November 8, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬಜ್ಪೆಯ ಪಟಾಕಿ ಅಂಗಡಿಗಳಿಂದ ಬೆದರಿಕೆ ಹಾಕಿ ಸುಲಿಗೆ‌ ಮಾಡಲು ಯತ್ನಿಸಿದ ಇಬ್ಬರ ವಿರುದ್ಧ ಪ್ರಕರಣ ದಾಖಲು

ಆರೋಪಿಗಳ ಪತ್ತೆಗಾಗಿ ಶೋಧ ಕಾರ್ಯಾಚರಣೆ – ಪೊಲೀಸ್ ಕಮಿಷನರ್

ಪಟಾಕಿ ಅಂಗಡಿಗಳಿಂದ ಬೆದರಿಕೆ ಹಾಕಿ ಸುಲಿಗೆ‌ ಮಾಡಲೆತ್ನಿಸಿದ್ದ ಇಬ್ಬರ ವಿರುದ್ಧ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಸಂಬಂಧ‌ ಸುರತ್ಕಲ್‌ ಮಂಗಳಪೇಟೆ ಫಾಝಿಲ್‌ ಕೊಲೆ ಆರೋಪಿ ರೌಡಿ ಶೀಟರ್ ಪ್ರಶಾಂತ್ ಯಾನೆ ಪಚ್ಚು ಮತ್ತು ಅಶ್ವಿತ್ ವಿರುದ್ಧ ಪ್ರಕರಣ ದಾಖಲಾಗಿದೆ. ಬಜ್ಪೆಯ ಪಟಾಕಿ ಮಾರಾಟ ಮಳಿಗೆಗೆ ಬಂದು ಅದರ‌ ಮಾಲಕ ದಾಮೋದರ ಎಂಬವರಿಗೆ ಬೆದರಿಕೆ ಹಾಕಿ ಹಣ‌ ಸುಲಿಗೆಗೆ ಮುಂದಾಗಿದ್ದಾರೆ. ಈ ಘಟನೆ ಅಕ್ಟೋಬರ್ 22ರಂದು ಬುಧವಾರ ನಡೆದಿದ್ದು, ದಾಮೋದರ್‌ ಅವರು‌ ಆರೋಪಿಗಳಿಗೆ ಹೆದರಿ ಪೊಲೀಸರಿಗೆ ದೂರು ನೀಡಲು ಹಿಂದೇಟು ಹಾಕಿದ್ದರು.

ಇತ್ತೀಚೆಗೆ ವಿಚಾರ ತಿಳಿದು ದಾಮೋದರ್ ರವರಿಗೆ ಪೊಲೀಸರು ರಕ್ಷಣೆ ‌‌ನೀಡುವ ಭರವಸೆ‌ ನೀಡಿದ ಬಳಿಕ ಬಜ್ಪೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಈ ಕುರಿತು ಪ್ರಕರಣ ದಾಖಲಿಸಿಕೊಂಡ ಬಜ್ಪೆ ಪೊಲೀಸರು ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗಾಗಿ ಶೋಧ ಕಾರ್ಯಾಚರಣೆ ಮುಂದುವರಿಸಿದ್ದಾರೆ ಎಂದು ಪೊಲೀಸ್ ಕಮಿಷನರ್ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

 

 

You may also like

News

ಮಾಣಿ ಗ್ರಾಮದಲ್ಲಿ ಹಳೆ ಮನೆ ದುರಸ್ತಿ ಪರವಾನಗಿ ಪಡೆದು ಸರಕಾರಿ ಜಮೀನಿನ ಮೇಲೆ ಅಕ್ರಮವಾಗಿ ನಿರ್ಮಿಸಿದ ಐಶಾರಾಮಿ ಬಂಗ್ಲೆ

ಯಾವುದೇ ದಾಖಲೆಗಳಿಲ್ಲದೆ ಸರಕಾರಕ್ಕೆ ವಂಚನೆ ಮಾಡಿದ್ದನ್ನು ಬಯಲಿಗೆಳೆದ ಸಾಮಾಜಿಕ ಕಾರ್ಯಕರ್ತ ಅತಿಕ್ರಮಿತ ಕಟ್ಟಡ ಕೂಡಲೇ ತೆರವುಗೊಳಿಸಲು ಲೂಸಿಯಾ ಮೆಟಿಲ್ಡಾ ಪಿಂಟೊರವರಿಗೆ ಬಂಟ್ವಾಳ ತಹಶೀಲ್ದಾರ್ ನೋಟಿಸ್ ಜಾರಿ ಮಾಣಿ
News

ನಕಲಿ ದಾಖಲೆ ಪ್ರಕರಣದಲ್ಲಿ ಆರೋಪಿ ಅಬ್ದುಲ್ ಹಾಶೀಮ್ ಬಂಧನ

ನಕಲಿ ದಾಖಲೆ ಸೃಷ್ಟಿಸಿ ನ್ಯಾಯಾಲಯವನ್ನು ವಂಚಿಸಿದ ಭೂಪ ಪುತ್ತೂರು ತಾಲೂಕಿನ ಪಡುವನ್ನೂರು ಗ್ರಾಮದ 34 ವರ್ಷ ಪ್ರಾಯದ ಅಬ್ದುಲ್ ಹಾಶೀಮ್  ಎಂಬಾತನನ್ನು ಉಪ್ಪಿನಂಗಡಿ ಪೊಲೀಸರು ನವೆಂಬರ್ 6ರಂದು

You cannot copy content of this page