February 12, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಹೆಣ್ಣು ನೋಡೋ ನೆಪದಲ್ಲಿ 44.80 ಲಕ್ಷ ವಂಚನೆ – ವಿಟ್ಲ ಪೊಲೀಸರಿಂದ ಪ್ರಕರಣ ದಾಖಲು

ಕೇರಳದ ತಾವರಕಡನ್ ಮೂಲದ 53ವರ್ಷ ಪ್ರಾಯದ ಮಹಮ್ಮದ್ ಅಶ್ರಫ್ ಎಂಬವರು ಸೌದಿ ಅರೇಬಿಯಾದಲ್ಲಿ ಉದ್ಯೋಗದಲ್ಲಿದ್ದಾರೆ. 2024ರ ಸೆಪ್ಟೆಂಬರ್‌ನಲ್ಲಿ ಮದುವೆ ಸಲುವಾಗಿ ಮಂಗಳೂರಿಗೆ ಬಂದಿದ್ದ ಅವರು ಬಶೀರ್, ಸಫಿಯಾ ಹಾಗೂ ಇತರ ಆರೋಪಿತರ ಬಲೆಗೆ ಸಿಕ್ಕಿದ್ದಾರೆ.

ಪಿರ್ಯಾದಿದಾರರ ದೂರಿನಂತೆ, ಆರೋಪಿತರು “ಹೆಣ್ಣು ನೋಡೋ ನೆಪದಲ್ಲಿ” ಅಶ್ರಫ್ ರವರ ಫೋಟೋ ಹಾಗೂ ವಿಡಿಯೋಗಳನ್ನು ತೆಗೆದು, ನಂತರ ಅವುಗಳನ್ನು ಲೀಕ್ ಮಾಡುವುದಾಗಿ ಬೆದರಿಸಿ ಒಟ್ಟು ₹44.80 ಲಕ್ಷ ಹಣ ವಂಚಿಸಿದ್ದಾರೆ.

ಈ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ. 145/2025, ಕಲಂ 318(4), 308(2), 115(2), 351(2), r/w 3(5) BNS-2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ಪ್ರಾರಂಭಿಸಲಾಗಿದೆ. ಪೊಲೀಸರು ಆರೋಪಿತರ ಪತ್ತೆಹಚ್ಚಲು ತನಿಖೆಯನ್ನು ಮುಂದುವರೆಸಿದ್ದಾರೆ.

You may also like

News

ಕಥೊಲಿಕ್ ಸಭಾ ಸುರತ್ಕಲ್ ವಲಯದ ದಶಮಾನೋತ್ಸವ ಸಂಭ್ರಮ

ಡ್ರಗ್ಸ್ ಮುಕ್ತ ಸಮಾಜ ನಿರ್ಮಾಣ – ವೆಲೆಂಟೈನ್ ಡಿಸೋಜ ನಿವೃತ್ತ DSP   ಸುರತ್ಕಲ್ ಇಲ್ಲಿನ ಸೆಕ್ರೆಡ್ ಹಾರ್ಟ್ ಚರ್ಚ್ ಸಭಾಂಗಣದಲ್ಲಿ ಫೆಬ್ರವರಿ 8ರಂದು ಭಾನುವಾರ ಕಥೊಲಿಕ್
News

ಕಾಸರಗೋಡು ನಗರಸಭೆಯ 9ನೇ ವಾರ್ಡ್ ಸಭೆ ಯಶಸ್ವಿ

ಮಾದರಿ ನಗರಸಭೆ ನಿರ್ಮಾಣಕ್ಕೆ ನಗರಸಭಾ ಅಧ್ಯಕ್ಷೆ ಶಾಹಿನಾ ಸಲೀಂ ಸಂಕಲ್ಪ ಕಾಸರಗೋಡು ನಗರಸಭೆಯ 2026–27ನೇ ವಾರ್ಷಿಕ ಯೋಜನೆ ರೂಪಿಕರಣದ ಅಂಗವಾಗಿ 9ನೇ ವಾರ್ಡ್‌ನ ನುಳ್ಳಿಪಾಡಿ (ಅಣಂಗೂರು, ಜೆ.ಪಿ.

You cannot copy content of this page