May 16, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮೂರು ವರ್ಷದ ಮಗನ ಜೊತೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ

ಪತಿಯ ಕಿರುಕುಳದಿಂದ ಬೇಸತ್ತ ಮಹಿಳೆಯೊಬ್ಬಳು ತನ್ನ ಮೂರು ವರ್ಷದ ಮಗನ ಜೊತೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಾಗಲಕೀಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪಟ್ಟಣದ ಚೆನ್ನಮ್ಮ ದೇವಿ ದೇವಸ್ಥಾನದ ಹತ್ತಿರ ನಡೆದಿದೆ.

ಮೃತಳನ್ನು 21ವರ್ಷ ಪ್ರಾಯದ ಫಾತಿಮಾ ಹಾಗೂ ಆಕೆಯ ಪುತ್ರ 3 ವರ್ಷ ಪ್ರಾಯದ ಅಬ್ದುಲ್ ಎಂದು  ತಿಳಿದುಬಂದಿದೆ. ಫಾತಿಮಾ ಪತಿ ಮಸ್ತಾನ್ ಸಾಬ್ ನೀಡಿರುವ ಕಿರುಕುಳವೇ ತನ್ನ ಮಗಳು ಆತ್ಮಹತ್ಯೆ ಮಾಡಿಕೊಳ್ಳಲು ಕಾರಣ ಎಂದು ಆರೋಪಿಸಿದ್ದಾರೆ. ಕೆರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

8 ವರ್ಷಗಳ ಹಿಂದೆ ಫಾತಿಮಾಳ ಪತಿ ಮಸ್ತಾನ್ ಸಾಬ್ ಎಂಬವರು ಜಮೇಲಾ ಎಂಬ ಯುವತಿಯೊಂದಿಗೆ ಮದುವೆ ಆಗಿದ್ದನು, ಬಳಿಕ ಫಾತಿಮಾಳನ್ನು ಪ್ರೀತಿಸಿ ಗ್ರಾಮಸ್ಥರ ಸಮ್ಮುಖದಲ್ಲೇ ವಿವಾಹವಾಗಿದ್ದನು. ಇತ್ತೀಚೆಗೆ ಫಾತಿಮಾಳಿಗೆ ಪತಿ ಮಸ್ತಾನ್ ಸಾಬ್ ಹೆಚ್ಚು ಕಿರುಕುಳ ನೀಡುತ್ತಿದ್ದನು. ಇದರಿಂದ ಬೇಸತ್ತ ಫಾತಿಮಾ ಮೂರು ದಿನಗಳ ಹಿಂದೆ ತವರಿಗೆ ಬಂದಿದ್ದಳು. ಫಾತಿಮಾ ಸಾವಿಗೆ ಆಕೆಯ ಪತಿ ನೀಡಿದ ಕಿರುಕುಳವೇ ಕಾರಣ ಎಂದು ಪೋಷಕರ ದೂರಿನಲ್ಲಿ ಉಲ್ಲೇಖಿಸಲಾಗಿದೆ.

You may also like

News

ಧರ್ಮಾಧ್ಯಕ್ಷರಾಗಿ 30 ವರ್ಷಗಳ ಸೇವೆ – ನಿವೃತ್ತ ಬಿಷಪ್ ಅಲೋಶಿಯಸ್ ಪಾವ್ಲ್ ಡಿಸೋಜ ಅವರಿಗೆ ಜೆಪ್ಪುವಿನಲ್ಲಿ ಭವ್ಯ ಸನ್ಮಾನ

ಮಂಗಳೂರು ಧರ್ಮಕ್ಷೇತ್ರದ ನಿವೃತ್ತ ಬಿಷಪ್, ‘ಜನರ ಬಿಷಪ್’ ಎಂದೇ ಖ್ಯಾತರಾದ ಪರಮ ಪೂಜ್ಯ ಅತೀ ವಂದನೀಯ ಡಾ. ಅಲೋಶಿಯಸ್ ಪಾವ್ಲ್ ಡಿಸೋಜ ಅವರು ಧರ್ಮಾಧ್ಯಕ್ಷರಾಗಿ ದೀಕ್ಷೆ ಸ್ವೀಕರಿಸಿದ
News

ಮಣಿಪುರದಲ್ಲಿ ಪಾಸ್ಟರ್‌ಗಳ ಕ್ರೂರ ಹತ್ಯೆ – ಪ್ರೊಟೆಸ್ಟಂಟ್ ಕ್ರೈಸ್ತರ ಮಹಾಸಭಾ (DAPC) ತೀವ್ರ ಖಂಡನೆ

ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಇತ್ತೀಚೆಗೆ ಪಾಸ್ಟರ್‌ಗಳು ಮತ್ತು ಅವರ ಸಂಗಾತಿಯ ಮೇಲೆ ನಡೆದ ಕ್ರೂರ ಹತ್ಯೆಯನ್ನು ಭಾರತದಲ್ಲಿನ ‘ಡಯೋಸಿಸ್ ಆಫ್ ಆಲ್ ಪ್ರೊಟೆಸ್ಟೆಂಟ್ ಚರ್ಚ್’ (DAPC) ಮತ್ತು

You cannot copy content of this page