May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಲಾಲ್ ಬಾಗ್ ಹ್ಯಾಟ್ ಹಿಲ್ ಅಪಾರ್ಟ್‌ಮೆಂಟ್ ನ ಮೂರು ಪ್ಲ್ಯಾಟ್ ಗಳಲ್ಲಿ ಕಳ್ಳತನ

ರೂಪಾಯಿ 20 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಹಣ, ವಿದೇಶಿ ಕರೆನ್ಸಿ ಮತ್ತು ಮೊಬೈಲ್ ಫೋನ್ ಕಳವು

ಕೇವಲ 20 ಗಂಟೆಗಳ ಒಳಗೆ ಆರೋಪಿಗಳನ್ನು ಬಂಧಿಸಿ ಸೊತ್ತುಗಳನ್ನು ವಶ ಪಡಿಸಿದ  ಮಂಗಳೂರು ಪೊಲೀಸರು

ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದೇರೆಬೈಲ್ ಗ್ರಾಮದಲ್ಲಿರುವ ಲಾಲ್ ಬಾಗ್ ಹ್ಯಾಟ್ ಹಿಲ್ ನ 3 ಫ್ಲಾಟ್‌ಗಳಲ್ಲಿ ಅಕ್ಟೋಬರ್ 19/20 ರಂದು ರಾತ್ರಿ ನಡೆದ ಕಳ್ಳತನ ಪ್ರಕರಣದಲ್ಲಿ ಸುಮಾರು 20 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳು, ನಗದು, ವಿದೇಶಿ ಕರೆನ್ಸಿ ಮತ್ತು ಮೊಬೈಲ್ ಫೋನ್ ಕಳ್ಳತನವಾಗಿತ್ತು.

ರಿಯಾಜ್ ರಶೀದ್ ರವರ ದೂರಿನ ಮೇರೆಗೆ ಉರ್ವಾ ಪೊಲೀಸ್ ಠಾಣೆಯಲ್ಲಿ ಅಕ್ಟೋಬರ್ 20ರಂದು ಸೋಮವಾರ ಬೆಳಗ್ಗೆ ಪ್ರಕರಣ ದಾಖಲಿಸಿ, ಹಿರಿಯ ಪೊಲೀಸ್ ಅಧಿಕಾರಿಗಳು ಸೇರಿದಂತೆ ವಿಶೇಷ ತಂಡವು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ, ಶೀಘ್ರ ಕಾರ್ಯಾಚರಣೆಯಲ್ಲಿ ಕಳ್ಳತನದ ಆರೋಪಿಗಳಾದ ಇಬ್ಬರನ್ನು 20 ಗಂಟೆಯೊಳಗಾಗಿ ಬಂಧಿಸಲಾಯಿತು. ದಸ್ತಗಿರಿಯ ನಂತರ, ಕಳ್ಳತನ ಮಾಡಿದ್ದ ಎಲ್ಲಾ ಚಿನ್ನಾಭರಣಗಳು, ರೂಪಾಯಿ 5000/- ನಗದು, ರೂಪಾಯಿ 70 ಸಾವಿರ ಬೆಲೆಯ 3 ಸಾವಿರ Dirham ಹಾಗೂ ಮೊಬೈಲ್ ಫೋನ್ ನನ್ನು ವಶಕ್ಕೆ ಪಡೆಯಲಾಗಿದೆ.

ದಸ್ತಗಿರಿಯಾದ ಆರೋಪಿಗಳು:

ಅಸ್ಸಾಂನ ಕಾಚಾರ್ ಜಿಲ್ಲೆಯ ಮೇಹರ್ ಪುರ್, ಪಾಂಚಗೋರಿ, ಮೇಡಿನೋವಾ ರಸ್ತೆ, ಅಂಬಿಕಾ ಪುರ್ ಪಾರ್ಟ್ 10 ನಿವಾಸಿ 24 ವರ್ಷ ಪ್ರಾಯದ ಅಭಿಜಿತ್ ದಾಸ್ ಮತ್ತು ಮೆಹರ್ ಪುರ್ ಶ್ರೀ ದುರ್ಗಾ ಮಂದಿರ ಹತ್ತಿರದ ನಿವಾಸಿ 21 ವರ್ಷ ಪ್ರಾಯದ ದೇಬಾ ದಾಸ್ ಬಂಧಿತ ಆರೋಪಿಗಳು.

ಅಭಿಜಿತ್ ದಾಸ್ ಮೇಲೆ ಬೆಂಗಳೂರು ಮತ್ತು ಅಸ್ಸಾಂ ಸೇರಿದಂತೆ ಹಲವಾರು ಮನೆ ಕಳ್ಳತನ ಪ್ರಕರಣಗಳು ದಾಖಲಾಗಿವೆ. ಮೇಲಾಧಿಕಾರಿಗಳ ನಿರ್ದೇಶನದಂತೆ, ಉರ್ವಾ ಪೊಲೀಸರು ಬೆಂಗಳೂರಿನ ಪೊಲೀಸರ ಸಹಕಾರದಿಂದ ಆರೋಪಿಗಳನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಮುಂದಿನ ವಿಚಾರಣೆ ಮತ್ತು ಇತರ ಪ್ರಕರಣಗಳಿಗೆ ಸಂಬಂಧಿಸಿದ ತನಿಖೆ ಮುಂದುವರಿಯಲಿದೆ.

ಈ ಶೀಘ್ರ ಕಾರ್ಯಾಚರಣೆಯನ್ನು ಡಿಸಿಪಿ ಕ್ರೈಮ್ ರವರ ಮೇಲ್ವಿಚಾರಣೆಯಲ್ಲಿ, ಕೇಂದ್ರ ಉಪ ವಿಭಾಗದ ಎಸಿಪಿ, ಪಿಐ, ಉರ್ವ ಪೊಲೀಸ್ ಠಾಣಾ ಸಿಬ್ಬಂದಿ ಹಾಗೂ ಶ್ವಾನ ದಳ ಮತ್ತು ಫಿಂಗರ್ ಪ್ರಿಂಟ್ ತಜ್ಞರ ತಂಡ ಯಶಸ್ವಿಯಾಗಿ ಕಾರ್ಯಾಚರಣೆ ನಡೆಸಿದೆ.

You may also like

News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ
News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು

You cannot copy content of this page