂದ ವಿಳಂಬವಾಗುತ್ತಿದೆ. ಪ್ರಸ್ತುತ ರಾಜ್ಯದಲ್ಲಿ 41,034 ಮೇಲ್ಮನವಿ ಅರ್ಜಿಗಳು ಬಾಕಿ ಇದ್ದು, ತುಮಕೂರು ಜಿಲ್ಲೆಯಲ್ಲಿ ಮಾತ್ರ 1,323 ಮೇಲ್ಮನವಿ ಅರ್ಜಿಗಳು ಬಾಕಿಯಿವೆ. ಈ ಹಿನ್ನೆಲೆಯಲ್ಲಿ ಆಯೋಗವು ಅಧಿಕಾರಿಗಳಿಗೆ ತರಬೇತಿ ಮತ್ತು ಜಾಗೃತಿ ಕಾರ್ಯಕ್ರಮಗಳನ್ನು ರಾಜ್ಯದಾದ್ಯಂತ ಹಮ್ಮಿಕೊಂಡಿದೆ.

ಪ್ರಜಾಪ್ರಭುತ್ವ ಬಲಪಡಿಸುವ ಸಾಧನ — ಮಾಹಿತಿ ಹಕ್ಕು ಕಾಯ್ದೆ

ಮಾಹಿತಿ ಹಕ್ಕು ಕಾಯ್ದೆ ಪ್ರಜಾಪ್ರಭುತ್ವವನ್ನು ಬಲಪಡಿಸುವ ಮಹತ್ವದ ಸಾಧನವಾಗಿದೆ. ಪ್ರತಿ ಸರ್ಕಾರಿ ಅಧಿಕಾರಿಯು ಈ ಕಾಯ್ದೆಯ ಕುರಿತು ಸಂಪೂರ್ಣ ತಿಳುವಳಿಕೆ ಹೊಂದಿ, ದಾಖಲೆಗಳ ನಿರ್ವಹಣೆಯನ್ನು ಶಿಸ್ತಿನಿಂದ ಕಾಪಾಡಿಕೊಳ್ಳಬೇಕು.ಅರ್ಜಿ ಸಲ್ಲಿಸಿದ ನಾಗರಿಕರನ್ನು ಕಾಡಬಾರದು ಹಾಗೂ ಅವರ ಪ್ರಶ್ನೆಗಳಿಗೆ ಪಾರದರ್ಶಕ ಉತ್ತರ ನೀಡುವುದು ಅಧಿಕಾರಿಗಳ ಕರ್ತವ್ಯ ಎಂದು ಅವರು ಸೂಚಿಸಿದ್ದಾರೆ – ರಾಜ್ಯ ಮಾಹಿತಿ ಆಯೋಗದ ಆಯುಕ್ತ ಡಾ. ಹರೀಶ್ ಕುಮಾರ್ ಹಾಗೂ ಬದ್ರುದ್ದೀನ್ ಕೆ. ಅವರು ತಿಳಿಸಿದ್ದಾರೆ.

ತುಮಕೂರು ಜಿಲ್ಲೆಯಲ್ಲಿ ಮಾಹಿತಿ ಹಕ್ಕು ಕಾಯ್ದೆ ಜಾರಿಗೆ ತರಲು ಬದ್ಧ ಕ್ರಮಗಳು ನಡೆಯುತ್ತಿದ್ದು, ತಪ್ಪು ಮಾಡಿದ ಅಧಿಕಾರಿಗಳಿಗೆ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಜನರಿಗೂ ಸರ್ಕಾರದ ಕಾರ್ಯವೈಖರಿಯ ಕುರಿತು ತಿಳಿಯುವ ಹಕ್ಕು ಇದ್ದು, ಪಾರದರ್ಶಕ ಆಡಳಿತದ ದಿಕ್ಕಿನಲ್ಲಿ ತುಮಕೂರು ಜಿಲ್ಲೆ ಮುಂದಿನ ಹೆಜ್ಜೆ ಇಟ್ಟಿದೆ.

You may also like

News

ನೀರುಮಾರ್ಗದ ಚರ್ಚ್ ನ ಮಹಿಳಾ ಆಯೋಗ ಹಾಗೂ ಮದರ್ ಮೇರಿ ಮಹಿಳಾ ಸಂಘಟನೆಯ ಜಂಟಿ ಆಶ್ರಯದಲ್ಲಿ ಸಾಂಪ್ರದಾಯಿಕ ಆಹಾರ ಹಬ್ಬದ ಸಂಭ್ರಮ

ಮಂಗಳೂರು ಧರ್ಮಕ್ಷೇತ್ರಕ್ಕೆ ಒಳಪಟ್ಟ ನೀರುಮಾರ್ಗದ ಸಂತ ಜೋಸೆಫ್ ಕಾರ್ಮಿಕರ ದೇವಾಲಯದ ಮಹಿಳಾ ಆಯೋಗ ಹಾಗೂ ಮದರ್ ಮೇರಿ ಮಹಿಳಾ ಸಂಘಟನೆಯ ಜಂಟಿ ಆಶ್ರಯದಲ್ಲಿ ‘ಸಾಂಪ್ರದಾಯಿಕ ಆಹಾರ ಹಬ್ಬ’
News

Father Muller College of Nursing Strengthens Academic Collaborations Through Two more Strategic MoUs on Palliative Care and Counselling

Reinforcing its commitment to holistic nursing education, interdisciplinary learning, and community-oriented healthcare, Father Muller School & College of Nursing (FMCON)

You cannot copy content of this page