August 30, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಪೋಷಕರಿಗೆ ಕರೆ ಮಾಡಿದ ವಿದ್ಯಾರ್ಥಿಗೆ ಮನಬಂದಂತೆ ಥಳಿಸಿದ ವಸತಿ ಶಾಲೆಯ ಶಿಕ್ಷಕನ ಬಂಧನ

ಗುರು ತಿಪ್ಪೇಸ್ವಾಮಿ ದೇವಸ್ಥಾನದ ಅಧೀನದ ವೇದ ಅಧ್ಯಯನ ಶಾಲೆಯ ಶಿಕ್ಷಕ ವೀರೇಶ್ ಹಿರೇಮಠ ಎಂಬವರು, ವಿದ್ಯಾರ್ಥಿಯೊಬ್ಬ ಪೋಷಕರಿಗೆ ಕರೆ ಮಾಡಿದಕ್ಕಾಗಿ ಆತನನ್ನು ನೆಲಕ್ಕೆ ತಳ್ಳಿ ಎಲ್ಲೆಂದರಲ್ಲಿ ಮನಬಂದಂತೆ ಒದ್ದಿದ್ದ ವಿಡಿಯೋ ವೈರಲ್ ಆದ ಬೆನ್ನಲ್ಲೇ ಪೊಲೀಸರು ಶಿಕ್ಷಕನನ್ನು ಬಂಧಿಸಿದ್ದಾರೆ.

ಈ ವಿಡಿಯೋ ವೈರಲ್ ಆದ ಬಳಿಕ ನಾಪತ್ತೆಯಾಗಿದ್ದ ಈತನನ್ನು ಪೊಲೀಸರು ಕಲಬುರಗಿಯಲ್ಲಿ ಬಂಧಿಸಿದ್ದಾರೆ. ಬಳಿಕ ತಡರಾತ್ರಿ ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದಾಗ ನ್ಯಾಯಾಧೀಶರು 2 ದಿನ ನ್ಯಾಯಾಂಗ ಬಂಧನಕ್ಕೆ ವಿಧಿಸಿದ ಹಿನ್ನೆಲೆಯಲ್ಲಿ ವೀರೇಶ್‌ನನ್ನು ಚಿತ್ರದುರ್ಗ ಜೈಲಿಗೆ ಕಳುಹಿಸಿದ್ದಾರೆ. ಅಲ್ಲದೆ ಶಿಕ್ಷಕ ವೀರೇಶ್ ಹಿರೇಮ‌ಠನನ್ನು ಅಮಾನತುಗೊಳಿಸಿ ಚಿತ್ರದುರ್ಗ ಜಿಲ್ಲಾಧಿಕಾರಿ ವೆಂಕಟೇಶ್ ರವರು ಆದೇಶ ಹೊರಡಿಸಿದ್ದಾರೆ.

 

You may also like

News

ಓಣಂ ಸಂಭ್ರಮದ ನಡುವೆ ದುರಂತ – ತೆರೆದ ಬಾವಿಗೆ ಬಿದ್ದು 10ನೇ ತರಗತಿ ವಿದ್ಯಾರ್ಥಿ ಸಾವು

ಓಣಂ ಆಚರಣೆಯ ಸಂಭ್ರಮದ ನಡುವೆ ಸಂಭವಿಸಿದ ದಾರುಣ ಘಟನೆಯೊಂದರಲ್ಲಿ ಶಾಲಾ ವಿದ್ಯಾರ್ಥಿಯೊಬ್ಬ ತೆರೆದ ಬಾವಿಗೆ ಆಕಸ್ಮಿಕವಾಗಿ ಬಿದ್ದು ಮೃತಪಟ್ಟ ಘಟನೆ ಕನ್ಹಂಗಾಡ್ ಸಮೀಪದ ಚೀಮೇನಿಯಲ್ಲಿ ನಡೆದಿದೆ. ಮೃತ
News

National Library Day Celebrated at Father Muller Charitable Institutions Mangaluru

The National Library Day was celebrated at Father Muller Charitable Institutions Central Library on 29th August 2026 at 3.00p.m. in

You cannot copy content of this page