July 8, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಸಾವಯವ, ಗುಡಿ ಕೈಗಾರಿಕೆಯ ಉತ್ಪನ್ನಗಳ “ಸಪ್ತಾಚೆ ಸಾಂತ್” ಶಾಸಕ ಕಾಮತ್ ಉದ್ಘಾಟನೆ

ಮಂಗಳೂರಿನ ವಿ.ಟಿ. ರಸ್ತೆಯಲ್ಲಿರುವ ಇತಿಹಾಸ ಪ್ರಸಿದ್ಧ ಶ್ರೀ ವಿಠೋಭ ರುಕುಮಾಯಿ ದೇವಸ್ಥಾನದ ಅಖಂಡ ಭಜನಾ ಸಪ್ತಾಹದ ಅಂಗವಾಗಿ ಗುಡಿ ಕೈಗಾರಿಕೆ, ಸಾವಯವ ಉತ್ಪನ್ನಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಶ್ರೀ ವಿಠೋಭ ರುಕುಮಾಯಿ ದೇವಸ್ಥಾನದ ಆಡಳಿತ ಮಂಡಳಿಯ ಆಶ್ರಯದಲ್ಲಿ, ರಥಬೀದಿ ಶ್ರೀ ವೆಂಕಟರಮಣ ದೇವಸ್ಥಾನದ ಸಹಕಾರದಲ್ಲಿ ದೇವಳದ ಸನಿಹವಿರುವ ಶ್ರೀನಿವಾಸ ಕಲ್ಯಾಣ ಮಂಟಪದಲ್ಲಿ “ಸಪ್ತಾಚೆ ಸಾಂತ್” ಕಾರ್ಯಕ್ರಮಕ್ಕೆ ದೀಪ ಬೆಳಗಿಸಿ ಚಾಲನೆ ನೀಡಲಾಯಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ “ಸಪ್ತಾಚೆ ಸಾಂತ್” ಮೂಲಕ ಅಖಂಡ ಭಜನಾ ಸಪ್ತಾಹದ ಗತ ವೈಭವ ಮತ್ತೆ ಮರುಕಳಿಸಿದೆ. ಕಿರು ಮಧ್ಯಮ ವ್ಯಾಪಾರಿಗಳನ್ನು, ಉತ್ಪಾದಕರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಎಲ್ಲಾ ನಾಗರಿಕರಿಗೆ ಇಲ್ಲಿ ಮುಕ್ತ ಪ್ರವೇಶವಿದೆ. ಬೆಳಿಗ್ಗೆ 10 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಒಂದು ವಾರ ಇಲ್ಲಿ ಸಿಗುವ ಉತ್ಪನ್ನಗಳನ್ನು ಖರೀದಿಸುವ ಮೂಲಕ ಸಾರ್ವಜನಿಕರು ಗುಡಿ ಕೈಗಾರಿಕೆಗಳನ್ನು ಪ್ರೋತ್ಸಾಹಿಸಬೇಕಿದೆ ಎಂದು ತಿಳಿಸಿದರು. ಶ್ರೀ ವೆಂಕಟರಮಣ ದೇವಸ್ಥಾನದ ಮೋಕ್ತೇಸರ ಸತೀಶ್ ಪ್ರಭುರವರು ಮಾತನಾಡಿ “ಪ್ರಧಾನಿ ಮೋದಿಯವರು ಕಂಡ ಕನಸು, ಇಟ್ಟುಕೊಂಡಿರುವ ಗುರಿ ದೇಶದಲ್ಲಿಯೇ ಉತ್ಪನ್ನಗಳನ್ನು ತಯಾರಿಸಿ ಸ್ವಾವಲಂಬಿ ಭಾರತವನ್ನು ನಿರ್ಮಿಸುವುದು. ಅದರಂತೆ ಇಲ್ಲಿ ಮನೆಗಳಲ್ಲಿಯೇ ತಯಾರಿಸಿದ ವಸ್ತುಗಳನ್ನು ಖರೀದಿಸುವ ಅವಕಾಶವನ್ನು ಈ ಸಂತೆ ನೀಡಿರುವುದು ಖುಷಿ ನೀಡಿದೆ” ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ವೆಂಕಟರಮಣ ದೇವಳದ ಆಡಳಿತ ಮೋಕ್ತೇಸರ ಅಡಿಗೆ ಬಾಲಕೃಷ್ಣ ಶೆಣೈ, ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್ ಎಂ.ಡಿ. ಗೋಪಾಲಕೃಷ್ಣ ಭಟ್, ಮಹಾಮಾಯಾ ದೇವಳದ ಮೊಕ್ತೇಸರ ಪ್ರಕಾಶ್, ವಿಠೋಭ ದೇವಸ್ಥಾನದ ಮೋಕ್ತೇಸರ ಮರೋಳಿ ಸುರೇಂದ್ರ ಕಾಮತ್ ಪ್ರಮುಖರಾದ ಕೃಷ್ಣ ಆಚಾರ್ಯ ಹಾಗೂ ಗಣ್ಯರು ಉಪಸ್ಥಿತರಿದ್ದರು.

You may also like

News

ಪುತ್ತೂರಿನಲ್ಲಿ ಯುವತಿಗೆ ಚಾಕು ತೋರಿಸಿ ಬೆದರಿಕೆ ಹಾಕಿದ ಆರೋಪ – ಸತ್ಯಾಂಶ ಬಿಚ್ಚಿಟ್ಟ ಪೊಲೀಸರು

ಉಭಯ ಕಡೆಯಿಂದ ದೂರು ದಾಖಲು! ಸುಳ್ಳು ಸುದ್ದಿ ಅಥವಾ ವದಂತಿಗಳನ್ನು ಹಬ್ಬಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ – ಜಿಲ್ಲಾ SP ಡಾ. ಅರುಣ್ ಕೆ. ಯುವತಿಯೊಬ್ಬಳು
News

ವೇಗದ ಅಬ್ಬರಕ್ಕೆ ವಿದ್ಯಾರ್ಥಿ ಬಲಿ – ವಾಹನ ಸಮೇತ ಚಾಲಕ ಪರಾರಿ

ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಸಂಭವಿಸಿದ ಹಿಟ್ ಆ್ಯಂಡ್ ರನ್ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಐಟಿಐ ವಿದ್ಯಾರ್ಥಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮತ್ತೋರ್ವ ವಿದ್ಯಾರ್ಥಿ

You cannot copy content of this page