November 8, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ವಿರುದ್ಧದ ಆರೋಪ ಖಂಡನೀಯ — AICU ರಾಜ್ಯಾಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್

ರಾಜಕೀಯ ಲಾಭಕ್ಕಾಗಿ ವ್ಯಕ್ತಿತ್ವ ಹಾನಿಗೆ ಯತ್ನಿಸುವಂತ ಹೇಳಿಕೆಗಳನ್ನು ತಕ್ಷಣ ಹಿಂಪಡೆಯಬೇಕು

ವಿಧಾನಸಭಾ ಸ್ಪೀಕರ್ ಸನ್ಮಾನ್ಯ ಯು.ಟಿ. ಖಾದರ್ ರವರ ವಿರುದ್ಧ ಶಾಸಕರಾದ ಭರತ್ ಶೆಟ್ಟಿಯವರು ಪತ್ರಿಕಾಗೋಷ್ಠಿಯಲ್ಲಿ ಮಾಡಿದ್ದ ಆರೋಪಗಳು ಸಂಪೂರ್ಣ ಸುಳ್ಳು ಹಾಗೂ ಸತ್ಯಕ್ಕೆ ದೂರವಾಗಿವೆ ಎಂದು ಅಖಿಲ ಭಾರತೀಯ ಕ್ರೈಸ್ತ ಒಕ್ಕೂಟ ಇದರ ಕರ್ನಾಟಕ ರಾಜ್ಯಾಧ್ಯಕ್ಷರಾದ ಆಲ್ವಿನ್ ಡಿಸೋಜ ಪಾನೀರ್ ಪತ್ರಿಕಾ ಹೇಳಿಕೆಯಲ್ಲಿ ಖಂಡಿಸಿದ್ದಾರೆ.

ಅವರು ನೀಡಿದ ಹೇಳಿಕೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯ ಅತ್ಯಂತ ನಿಷ್ಕಳಂಕ ಹಾಗೂ ಜನಪರ ನಾಯಕರಲ್ಲಿ ಒಬ್ಬರಾಗಿರುವ ಸನ್ಮಾನ್ಯ ಯು.ಟಿ. ಖಾದರ್ ರವರು ಎಂದಿಗೂ ಲಂಚ ಸ್ವೀಕರಿಸಿದವರು ಅಲ್ಲ ಎಂದು ಹೇಳಿದರು. ಭರತ್ ಶೆಟ್ಟಿಯವರು ಮಾಡಿದ ಆರೋಪಗಳು ಅಸತ್ಯ ಹಾಗೂ ಜನರನ್ನು ತಪ್ಪು ದಾರಿಗೆಳೆಯುವ ಪ್ರಯತ್ನ ಎಂದು ಅವರು ಆರೋಪಿಸಿದರು.

ಖಾದರ್ ರವರ ವಿರುದ್ಧದ ಅಪವಾದವನ್ನು ಖಂಡಿಸುತ್ತಾ, ರಾಜಕೀಯ ಲಾಭಕ್ಕಾಗಿ ವ್ಯಕ್ತಿತ್ವ ಹಾನಿಗೆ ಯತ್ನಿಸುವಂತ ಹೇಳಿಕೆಗಳನ್ನು ತಕ್ಷಣ ಹಿಂಪಡೆಯಬೇಕು ಎಂದು ಆಲ್ವಿನ್ ಡಿಸೋಜರವರು ಒತ್ತಾಯಿಸಿದ್ದಾರೆ.

ಸ್ಪೀಕರ್ ಖಾದರ್ ರವರ ಬಗ್ಗೆ ಕಾಂಗ್ರೆಸ್‌ ಪಕ್ಷದ ವಿಶ್ವಾಸ:

ಕರ್ನಾಟಕ ರಾಜ್ಯದ ರಾಜಕೀಯ ವಲಯದಲ್ಲಿ ಸ್ಪೀಕರ್ ಯು.ಟಿ. ಖಾದರ್ ರವರ ನಿಷ್ಠೆ ಮತ್ತು ಪ್ರಾಮಾಣಿಕತೆ ಕುರಿತು ಪ್ರಶಂಸೆಯ ಧ್ವನಿ ಕೇಳಿಬರುತ್ತಿದೆ. ಸ್ಪೀಕರ್ ಖಾದರ್ ರವರು ಯಾವತ್ತೂ ಭ್ರಷ್ಟಾಚಾರ ಮಾಡಿಲ್ಲ ಎಂಬುದು ಕಾಂಗ್ರೆಸ್ ಪಕ್ಷದ ನಿಲುವಾಗಿದೆ. ಇದೇ ಕಾರಣಕ್ಕಾಗಿ ಕಾಂಗ್ರೆಸ್ ಸರ್ಕಾರವು ಅವರನ್ನು ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾಗಿ ನೇಮಿಸಿದೆ. ಪಕ್ಷದ ಮೂಲಗಳು ಖಾದರ್ ರವರ ಸುದೀರ್ಘ ರಾಜಕೀಯ ಬದುಕು ನಿಷ್ಠೆಯ ಮಾದರಿಯಾಗಿದೆ ಎಂದು ತಿಳಿಸಿವೆ. ಅವರು ಸದಾ ಸಾರ್ವಜನಿಕ ಹಿತಾಸಕ್ತಿ ಕಾಪಾಡುವಲ್ಲಿ ಹಾಗೂ ವಿಧಾನಸಭೆಯ ಕಾರ್ಯನಿರ್ವಹಣೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವಲ್ಲಿ ಮುಂಚೂಣಿಯಲ್ಲಿದ್ದಾರೆ.

ಸ್ಪೀಕರ್ ಖಾದರ್ ರವರು ಯಾವಾಗಲೂ ಸರ್ವರ ಸಮಬಾಳು ಶಾಂತಿಯ ವಾತಾವರಣವನ್ನು ಬಯಸುವವರು. ಅವರು ಧರ್ಮ, ಜಾತಿ ಅಥವಾ ಪಕ್ಷಭೇದದ ರಾಜಕೀಯದಿಂದ ದೂರವಿದ್ದು, ಎಲ್ಲರಿಗೂ ಸಮಾನ ಅವಕಾಶ ನೀಡುವ ಜನನಾಯಕನಾಗಿ ಗುರುತಿಸಿಕೊಂಡಿದ್ದಾರೆ. ವಿಧಾನಸಭೆಯ ಅಧಿವೇಶನಗಳಲ್ಲಿಯೂ ಅವರು ಎಲ್ಲಾ ಸದಸ್ಯರಿಗೆ ಗೌರವ ನೀಡುತ್ತಾ, ಸಂವಾದದ ಮೂಲಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಪ್ರೋತ್ಸಾಹಿಸುತ್ತಾರೆ. ಅವರ ಶಾಂತ, ಸಮತೋಲನದ ನಡವಳಿಕೆ ಮತ್ತು ಎಲ್ಲರನ್ನು ಒಳಗೊಳ್ಳುವ ಮನೋಭಾವವು ರಾಜ್ಯ ರಾಜಕೀಯದಲ್ಲಿ ಸೌಹಾರ್ದತೆ ಹಾಗೂ ಸಹಕಾರದ ವಾತಾವರಣವನ್ನು ನಿರ್ಮಿಸಲು ನೆರವಾಗಿದೆ ಎಂದು ಆಲ್ವಿನ್ ತಿಳಿಸಿದ್ದಾರೆ.

ದಕ್ಷಿಣ ಕನ್ನಡದ ಶಾಂತಿ ಕಾಪಾಡಲು ಖಾದರ್ ರವರ ದೃಢ ಕ್ರಮ:

ಕೋಮು ಸಂಘರ್ಷದಿಂದ ದಕ್ಷಿಣ ಕನ್ನಡ ಜಿಲ್ಲೆ ಸಂಪೂರ್ಣವಾಗಿ ಜರ್ಜರಿತಗೊಂಡ ಸಂದರ್ಭದಲ್ಲಿ, ರಾಜ್ಯ ಸರ್ಕಾರವು ತಕ್ಷಣ ಕ್ರಮ ಕೈಗೊಂಡು, ಶಾಂತಿ ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಖಡಕ್ ಅಧಿಕಾರಿಗಳನ್ನು ನೇಮಿಸಿತು. ಮುಖ್ಯಮಂತ್ರಿ ಸಿದ್ದರಾಮಯ್ಯರವರ ನೇತೃತ್ವದಲ್ಲಿ, ಅನುಭವ ಸಂಪನ್ನ ಹಾಗೂ ನಿಷ್ಠಾವಂತ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಪೊಲೀಸ್ ಆಯುಕ್ತರನ್ನು ನೇಮಿಸಿ, ಜಿಲ್ಲೆಯಲ್ಲಿ ಶಾಂತಿ ಮತ್ತು ಸೌಹಾರ್ದತೆ ಪುನಃ ಸ್ಥಾಪನೆಗೊಳಿಸಲಾಯಿತು. ಜಿಲ್ಲೆಯಲ್ಲಿ ಸಂಪೂರ್ಣ ಶಾಂತಿ ನೆಲೆಸಲು ಮುಖ್ಯಮಂತ್ರಿ ತೆಗೆದುಕೊಂಡ ಈ ನಿರ್ಣಯದಲ್ಲಿ ಖಾದರ್ ರವರೂ ಒತ್ತಡ ಹೇರಿದ್ದರು. ಈ ಕ್ರಮದಿಂದ ಖಾದರ್ ರವರ ಶಾಂತಿ ನಿರ್ವಹಣೆಯ ಬದ್ಧತೆ ಮತ್ತೊಮ್ಮೆ ಸ್ಪಷ್ಟವಾಯಿತು.

ಸ್ಪೀಕರ್ ಖಾದರ್ ರವರ ನಿಷ್ಠೆಯ ಮೇಲಿನ ವಿಶ್ವಾಸ:

ಈ ಸಮಯದಲ್ಲಿ ಸ್ಪೀಕರ್ ಯು.ಟಿ. ಖಾದರ್ ರವರ ನಿಷ್ಠೆ ಮತ್ತು ಪಕ್ಷನಿಷ್ಠೆಯೂ ಸ್ಪಷ್ಟವಾಗಿ ಕಾಣಿಸಿಕೊಂಡಿತು. ಒಂದು ವೇಳೆ ಖಾದರ್ ರವರು ಭ್ರಷ್ಟರಾಗಿದ್ದರೆ, ಇಂತಹ ಕಠಿಣ ಕ್ರಮಗಳನ್ನು ಅವರು ವಿರೋಧಿಸುತ್ತಿದ್ದರು. ಆದರೆ ಖಾದರ್ ರವರು ಯಾವುದೇ ವಿರೋಧ ವ್ಯಕ್ತಪಡಿಸದೆ, ಸರ್ಕಾರದ ಕ್ರಮಕ್ಕೆ ಸಂಪೂರ್ಣ ಬೆಂಬಲ ನೀಡಿದರು. ಅವರ ಈ ನಿಷ್ಠಾವಂತ ನಿಲುವು ಮತ್ತು ಶಾಂತಿ ಸ್ಥಾಪನೆಗೆ ನೀಡಿದ ಸಹಕಾರದಿಂದ ಅವರು ಪ್ರಾಮಾಣಿಕ ಮತ್ತು ಜನಹಿತ ಚಿಂತನೆಯ ನಾಯಕನಾಗಿ ಗುರುತಿಸಿಕೊಂಡಿದ್ದಾರೆ ಎಂದು ಆಲ್ವಿನ್ ಡಿಸೋಜ ಪಾನೀರ್ ಸ್ಪಷ್ಟಪಡಿಸಿದ್ದಾರೆ.

You may also like

News

ಮಾಣಿ ಗ್ರಾಮದಲ್ಲಿ ಹಳೆ ಮನೆ ದುರಸ್ತಿ ಪರವಾನಗಿ ಪಡೆದು ಸರಕಾರಿ ಜಮೀನಿನ ಮೇಲೆ ಅಕ್ರಮವಾಗಿ ನಿರ್ಮಿಸಿದ ಐಶಾರಾಮಿ ಬಂಗ್ಲೆ

ಯಾವುದೇ ದಾಖಲೆಗಳಿಲ್ಲದೆ ಸರಕಾರಕ್ಕೆ ವಂಚನೆ ಮಾಡಿದ್ದನ್ನು ಬಯಲಿಗೆಳೆದ ಸಾಮಾಜಿಕ ಕಾರ್ಯಕರ್ತ ಅತಿಕ್ರಮಿತ ಕಟ್ಟಡ ಕೂಡಲೇ ತೆರವುಗೊಳಿಸಲು ಲೂಸಿಯಾ ಮೆಟಿಲ್ಡಾ ಪಿಂಟೊರವರಿಗೆ ಬಂಟ್ವಾಳ ತಹಶೀಲ್ದಾರ್ ನೋಟಿಸ್ ಜಾರಿ ಮಾಣಿ
News

ನಕಲಿ ದಾಖಲೆ ಪ್ರಕರಣದಲ್ಲಿ ಆರೋಪಿ ಅಬ್ದುಲ್ ಹಾಶೀಮ್ ಬಂಧನ

ನಕಲಿ ದಾಖಲೆ ಸೃಷ್ಟಿಸಿ ನ್ಯಾಯಾಲಯವನ್ನು ವಂಚಿಸಿದ ಭೂಪ ಪುತ್ತೂರು ತಾಲೂಕಿನ ಪಡುವನ್ನೂರು ಗ್ರಾಮದ 34 ವರ್ಷ ಪ್ರಾಯದ ಅಬ್ದುಲ್ ಹಾಶೀಮ್  ಎಂಬಾತನನ್ನು ಉಪ್ಪಿನಂಗಡಿ ಪೊಲೀಸರು ನವೆಂಬರ್ 6ರಂದು

You cannot copy content of this page