November 8, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಸ್ಪೀಕರ್ ಖಾದರ್ ವಿರುದ್ಧ ಭ್ರಷ್ಟಾಚಾರ ಆರೋಪ – ಹಾಲಿ ನ್ಯಾಯಾಧೀಶರಿಂದಲೇ ತನಿಖೆಗೆ ಶಾಸಕ ಭರತ್‌ ಶೆಟ್ಟಿ ಒತ್ತಾಯ

ಜನರ ತೆರಿಗೆ ಹಣದ ದುಂದುವೆಚ್ಚದಿಂದ ಭ್ರಷ್ಟಾಚಾರದ ವಾಸನೆ

ಸ್ಪೀಕ‌ರ್ ಹುದ್ದೆಯನ್ನು ಲಾಭದಾಯಕವಾಗಿಸಿದ ಕೀರ್ತಿ ಸ್ಪೀಕರ್ ಯು.ಟಿ. ಖಾದರ್ ಅವರಿಗೆ ಸಲ್ಲುತ್ತದೆ ಎಂದು ಶಾಸಕ ಡಾ. ಭರತ್ ಶೆಟ್ಟಿ ವ್ಯಂಗ್ಯವಾಡಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ಪೀಕ‌ರ್ ಕಚೇರಿಯಿಂದ ಅನಗತ್ಯವಾಗಿ ಯಾವುದೇ ಟೆಂಡ‌ರ್ ಇಲ್ಲದೆ ಶಾಸಕರ ಭವನಕ್ಕೆ ಕೋಟ್ಯಂತರ ರೂಪಾಯಿ ವೆಚ್ಚದ ಪೀಠೋಪಕರಣ ಖರೀದಿ ಮಾಡಲಾಗಿದೆ. ಈ ವೆಚ್ಚಕ್ಕೆ 4ಜಿ ರಿಯಾಯಿತಿ ಯಾಕಾಗಿ? ನಾವ್ಯಾರೂ ಶಾಸಕರ ಭವನಕ್ಕೆ ಸ್ಮಾರ್ಟ್ ಡೋರ್ ಲಾಕ್, ಸ್ಮಾರ್ಟ್ ಲಾಕರ್, ಐಷಾರಾಮಿ ಪೀಠೋಪಕರಣ ಕೇಳಿಲ್ಲ, ಹಾಗಿದ್ದರೂ ಕೊಟ್ಟಿದ್ದಾರೆ. ಎಲ್ಲಾ ಕಾರುಗಳ ಚೇರ್ ಅಪ್ ಹೋಲೆಸ್ಟ್ರಿ ಬದಲಾಯಿಸಿದ್ದಾರೆ ಎಂದರು.

ಇಲ್ಲಿ ಜನರ ತೆರಿಗೆ ಹಣದ ದುಂದುವೆಚ್ಚ ಒಂದೆಡೆಯಾದರೆ, ಇನ್ನೊಂದೆಡೆ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆ ಇರುವ ವಸ್ತುಗಳಿಗೆ ದುಬಾರಿ ಹಣ ತೋರಿಸಲಾಗಿದ್ದು, ಭ್ರಷ್ಟಾಚಾರದ ವಾಸನೆ ಎದ್ದಿದೆ. ಹಾಗಾಗಿ ಈ ಪ್ರಕರಣದ ಬಗ್ಗೆ ಹಾಲಿ ನ್ಯಾಯಾಧೀಶರಿಂದಲೇ ತನಿಖೆ ನಡೆಸಬೇಕು ಎಂದು ಡಾ. ಭರತ್‌ ಶೆಟ್ಟಿ ಒತ್ತಾಯಿಸಿದರು.

You may also like

News

ಮಾಣಿ ಗ್ರಾಮದಲ್ಲಿ ಹಳೆ ಮನೆ ದುರಸ್ತಿ ಪರವಾನಗಿ ಪಡೆದು ಸರಕಾರಿ ಜಮೀನಿನ ಮೇಲೆ ಅಕ್ರಮವಾಗಿ ನಿರ್ಮಿಸಿದ ಐಶಾರಾಮಿ ಬಂಗ್ಲೆ

ಯಾವುದೇ ದಾಖಲೆಗಳಿಲ್ಲದೆ ಸರಕಾರಕ್ಕೆ ವಂಚನೆ ಮಾಡಿದ್ದನ್ನು ಬಯಲಿಗೆಳೆದ ಸಾಮಾಜಿಕ ಕಾರ್ಯಕರ್ತ ಅತಿಕ್ರಮಿತ ಕಟ್ಟಡ ಕೂಡಲೇ ತೆರವುಗೊಳಿಸಲು ಲೂಸಿಯಾ ಮೆಟಿಲ್ಡಾ ಪಿಂಟೊರವರಿಗೆ ಬಂಟ್ವಾಳ ತಹಶೀಲ್ದಾರ್ ನೋಟಿಸ್ ಜಾರಿ ಮಾಣಿ
News

ನಕಲಿ ದಾಖಲೆ ಪ್ರಕರಣದಲ್ಲಿ ಆರೋಪಿ ಅಬ್ದುಲ್ ಹಾಶೀಮ್ ಬಂಧನ

ನಕಲಿ ದಾಖಲೆ ಸೃಷ್ಟಿಸಿ ನ್ಯಾಯಾಲಯವನ್ನು ವಂಚಿಸಿದ ಭೂಪ ಪುತ್ತೂರು ತಾಲೂಕಿನ ಪಡುವನ್ನೂರು ಗ್ರಾಮದ 34 ವರ್ಷ ಪ್ರಾಯದ ಅಬ್ದುಲ್ ಹಾಶೀಮ್  ಎಂಬಾತನನ್ನು ಉಪ್ಪಿನಂಗಡಿ ಪೊಲೀಸರು ನವೆಂಬರ್ 6ರಂದು

You cannot copy content of this page