ಪಾಲ್ದನೆ ಚರ್ಚ್ನಲ್ಲಿ ICYM ವತಿಯಿಂದ ಯುವೋತ್ಸವ
ಸೃಜನಶೀಲತೆ ಮತ್ತು ಶ್ರಮವನ್ನು ಜನೋಪಯೋಗಿ ಕಾರ್ಯಗಳಿಗೆ ಮುಡುಪಾಗಿಸಿ – ಫಾದರ್ ರಿಚರ್ಡ್ ಕುವೆಲ್ಲೊ

ಮಂಗಳೂರು ಧರ್ಮಕ್ಷೇತ್ರದ ಪಾಲ್ದನೆ ಸಂತ ತೆರೆಸಾ ಚರ್ಚ್ನ ICYM ವತಿಯಿಂದ ಯುವೋತ್ಸವ ಕಾರ್ಯಕ್ರಮ ನವಂಬರ್ 2ರಂದು ಭಾನುವಾರ ನಡೆಯಿತು. ಪಾಲ್ದಾನೆ ಚರ್ಚ್ ಪಾಲನಾ ಸಮಿತಿಯ ಸದಸ್ಯೆ ಹಾಗೂ ಆಧ್ಯಾತ್ಮಿಕ ಸಮಿತಿಯ ಸಂಚಾಲಕಿ ಪ್ರೆಸಿಲ್ಲಾ ಫೆರ್ನಾಂಡಿಸ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು. ಅವರು ಮಾತನಾಡಿ, “ಯುವ ಶಕ್ತಿ ಅದ್ಭುತ ಶಕ್ತಿಯಾಗಿದೆ. ಸಮುದಾಯ, ಸಮಾಜ ಮತ್ತು ದೇಶದ ಅಭಿವೃದ್ಧಿಗೆ ಯುವಜನರ ಪಾತ್ರ ಅತ್ಯಂತ ಮುಖ್ಯ. ಅವರು ಒಟ್ಟಾಗಿ ಒಳ್ಳೆಯ ಉದ್ದೇಶಕ್ಕಾಗಿ ಶ್ರಮಿಸಿದರೆ ಸಮೃದ್ಧಿ ಖಚಿತವಾಗಿ ನೆಲೆಸುತ್ತದೆ. ಪಾಲ್ದನೆ ಚರ್ಚ್ನ ICYM ಈ ನಿಟ್ಟಿನಲ್ಲಿ ನಂಬರ್ ಒನ್ ಸಂಘಟನೆಯಾಗಿದೆ,” ಎಂದರು. ಈ ಸಂದರ್ಭದಲ್ಲಿ ಪ್ರೆಸಿಲ್ಲಾ ಫೆರ್ನಾಂಡಿಸ್ ರವರ ಸಾಮಾಜಿಕ ಸೇವೆಯನ್ನು ಗೌರವಿಸಿ ಫಲಪುಷ್ಪಗಳಿಂದ ಸನ್ಮಾನಿಸಲಾಯಿತು.




ಕಾರ್ಯಕ್ರಮದಲ್ಲಿ ಪಾಲ್ದಾನೆ ಚರ್ಚ್ನ ಧರ್ಮಗುರು ವಂದನೀಯ ಫಾದರ್ ರಿಚರ್ಡ್ ಅಲೋಶಿಯಸ್ ಕುವೆಲ್ಲೊ ಮಾತನಾಡಿ “ಯುವಶಕ್ತಿ ಸಮಾಜದ ಬದಲಾವಣೆಗೆ ಅತ್ಯಂತ ಬಲವಾದ ಶಕ್ತಿ; ಅದನ್ನು ಒಳ್ಳೆಯ ಕಾರ್ಯಗಳಿಗೆ ಬಳಸಿದರೆ ಸಮೃದ್ಧಿ ಖಚಿತ. ಯುವಕರು ತಮ್ಮ ಉತ್ಸಾಹ, ಸೃಜನಶೀಲತೆ ಮತ್ತು ಶ್ರಮವನ್ನು ಜನೋಪಯೋಗಿ ಕಾರ್ಯಗಳಿಗೆ ಮುಡುಪಾಗಿಸಿದರೆ ದೇಶದ ಭವಿಷ್ಯ ಬೆಳಗುತ್ತದೆ. ಒಳ್ಳೆಯ ಉದ್ದೇಶಕ್ಕಾಗಿ ಒಂದಾಗಿ ಕೆಲಸ ಮಾಡುವ ಯುವಜನರು ಯಾವುದೇ ಅಸಾಧ್ಯವನ್ನು ಸಾಧಿಸಬಲ್ಲರು. ಯುವಶಕ್ತಿಯು ನೈತಿಕತೆ, ಸೇವಾ ಮನೋಭಾವ ಮತ್ತು ಪ್ರಗತಿಶೀಲ ಚಿಂತನೆಗಳೊಂದಿಗೆ ಬಳಸಿದಾಗ ಸಮಾಜದಲ್ಲಿ ಶಾಶ್ವತ ಬದಲಾವಣೆ ತರಬಹುದು” ಎಂದು ಶುಭಾಶಯಗಳನ್ನು ತಿಳಿಸಿದರು. ICYM ಕೇಂದ್ರೀಯ ನಿರ್ದೇಶಕರಾದ ವಂದನೀಯ ಫಾದರ್ ಅಶ್ವಿನ್ ಕಾರ್ಡೋಜಾ ಮತ್ತು ವಂದನೀಯ ಫಾದರ್ ಲಾರೆನ್ಸ್ ಕುಟಿನ್ಹಾ ಸಹಕಾರ ನೀಡಿದರು.

ಕಾರ್ಯಕ್ರಮದಲ್ಲಿ ICYM ಸಿಟಿ ವಲಯದ ಅಧ್ಯಕ್ಷ ರಾಯನ್ ನೊರೊನ್ಹಾ, ಪಾಲ್ದನೆ ಘಟಕದ ಅಧ್ಯಕ್ಷ ವಿಲೀಶಾ ಬ್ರ್ಯಾಗ್ಸ್, ಕಾರ್ಯದರ್ಶಿ ಮಿಶೆಲ್ ಲೋಬೊ, ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ಎಲಿಯಾಸ್ ಫೆರ್ನಾಂಡಿಸ್, ಕಾರ್ಯದರ್ಶಿ ಆಸ್ಟಿನ್ ಮೊಂತೇರೊ, ಹಾಗೂ ಸಂಚಾಲಕ ರೋಶನ್ ಮೊಂತೇರೊ ಉಪಸ್ಥಿತರಿದ್ದರು. ಯುವಜನರು ವಿವಿಧ ವಿನೋದಾವಳಿ, ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಗುಂಪು ಸ್ಪರ್ಧೆಗಳನ್ನು ನಡೆಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.




