April 15, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ತಲೆಮರೆಸಿಕೊಂಡ ಆರೋಪಿಗಳ ಜಾಮೀನುದಾರರ ವಿರುದ್ದ ಕ್ರಮ

ಆರೋಪಿಗಳು ಸ್ವತಃ ನ್ಯಾಯಾಲಯಕ್ಕೆ ಶರಣು – ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ

ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿರುವ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸ್ ಇಲಾಖೆಯ ಆರೋಪಿಗಳ ಜಾಮೀನುದಾರರ ವಿರುದ್ದ ಕ್ರಮಕ್ಕೆ ಮುಂದಾಗಿದೆ. ಅದರಂತೆ ಕಳೆದೊಂದು ತಿಂಗಳಿನಿಂದ ಐದು ಅಪರಾಧ ಪ್ರಕರಣಗಳಲ್ಲಿ ಭದ್ರತೆಗಾಗಿ ಇರಿಸಲಾಗಿದ್ದ ಆಸ್ತಿಯನ್ನು ಮುಟ್ಟುಗೋಲು ಹಾಕಲಾಗಿದೆ. ಎರಡು ಪ್ರಕರಣಗಳಿಗೆ ಸಂಬಂಧಿಸಿ ನ್ಯಾಯಾಲಯ ದಂಡ ವಿಧಿಸಿದೆ. ನಾಲ್ಕು ಪುಕರಣಗಳ ಆಸ್ತಿ ಮುಟ್ಟುಗೋಲು ಪಕ್ರಿಯೆ ಚಾಲ್ತಿಯಲ್ಲಿದೆ. ಈ ಕಾರ್ಯಾಚರಣೆ ಆರಂಭವಾದ ಬಳಿಕ ಎರಡು ಪಕರಣಗಳಲ್ಲಿ ಆರೋಪಿಗಳು ಸ್ವತಃ ನ್ಯಾಯಾಲಯಕ್ಕೆ ಶರಣಾಗಿದ್ದಾರೆ ಎಂದು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿಯವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಮಂಗಳೂರು ನಗರ ಪೊಲೀಸ್‌ ಕಮಿಷನರೇಟ್ ವ್ಯಾಪ್ತಿಯಲ್ಲಿ ದಾಖಲಾಗಿರುವ ಪ್ರಕರಣಗಳ ತನಿಖೆ ನಡೆಸಿ ನ್ಯಾಯಾಲಯಕ್ಕೆ ಆರೋಪಿಗಳ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಸಿದ ಬಳಿಕ ಕೆಲವು ಪುಕರಣಗಳ ಆರೋಪಿಗಳು ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಳ್ಳುತ್ತಿರುವುದು ಸಾಮಾನ್ಯವಾಗಿದೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸ್ ಇಲಾಖೆಯು ಈ ಆರೋಪಿಗಳ ಪರವಾಗಿರುವ ಜಾಮೀನುದಾರರು ಭದ್ರತೆಯ ಆಧಾರವಾಗಿ ನೀಡಿದ ಜಮೀನು/ಸೊತ್ತು ವಿವರಗಳನ್ನು ಸಂಗ್ರಹಿಸಲಾಗಿದೆ. ಅಲ್ಲದೆ ನ್ಯಾಯಾಲಯದ ಆದೇಶ ಪಡೆದು ಜಾಮೀನುದಾರರಿಗೆ ಸಂಬಂಧಿಸಿದ ಸೊತ್ತುಗಳನ್ನು ಮುಟ್ಟುಗೋಲು ಹಾಕಲು ಮತ್ತು ದಂಡ ವಸೂಲಿ ಮಾಡಲು ಕ್ರಮಕೈಗೊಳ್ಳುವ ಪ್ರಕ್ರಿಯೆಯನ್ನು ತ್ವರಿತಗೊಳಿಸಲಾಗಿದೆ. ಮುಟ್ಟುಗೋಲು ಮಾಡಲಾಗಿರುವ ಆಸ್ತಿಯ RTCಯಲ್ಲಿ ವಿವರಗಳನ್ನು ನಮೂದಿಸಲಾಗಿದೆ. ಕೆಲವು ಪುಕರಣಗಳಲ್ಲಿ ಮುಟ್ಟುಗೋಲು ಪ್ರಕ್ರಿಯೆಗಳು ಚಾಲ್ತಿಯಲ್ಲಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

You may also like

News

2026-27 ಶಾಲಾ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ – ಮೇ 29ರಿಂದ ತರಗತಿ ಆರಂಭ

2026-27ನೇ ಸಾಲಿನ ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಶೈಕ್ಷಣಿಕ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿದೆ.
News

ಮಗಳನ್ನೇ ಕೊಂದ ತಾಯಿ ನೇಣಿಗೆ ಶರಣು – ವೈಟ್‌ಫೀಲ್ಡ್‌ನಲ್ಲಿ ಕೌಟುಂಬಿಕ ದುರಂತ

ಸಿಲಿಕಾನ್ ಸಿಟಿಯ ವೈಟ್‌ಫೀಲ್ಡ್‌ನ ಇಮ್ಮಡಿಹಳ್ಳಿಯಲ್ಲಿ ಮರುಕಳಿಸದಂತಹ ದಾರುಣ ಘಟನೆಯೊಂದು ನಡೆದಿದೆ. ಮಾನಸಿಕ ಖಿನ್ನತೆಗೆ ಒಳಗಾಗಿದ್ದ ತಾಯಿಯೊಬ್ಬರು ತನ್ನ ಸ್ವಂತ ಮಗಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ಬಳಿಕ ತಾವೂ

You cannot copy content of this page