May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಪಿಲಿಕುಳ ನಿಸರ್ಗಧಾಮದಲ್ಲಿ ಲೋಕಾಯುಕ್ತರ ಅನಿರೀಕ್ಷಿತ ದಾಳಿ

ನಿರ್ವಹಣಾ ಲೋಪದೋಷಗಳ ಪತ್ತೆತನಿಖೆ ಮುಂದುವರಿಕೆ

ಮಾನಸ ವಾಟರ್ ಪಾರ್ಕ್, ಮೃಗಾಲಯ ಸೇರಿದಂತೆ ಇತರ ಕಡೆಗಳಲ್ಲಿ  ಅವ್ಯವಹಾರ ಕಂಡು ಬಂದಲ್ಲಿ ಕೂಡಲೆ ಲೋಕಾಯುಕ್ತಕ್ಕೆ ದೂರು ನೀಡಲು ಸೂಚನೆ

ಕರ್ನಾಟಕ ಲೋಕಾಯುಕ್ತ ಮಂಗಳೂರು ವಿಭಾಗದ ಅಧಿಕಾರಿಗಳು ಅಕ್ಟೋಬರ್ 16ರಂದು ಗುರುವಾರ ಪಿಲಿಕುಳ ನಿಸರ್ಗಧಾಮದ ಅಭಿವೃದ್ಧಿ ಪ್ರಾಧಿಕಾರದಲ್ಲಿ ಅಚಾನಕ್‌ ಸರ್ಚ್ ಕಾರ್ಯಾಚರಣೆ ನಡೆಸಿದ್ದಾರೆ. ಮಂಗಳೂರು ಲೋಕಾಯುಕ್ತ ಕಚೇರಿಯ ಪೊಲೀಸ್ ಉಪಾಧೀಕ್ಷಕ ಡಾ. ಗಾನ ಪಿ. ಕುಮಾರ್ ಅವರ ನೇತೃತ್ವದಲ್ಲಿ, ಪೊಲೀಸ್ ನಿರೀಕ್ಷಕರಾದ ಭಾರತಿ ಜಿ., ರವಿ ಪೀರು ಪವಾರ್, ಸುರೇಶ್ ಕುಮಾರ್ ಪಿ. ಹಾಗೂ ಉಡುಪಿ ಲೋಕಾಯುಕ್ತದ ರಾಜೇಂದ್ರ ನಾಯ್ಕ್ ಎಂ.ಎನ್. ಸೇರಿದಂತೆ ಅಧಿಕಾರಿಗಳ ತಂಡ ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿತು.

ಪರಿಶೀಲನೆಯ ವೇಳೆ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಡಳಿತದಲ್ಲಿ ಕೆಲವು ಲೋಪದೋಷಗಳು ಪತ್ತೆಯಾಗಿದ್ದು, ಸಂಬಂಧಿತ ದಾಖಲೆಗಳ ಪರಿಶೀಲನೆ ಮುಂದುವರಿದಿದೆ. ಮೃಗಾಲಯ, ಗುತ್ತು ಮನೆ, ಮಾನಸ ವಾಟರ್ ಪಾರ್ಕ್, ಲೇಕ್ ಗಾರ್ಡನ್ ಹಾಗೂ ಸೈನ್ಸ್ ಮ್ಯೂಸಿಯಂ ಸೇರಿದಂತೆ ಅನೇಕ ಘಟಕಗಳಲ್ಲಿ ತನಿಖೆ ಕೈಗೊಳ್ಳಲಾಗಿದೆ.

ಸಾರ್ವಜನಿಕರು ಯಾವುದೇ ಅಕ್ರಮ ಅಥವಾ ಅವ್ಯವಹಾರಗಳ ಬಗ್ಗೆ ಮಾಹಿತಿ ನೀಡಲು ಲೋಕಾಯುಕ್ತ ಕಚೇರಿಯ ☎️ 0824-2950997 ಗೆ ಕರೆ ಮಾಡಬಹುದು ಅಥವಾ ನೇರವಾಗಿ ಕಚೇರಿಗೆ ಭೇಟಿ ನೀಡಿ ದೂರು ಸಲ್ಲಿಸಬಹುದು ಎಂದು ಲೋಕಾಯುಕ್ತ ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕರಾದ  (ಪ್ರಭಾರ) ಕುಮಾರಚಂದ್ರರವರು ತಿಳಿಸಿದ್ದಾರೆ.

You may also like

News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ
News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು

You cannot copy content of this page