October 16, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ವಿಟ್ಲ, ಬಂಟ್ವಾಳ ಪೊಲೀಸ್ ಠಾಣಾ ಸಹಿತ 20 ಕ್ಕೂ ಹೆಚ್ಚು ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಅಸಾಮಿ ಬಂಧನ

20 ಕ್ಕೂ ಹೆಚ್ಚು ಪ್ರಕರಣಗಳಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಸಜಿಪ ಮೂಡ ಗ್ರಾಮದ ನಿವಾಸಿ  32 ವರ್ಷ ಪ್ರಾಯದ ವಾರೆಂಟ್ ಅಸಾಮಿ ಫಾರೂಕ್ @ ಉಮ್ಮರ್ ಫಾರೂಕ್ ಕೊನೆಗೂ ಪೊಲೀಸರ ಬಲೆಗೆ ಸಿಕ್ಕಿದ್ದಾನೆ. ಬಂಟ್ವಾಳ ತಾಲೂಕಿನ ಮದ್ವ ಪ್ರದೇಶದಲ್ಲಿ ಅಕ್ಟೋಬರ್ 15ರಂದು ಬುಧವಾರ ಬಂಧಿಸಲ್ಪಟ್ಟ ಈತನನ್ನು ಪೊಲೀಸರು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ವಿಧಿಸಿದೆ.

ಈತನ ವಿರುದ್ಧ ಉಪ್ಪಿನಂಗಡಿ, ಕಡಬ, ವಿಟ್ಲ, ಬಂಟ್ವಾಳ ನಗರ, ಬಂಟ್ವಾಳ ಗ್ರಾಮಾಂತರ, ಕೊಣಾಜೆ, ಬರ್ಕೆ ಮತ್ತು ಬಜಪೆ ಪೊಲೀಸ್ ಠಾಣೆಗಳಲ್ಲಿ ಹಲವು ಪ್ರಕರಣಗಳು ದಾಖಲಾಗಿದ್ದು, ಬಹುತೇಕವು ಮನೆ ಕಳವು, ದರೋಡೆ ಹಾಗೂ ಆಸ್ತಿ ಕಳವು ಪ್ರಕರಣಗಳಾಗಿವೆ.

ಉಪ್ಪಿನಂಗಡಿ ಠಾಣೆಯ ಅ.ಕ್ರ. 38/2020, 39/2020, 48/2012, 119/2020 ಹಾಗೂ ಕಡಬ ಠಾಣೆಯ 43 ರಿಂದ 46/2020 ರವರೆಗೆ ದಾಖಲಾಗಿರುವ ಪ್ರಕರಣಗಳಲ್ಲಿ ಈತನ ವಿರುದ್ಧ ಭಾರತೀಯ ದಂಡ ಸಂಹಿತೆಯ 457, 380, 201, 34 ಮುಂತಾದ ಕಲಂಗಳ ಅಡಿಯಲ್ಲಿ ಆರೋಪಗಳು ದಾಖಲಾಗಿವೆ.

You may also like

News

RSS ಚಟುವಟಿಕೆಗಳಿಂದ ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆಯಾಗಿದೆ – ಮಾಜಿ ಸಚಿವ ಬಿ. ರಮಾನಾಥ ರೈ

ಕಾಂಗ್ರೆಸ್ ಪಕ್ಷದ ಸೈದ್ಧಾಂತಿಕ ನಿಲುವು ಜಾತ್ಯತೀತತೆ ಅದಕ್ಕೇ ಜನ ಬೆಂಬಲ ರಾಜ್ಯದ ಸಚಿವರಾದ ಪ್ರಿಯಾಂಕ ಖರ್ಗೆ RSS ಚಟುವಟಿಕೆಗಳ ಕುರಿತು ನೀಡಿರುವ ಹೇಳಿಕೆ ಸರಿಯಾಗಿದೆ ಎಂದು ಮಾಜಿ
News

ದಕ್ಷಿಣ ಕನ್ನಡ ಜಿಲ್ಲಾ ರೆಡ್‌ಕ್ರಾಸ್ ಸೊಸೈಟಿಯ ವಾರ್ಷಿಕ ಸಭೆ

ಮಾನವೀಯ ಸೇವೆ ರೆಡ್‌ಕ್ರಾಸ್ ಸಂಸ್ಥೆಯ ಗುರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ರಕ್ತದಾನ, ಆರೋಗ್ಯ ಕಾಳಜಿ, ವಿಪತ್ತು ಪರಿಹಾರ ಸಹಿತ ಹಲವು ಸೇವಾ ಕಾರ್ಯಗಳ ಮೂಲಕ ರೆಡ್‌ಕ್ರಾಸ್ 

You cannot copy content of this page