August 29, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಬಂಟ್ವಾಳದ ನೇತ್ರಾವತಿ ನದಿಗೆ ಹಾರಿ ಮೊಗರ್ನಾಡ್ ನಿವಾಸಿ ಪೀಟರ್ ಲೋಬೊ ಆತ್ಮಹತ್ಯೆ

ಬಂಟ್ವಾಳ ತಾಲೂಕಿನ ಮೊಗರ್ನಾಡ್ ಮಾರ್ನಬೈಲ್ ನಿವಾಸಿ 60 ವರ್ಷ ಪ್ರಾಯದ ಪೀಟರ್ ಲೋಬೊ ಎಂಬುವವರು ಪಾರ್ಶ್ವವಾಯು ರೋಗದಿಂದ ಬಳಲುತ್ತಿದ್ದು, ತಾನು ಯಾರಿಗೂ ಅವಲಂಬನೆಯಾಗಬಾರದೆಂಬ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೂರುದಾರರಾದ ಅವರ ಪತ್ನಿ ಅನಿತಾ ಲೋಬೊರವರು ನೀಡಿದ ಮಾಹಿತಿಯ ಪ್ರಕಾರ, ಅಕ್ಟೋಬರ್ 28ರಂದು ಮಂಗಳವಾರ ರಾತ್ರಿ ಊಟದ ನಂತರ ಪೀಟರ್ ಲೋಬೊ ಮಲಗಿದ್ದರು. ರಾತ್ರಿ ವೇಳೆ ಅವರಿಗೆ ಪಾರ್ಶ್ವವಾಯು ಸಮಸ್ಯೆ ಕಾಣಿಸಿಕೊಂಡು, ಬೆಳಿಗ್ಗೆ 5.10ಕ್ಕೆ ಮನೆಯಿಂದ ಆಟೋದಲ್ಲಿ ಹೊರಟರು.

ತನ್ನ ಕಾಯಿಲೆಯಿಂದ ಬೇಸತ್ತು ಅಕ್ಟೋಬರ್ 29ರಂದು ಬುಧವಾರ ಬೆಳಿಗ್ಗೆ 6.10 ರಿಂದ 30ರಂದು ಗುರುವಾರ ಬೆಳಿಗ್ಗೆ 11.00ರ ನಡುವೆ ಬಂಟ್ವಾಳದ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿ ಕೊಂಡಿರುವುದು ತಿಳಿದುಬಂದಿದೆ. ಈ ಕುರಿತು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಯುಡಿಆರ್ ನಂ:47/2025ರಡಿ ಕಲಂ 194 BNSS 2023 ಪ್ರಕಾರ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

You may also like

News

ನೇಪಾಳದ ದುಃಖದಲ್ಲಿ ಮಂಗಳೂರು ಧರ್ಮಕ್ಷೇತ್ರವೂ ಭಾಗಿ – ವಿಶೇಷ ಪ್ರಾರ್ಥನೆಗೆ ಬಿಷಪ್ ಸಲ್ಡಾನ್ಹಾ ಕರೆ

ಸಾರ್ವಜನಿಕ ಸಂಪರ್ಕ ಅಧಿಕಾರಿಗಳಾದ ಫಾದರ್ ರೂಪೇಶ್ ಮಾಡ್ತಾ ಹಾಗೂ ರೋಯ್ ಕ್ಯಾಸ್ತೆಲಿನೊ ಜಂಟಿ ಪತ್ರಿಕಾ ಪ್ರಕಟನೆ ಮಂಗಳೂರು: ನೇಪಾಳದ ವಿವಿಧ ಭಾಗಗಳಲ್ಲಿ ಸಂಭವಿಸಿರುವ ಭೀಕರ ಪ್ರವಾಹ ಹಾಗೂ
News

ಕಾನ್ಪುರ ವಿಮಾನ ದುರಂತ – ಉಡುಪಿ ಮೂಲದ ತರಬೇತಿ ಪೈಲಟ್ ಅಭಿಷೇಕ್ ಪೂಜಾರಿ ಮೃತ್ಯು

ಉತ್ತರ ಪ್ರದೇಶದ ಕಾನ್ಪುರದಲ್ಲಿ ಖಾಸಗಿ ತರಬೇತಿ ವಿಮಾನ ಪತನಗೊಂಡು ಉಡುಪಿ ಜಿಲ್ಲೆಯ ಮೂಲದ ಯುವ ತರಬೇತಿ ಪೈಲಟ್ 22 ವರ್ಷ ಪ್ರಾಯದ ಅಭಿಷೇಕ್ ಪೂಜಾರಿ ಮೃತಪಟ್ಟಿರುವುದು ದೃಢಪಟ್ಟಿದೆ.

You cannot copy content of this page