July 10, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ರಾಜ್ಯೋತ್ಸವ ಪ್ರಶಸ್ತಿಯಲ್ಲಿ ದೊರೆತ ರೂಪಾಯಿ 5 ಲಕ್ಷವನ್ನು 5 ಮಾನವೀಯ ಸೇವಾ ಸಂಸ್ಥೆಗಳಿಗೆ ಘೋಷಿಸಿದ ಝಕರಿಯ ಜೋಕಟ್ಟೆ

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯಲ್ಲಿ ದೊರೆತ ರೂಪಾಯಿ 5 ಲಕ್ಷವನ್ನು ಮಾನವೀಯ ಸೇವೆಗೈಯ್ಯುವ 5 ಸಂಸ್ಥೆಗಳಿಗೆ ನೀಡುವುದಾಗಿ ಪ್ರಶಸ್ತಿ ಪುರಸ್ಕೃತ ಅನಿವಾಸಿ ಉದ್ಯಮಿ ಝಕರಿಯ ಜೋಕಟ್ಟೆ ಘೋಷಿಸಿದ್ದಾರೆ.

ಮಂಗಳೂರಿನ ಸಾನಿಧ್ಯ ಮಾನಸಿಕ ವಿಕಲಚೇತನರ ವಸತಿ ಶಾಲೆ, ಸ್ನೇಹದೀಪ ಎಚ್ಐವಿ ಪೀಡಿತ ಮಕ್ಕಳ ಆಶ್ರಮ ಬೋಂದೆಲ್, ಸ್ನೇಹಾಲಯ ವ್ಯಸನ ವಿಮೋಚನಾ ಕೇಂದ್ರ ತಲಪಾಡಿ, ಎಂ.ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ನ ಲೇಡಿಗೋಶನ್ ಕಾರುಣ್ಯ ಯೋಜನೆ, ಕಾವಳಕಟ್ಟೆ ಹಿದಾಯ ಕಾಲನಿಯ ವಿಕಲಚೇತನ ಮಕ್ಕಳ ಕೇಂದ್ರಕ್ಕೆ ತಲಾ ರೂಪಾಯಿ ಒಂದು ಲಕ್ಷ ನೀಡುವುದಾಗಿ ತಿಳಿಸಿದ್ದಾರೆ. ಝಕರಿಯ ಜೋಕಟ್ಟೆ ಅಭಿಮಾನಿ ಬಳಗ ನವಂಬರ್ ತಿಂಗಳಲ್ಲಿ ಏರ್ಪಡಿಸಲುದ್ದೇಶಿಸಿರುವ ಪೌರ ಸನ್ಮಾನದಲ್ಲಿ ಈ ಮೊತ್ತವನ್ನು ವಿತರಿಸಲಿದ್ದಾರೆ.

ಕರ್ನಾಟಕ ಸರಕಾರವು ರಾಜ್ಯೋತ್ಸವದಂದು ಅನಿವಾಸಿ ಉದ್ಯಮಿ, ಕೊಡುಗೈ ದಾನಿ, ಎಂ.ಫ್ರೆಂಡ್ಸ್ ಚಾರಿಟೇಬಲ್ ಅಧ್ಯಕ್ಷ ಝಕರಿಯ ಜೋಕಟ್ಟೆ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ನಝೀರ್ ಅಹ್ಮದ್ ಸೇರಿಕೊಂಡು ಗೌರವಿಸಿದರು. ಪ್ರಶಸ್ತಿಯು ರೂಪಾಯಿ 5 ಲಕ್ಷ ನಗದು, 25 ಗ್ರಾಮ್ ಚಿನ್ನದ ಪದಕ, ಪ್ರಶಸ್ತಿ ಪತ್ರ ಹಾಗೂ ಸ್ಮರಣಿಕೆ ಒಳಗೊಂಡಿತ್ತು.

You may also like

News

SJEC’s Nikhil A. Poojary to Represent India at International Yoga Championship

Saint Joseph Engineering College (SJEC) Vamanjoor has added another feather to its cap with the outstanding achievement of Nikhil A.
News

ಶಿಲುಬೆ ಧ್ವಂಸಗೊಳಿಸಿದರೆ ನಂಬಿಕೆ ನಾಶವಾಗದು – ಪಶ್ಚಿಮ ಬಂಗಾಳದ ಚರ್ಚ್ ಮೇಲಿನ ದಾಳಿಗೆ AICU ರಾಜಾಧ್ಯಕ್ಷ ಅಲ್ವಿನ್ ಡಿಸೋಜ ಪಾನೀರ್ ಆಕ್ರೋಶ

ಪಶ್ಚಿಮ ಬಂಗಾಳದ ಬರೂಯಿಪುರದಲ್ಲಿ ಹೊಸದಾಗಿ ನಿರ್ಮಾಣಗೊಂಡಿರುವ ಚರ್ಚ್ ಮೇಲೆ ದಾಳಿ ನಡೆಸಿ, ಪವಿತ್ರ ಶಿಲುಬೆಯನ್ನು ಧ್ವಂಸಗೊಳಿಸಿರುವ ಘಟನೆ ಅತ್ಯಂತ ಖಂಡನೀಯವಾಗಿದ್ದು, ಧಾರ್ಮಿಕ ಸೌಹಾರ್ದತೆಗೆ ಧಕ್ಕೆ ತರುವ ಇಂತಹ

You cannot copy content of this page