August 30, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಾಣಿ ಕರ್ನಾಟಕ ಪ್ರೌಢ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಸಾಹಿತ್ಯ ರಚನಾ ಕಮ್ಮಟ, ಕವಿಗೋಷ್ಠಿ

ಕರ್ನಾಟಕ ರಾಜ್ಯ ಬರಹಗಾರರ ವೇದಿಕೆ (ರಿ.)ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲೂಕು ಘಟಕ, ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತು (ರಿ.) ಹುಬ್ಬಳ್ಳಿ – ತಾಲೂಕು ಸಮಿತಿ ಬಂಟ್ವಾಳ ಹಾಗೂ ಕರ್ನಾಟಕ ಪ್ರೌಢಶಾಲೆ ಮಾಣಿ ಇವುಗಳ ಸಹಭಾಗಿತ್ವದಲ್ಲಿ 70ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ವಿದ್ಯಾರ್ಥಿಗಳಿಗೆ ಸಾಹಿತ್ಯ ರಚನಾ ಕಮ್ಮಟ ಹಾಗೂ ಕವಿಗೋಷ್ಠಿ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮವನ್ನು ನಿವೃತ್ತ ಸಂಸ್ಕೃತ ಶಿಕ್ಷಕ ಶಿರಂಕಲ್ಲು ಕೃಷ್ಣ ಭಟ್ ಉದ್ಘಾಟಿಸಿದರು. ‘ಸಾಹಿತ್ಯದ ಅಭಿರುಚಿ ಮನೆಯಿಂದ ಆರಂಭವಾಗಿ ಶಾಲೆಯಲ್ಲಿ ಉನ್ನತಿ ಹೊಂದಿ ಸಮಾಜದಲ್ಲಿ ಪ್ರಸ್ತುತಿಗೊಳ್ಳಬೇಕು. ಭೂಮಿಗೆ ಬಿದ್ದ ಬೀಜ, ಎದೆಗೆ ಬಿದ್ದ ಅಕ್ಷರ ಚಿಗುರುವುದು ಖಂಡಿತ ಎಂದರು.

 


ಸಂಪನ್ಮೂಲ ವ್ಯಕ್ತಿಯಾಗಿ ಕ.ಚು.ಸಾ.ಪ. ಮತ್ತು ಕ.ರಾ.ಬ.ಸಂ. ದಕ್ಷಿಣ ಕನ್ನಡ ಜಿಲ್ಲಾ ಘಟಕ ಅಧ್ಯಕ್ಷ ಜಯಾನಂದ ಪೆರಾಜೆ ತರಬೇತಿ ನೀಡಿದರು. ಕನ್ನಡ – ನಾಡು ನುಡಿ – ಸಂಸ್ಕೃತಿಯ ವೈಭವ, ಕನ್ನಡ ಸಾಹಿತ್ಯ ಲೋಕದಲ್ಲಿ ದಕ್ಷಿಣ ಕನ್ನಡದ ಕೊಡುಗೆ ಮತ್ತು ಭವಿಷ್ಯದ ಸಾಹಿತಿಗಳು ಹೇಗೆ ತಯಾರಿಗೊಳ್ಳಬೇಕೆಂದು ಸವಿವರವಾಗಿ ತಿಳಿಸಿದರು. ಇದೇ ಸಂದರ್ಭ ಕಳೆದ SSLC ಪರೀಕ್ಷೆಯಲ್ಲಿ 625/603 ಅಂಕಗಳನ್ನು ಗಳಿಸಿದ ಮರ್ಯಂ ಸ್ವಾಬಿರಾರವರನ್ನು ಗೌರವಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಕಿರಣ್ ಹೆಗ್ಡೆ ವಹಿಸಿದ್ದರು. ವೇದಿಕೆಯಲ್ಲಿ ಶಾಲಾ ಸಂಚಾಲಕ ಹಾಜಿ ಕೆ. ಇಬ್ರಾಹಿಂ ಮಾಣಿ, ಮುಖ್ಯ ಶಿಕ್ಷಕ ಎಸ್. ಚೆನ್ನಪ್ಪ ಗೌಡ ಉಪಸ್ಥಿತರಿದ್ದರು.

ಬಳಿಕ ನಡೆದ ಕವಿಗೋಷ್ಠಿಯ ಅಧ್ಯಕ್ಷತೆಯನ್ನು ಕವಿ ಅಶೋಕ ಎನ್. ಕಡೇಶಿವಾಲಯ ವಹಿಸಿದ್ದರು. ವಿದ್ಯಾರ್ಥಿಗಳಾದ ಶ್ರುತಿಜ, ರಕ್ಷಿತಾ, ನಮೃತ, ಕ.ಚು.ಸಾ.ಪ. ರಾಜ್ಯ ಮಹಿಳಾ ಪ್ರತಿನಿಧಿ ಶಾಂತಾ ಪುತ್ತೂರು, ಕ.ಚು.ಸಾ.ಪ. ಬಂಟ್ವಾಳದ ಅಧ್ಯಕ್ಷ ರವೀಂದ್ರ ಕುಕ್ಕಾಜೆ, ಪುತ್ತೂರು ವಿವೇಕಾನಂದ ತಾಂತ್ರಿಕ ಕಾಲೇಜಿನ ಸಹ ಪ್ರಾಧ್ಯಾಪಕಿ ಮಾನಸ ಕೈಂತಜೆ, ಬಿ.ಎ. ವಿದ್ಯಾ ಸಂಸ್ಥೆ ತುಂಬೆಯ ಸಹ ಶಿಕ್ಷಕ ರಮೇಶ್ ಮೆಲ್ಕಾರ್, ಪದ್ಮನಾಭ ಪೂಜಾರಿ ಬಂಟ್ವಾಳ, ಪ್ರವೀಣ್ ಜಯ ವಿಟ್ಲ ಕವನ ವಾಚಿಸಿದರು. ಹಿಂದಿ ಶಿಕ್ಷಕ ಜಯರಾಮ ಕಾಂಚನ ಕಾರ್ಯಕ್ರಮ ಆಯೋಜಿಸಿ, ಕವನ ವಾಚಿಸಿ, ಕಾರ್ಯಕ್ರಮ ನಿರೂಪಿಸಿದರು. ಮೈತ್ರಿ ಮತ್ತು ತಂಡ ಪ್ರಾರ್ಥಿಸಿ, ಜೀವಿತ್ ಮತ್ತು ತಂಡ ಸಹಕರಿಸಿದರು.

You may also like

News

ಧರ್ಮಸ್ಥಳದಲ್ಲಿ ‘ಪುನರ್ವಸು’ ಅಂತಾರಾಷ್ಟ್ರೀಯ ಸಮಾವೇಶಕ್ಕೆ ಚಾಲನೆ

ಆಯುರ್ವೇದದಿಂದ ಪಂಚೇಂದ್ರಿಯಗಳ ಬಲವರ್ಧನೆ, ಆರೋಗ್ಯಭಾಗ್ಯ ಸಾಧ್ಯ – ವೈದ್ಯ ಮನೀಷಾ ಕೋಟೆಕಾರ್ ಉಜಿರೆ: ಸಾವಿರಾರು ವರ್ಷಗಳ ಪಾರಂಪರಿಕ ಪರಂಪರೆಯನ್ನು ಹೊಂದಿರುವ ಆಯುರ್ವೇದ ಪದ್ಧತಿಯ ಮೂಲಕ ದೇಹದ ಪಂಚೇಂದ್ರಿಯಗಳನ್ನು
News

ಸಿಬ್ಬಂದಿ ಕೊರತೆ ನೀಗಿಸಲು ಮೆಸ್ಕಾಂಗೆ 395 ಪವರ್‌ಮ್ಯಾನ್‌ಗಳು – ಅಧ್ಯಕ್ಷ ಕೆ. ಹರೀಶ್ ಕುಮಾರ್

ಮಂಗಳೂರು: ವಿದ್ಯುತ್ ಸರಬರಾಜು ಮತ್ತು ನಿರ್ವಹಣಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಮೆಸ್ಕಾಂ ವ್ಯಾಪ್ತಿಗೆ 395 ಹೊಸ ಪವರ್‌ಮ್ಯಾನ್‌ಗಳನ್ನು ನೇಮಕ ಮಾಡಲಾಗಿದೆ ಎಂದು ಮೆಸ್ಕಾಂ ಅಧ್ಯಕ್ಷ ಕೆ.

You cannot copy content of this page