July 14, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿಯವರ ಬಗ್ಗೆ ಅಸಭ್ಯ ಪೋಸ್ಟ್

ಸುಳ್ಯ ಪೊಲೀಸರಿಂದ ಆರೋಪಿ ಬರಿಮಾರು ಪುರುಷೋತ್ತಮ ಆಚಾರ್ಯನ ಬಂಧನ

ಸಾಮಾಜಿಕ ಜಾಲತಾಣ Facebook ನಲ್ಲಿ “Purush Acharya” ಎಂಬ ಖಾತೆಯಿಂದ ದಸರಾ ಉದ್ಘಾಟನೆ ಮಾಡಿದ ಬಾನು ಮುಸ್ತಾಕ್ ಹಾಗೂ ಮಾನ್ಯ ಮುಖ್ಯಮಂತ್ರಿಯವರ ಬಗ್ಗೆ ಅಸಭ್ಯ ಪದಗಳಲ್ಲಿ ನಿಂದನಾತ್ಮಕ ಪೋಸ್ಟ್ ಮಾಡಿರುವ ಕುರಿತು ಪ್ರಕರಣ ದಾಖಲಾಗಿದೆ. ಈ ಸಂಬಂಧ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ಸಂಖ್ಯೆ 112/2025 (ಕಲಂ 296, 196, 354 BNS) ಹಾಗೂ ಸುಬ್ರಮಣ್ಯ ಪೊಲೀಸ್ ಠಾಣೆಯಲ್ಲಿ 55/2025 (ಕಲಂ 353(3), 353(4) BNS) ಅಡಿ ಪ್ರಕರಣಗಳು ದಾಖಲಾಗಿವೆ.

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದ ಸೋಶಿಯಲ್ ಮೀಡಿಯಾ ಮಾನಿಟರಿಂಗ್ ಸೆಲ್ ಸಹಕಾರದೊಂದಿಗೆ, ಸುಳ್ಯ ಪೊಲೀಸರು ಬಂಟ್ವಾಳ ತಾಲೂಕು ಬರಿಮಾರು ಮೂಲದ ಪುರುಷೋತ್ತಮ ಆಚಾರ್ಯ ಎಂಬಾತನನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ. ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಳ್ಳುತ್ತಿದ್ದಾರೆ ಎಂದು ತಿಳಿಸಿದ್ದಾರೆ.

You may also like

News

Father Muller Homoeopathic Medical College Hosts Dr M.L. Dhawale Memorial Seminar 2026

The Department of Practice of Medicine, Father Muller Homoeopathic Medical College & Hospital, Deralakatte, Mangalore, organised the Dr M.L. Dhawale
News

ರೊಜಾರಿಯೊ ಕ್ಯಾಥೆಡ್ರಲ್‌ನಲ್ಲಿ ಹೃದಯ ಆರೋಗ್ಯ ಜಾಗೃತಿ ಹಾಗೂ ಸಿಪಿಆರ್ ತರಬೇತಿ

ಮಂಗಳೂರು ಧರ್ಮಕ್ಷೇತ್ರಕ್ಕೆ ಒಳಪಟ್ಟ ರೊಜಾರಿಯೊ ಕ್ಯಾಥೆಡ್ರಲ್‌ನ ಆರೋಗ್ಯ ಆಯೋಗವು ಚರ್ಚ್ ಪಾಲನಾ ಸಮಿತಿಯ 21 ಆಯೋಗಗಳ ಸಹಯೋಗದಲ್ಲಿ “A Healthy Heart for a Blessed Life”

You cannot copy content of this page