April 29, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ರಾಜ್ಯೋತ್ಸವ ಪ್ರಶಸ್ತಿಯಲ್ಲಿ ದೊರೆತ ರೂಪಾಯಿ 5 ಲಕ್ಷವನ್ನು 5 ಮಾನವೀಯ ಸೇವಾ ಸಂಸ್ಥೆಗಳಿಗೆ ಘೋಷಿಸಿದ ಝಕರಿಯ ಜೋಕಟ್ಟೆ

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯಲ್ಲಿ ದೊರೆತ ರೂಪಾಯಿ 5 ಲಕ್ಷವನ್ನು ಮಾನವೀಯ ಸೇವೆಗೈಯ್ಯುವ 5 ಸಂಸ್ಥೆಗಳಿಗೆ ನೀಡುವುದಾಗಿ ಪ್ರಶಸ್ತಿ ಪುರಸ್ಕೃತ ಅನಿವಾಸಿ ಉದ್ಯಮಿ ಝಕರಿಯ ಜೋಕಟ್ಟೆ ಘೋಷಿಸಿದ್ದಾರೆ.

ಮಂಗಳೂರಿನ ಸಾನಿಧ್ಯ ಮಾನಸಿಕ ವಿಕಲಚೇತನರ ವಸತಿ ಶಾಲೆ, ಸ್ನೇಹದೀಪ ಎಚ್ಐವಿ ಪೀಡಿತ ಮಕ್ಕಳ ಆಶ್ರಮ ಬೋಂದೆಲ್, ಸ್ನೇಹಾಲಯ ವ್ಯಸನ ವಿಮೋಚನಾ ಕೇಂದ್ರ ತಲಪಾಡಿ, ಎಂ.ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ನ ಲೇಡಿಗೋಶನ್ ಕಾರುಣ್ಯ ಯೋಜನೆ, ಕಾವಳಕಟ್ಟೆ ಹಿದಾಯ ಕಾಲನಿಯ ವಿಕಲಚೇತನ ಮಕ್ಕಳ ಕೇಂದ್ರಕ್ಕೆ ತಲಾ ರೂಪಾಯಿ ಒಂದು ಲಕ್ಷ ನೀಡುವುದಾಗಿ ತಿಳಿಸಿದ್ದಾರೆ. ಝಕರಿಯ ಜೋಕಟ್ಟೆ ಅಭಿಮಾನಿ ಬಳಗ ನವಂಬರ್ ತಿಂಗಳಲ್ಲಿ ಏರ್ಪಡಿಸಲುದ್ದೇಶಿಸಿರುವ ಪೌರ ಸನ್ಮಾನದಲ್ಲಿ ಈ ಮೊತ್ತವನ್ನು ವಿತರಿಸಲಿದ್ದಾರೆ.

ಕರ್ನಾಟಕ ಸರಕಾರವು ರಾಜ್ಯೋತ್ಸವದಂದು ಅನಿವಾಸಿ ಉದ್ಯಮಿ, ಕೊಡುಗೈ ದಾನಿ, ಎಂ.ಫ್ರೆಂಡ್ಸ್ ಚಾರಿಟೇಬಲ್ ಅಧ್ಯಕ್ಷ ಝಕರಿಯ ಜೋಕಟ್ಟೆ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ನಝೀರ್ ಅಹ್ಮದ್ ಸೇರಿಕೊಂಡು ಗೌರವಿಸಿದರು. ಪ್ರಶಸ್ತಿಯು ರೂಪಾಯಿ 5 ಲಕ್ಷ ನಗದು, 25 ಗ್ರಾಮ್ ಚಿನ್ನದ ಪದಕ, ಪ್ರಶಸ್ತಿ ಪತ್ರ ಹಾಗೂ ಸ್ಮರಣಿಕೆ ಒಳಗೊಂಡಿತ್ತು.

You may also like

News

ಬಂಟ್ವಾಳದ ತೌಹೀದ್ ಶಾಲೆಗೆ ಕೀರ್ತಿ ತಂದ ಆಭಿದುನ್ನೀಸ – SSLC ಪರೀಕ್ಷೆಯಲ್ಲಿ ಭರ್ಜರಿ ಸಾಧನೆ

ಇತ್ತೀಚೆಗೆ ಪ್ರಕಟಗೊಂಡ ರಾಜ್ಯ ಮಟ್ಟದ SSLC ಪರೀಕ್ಷಾ ಫಲಿತಾಂಶದಲ್ಲಿ ಬಂಟ್ವಾಳದ ತೌಹೀದ್ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಆಭಿದುನ್ನೀಸ ಎಂ. ಅವರು ಅತ್ಯುತ್ತಮ ಅಂಕಗಳನ್ನು ಗಳಿಸುವ ಮೂಲಕ
News

ಪಾಲ್ದನೆ ಚರ್ಚ್‌ನಲ್ಲಿ ವಿದ್ಯಾರ್ಥಿಗಳಿಗೆ ಭವಿಷ್ಯದ ದಾರಿ – ವೃತ್ತಿ ಮಾರ್ಗದರ್ಶನ ಶಿಬಿರ ಯಶಸ್ವಿ

ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ನಂತರ ಸರಿಯಾದ ವೃತ್ತಿಜೀವನವನ್ನು ಆರಿಸಿಕೊಳ್ಳಲು ನೆರವಾಗುವ ನಿಟ್ಟಿನಲ್ಲಿ, ಮಂಗಳೂರು ಧರ್ಮಕ್ಷೇತ್ರಕ್ಕೆ ಒಳಪಟ್ಟ ಪಾಲ್ದನೆಯ ಸಂತ ತೆರೆಸಾ ಚರ್ಚ್‌ನ ಶೈಕ್ಷಣಿಕ ಆಯೋಗದ ವತಿಯಿಂದ ಇತ್ತೀಚೆಗೆ

You cannot copy content of this page