December 12, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಕೊಡಿಪ್ಪಾಡಿ ಗ್ರಾಮ ಉಪ್ಪಿನಂಗಡಿ ಹೋಬಳಿಯಿಂದ ಪುತ್ತೂರು ಹೋಬಳಿಗೆ ವರ್ಗಾವಣೆ – ಶೀಘ್ರ ಕ್ರಮಕ್ಕೆ ಜಿಲ್ಲಾಧಿಕಾರಿಗೆ ಸೂಚನೆ

ಜನರ ಬೇಡಿಕೆಗೆ ಸ್ಪಂದನೆ ನೀಡಿದ ಶಾಸಕ ಅಶೋಕ್ ರೈ

ಕೊಡಿಪ್ಪಾಡಿ ಗ್ರಾಮವು ಭೌಗೋಳಿಕವಾಗಿ ಪುತ್ತೂರು ಹೋಬಳಿಗೆ ಹತ್ತಿರವಿದ್ದರೂ, ಆಡಳಿತಾತ್ಮಕವಾಗಿ ಉಪ್ಪಿನಂಗಡಿ ಹೋಬಳಿಗೆ ಸೇರಿತ್ತು. ಇದರ ಪರಿಣಾಮವಾಗಿ ಗ್ರಾಮಸ್ಥರಿಗೆ ಕಂದಾಯ ಇಲಾಖೆಯ ಕೆಲಸಕಾರ್ಯಗಳಿಗಾಗಿ ದೂರದ ಉಪ್ಪಿನಂಗಡಿಗೆ ತೆರಳಬೇಕಾದ ಅನಿವಾರ್ಯತೆ ಉಂಟಾಗಿತ್ತು. ಈ ಸಮಸ್ಯೆಯಿಂದ ಗ್ರಾಮಸ್ಥರು ಹಲವು ವರ್ಷಗಳಿಂದ ಸ್ಥಳೀಯ ಜನಪ್ರತಿನಿಧಿಗಳು ಮತ್ತು ಇಲಾಖೆಗೆ ಮನವಿ ಸಲ್ಲಿಸುತ್ತಿದ್ದರು.

ಜನರ ಬೇಡಿಕೆಗೆ ಸ್ಪಂದನೆ ನೀಡಿದ ಶಾಸಕ ಅಶೋಕ್ ರೈ:

ಗ್ರಾಮಸ್ಥರ ಈ ದೀರ್ಘಕಾಲದ ಬೇಡಿಕೆಗೆ ಸ್ಪಂದಿಸಿದ ಪುತ್ತೂರು ಶಾಸಕರಾದ ಅಶೋಕ್ ರೈಯವರು ವಿಷಯವನ್ನು ಕಂದಾಯ ಸಚಿವ ಕೃಷ್ಣ ಬೈರೇಗೌಡರವರ ಗಮನಕ್ಕೆ ತಂದು, ಕೊಡಿಪ್ಪಾಡಿ ಗ್ರಾಮವನ್ನು ಪುತ್ತೂರು ಹೋಬಳಿಗೆ ಸೇರಿಸುವಂತೆ ವಿನಂತಿಸಿದ್ದರು. ಕಂದಾಯ ಸಚಿವರು ತಕ್ಷಣ ಸ್ಪಂದಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರಿಗೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ, ಇದರಿಂದ ಗ್ರಾಮಸ್ಥರ ಬಹುಕಾಲದ ಬೇಡಿಕೆ ಈಡೇರಲಿದೆ. ಗ್ರಾಮವನ್ನು ಪುತ್ತೂರು ಹೋಬಳಿಗೆ ಸೇರಿಸುವುದರಿಂದ ಕೊಡಿಪ್ಪಾಡಿ ಗ್ರಾಮಸ್ಥರಿಗೆ ಸರ್ಕಾರಿ ಕಚೇರಿಗಳಿಗೆ ತೆರಳುವ ಅಂತರ ಕಡಿಮೆಯಾಗುತ್ತದೆ ಮತ್ತು ಆಡಳಿತಾತ್ಮಕ ಕಾರ್ಯಗಳು ಸುಗಮಗೊಳ್ಳಲಿವೆ.

You may also like

News

ಮಂಗಳೂರಿನ ಆಯುಷ್ ಇಲಾಖೆಯ ಅವಧಿ ಮೀರಿದ ಔಷಧ ಅಕ್ರಮ—ಸರ್ಕಾರದ ನಿರ್ಲಕ್ಷ್ಯಕ್ಕೆ ಶಾಸಕ ವೇದವ್ಯಾಸ ಕಾಮತ್ ತೀವ್ರ ಆಕ್ರೋಶ

ಮಂಗಳೂರಿನ ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧಿಗಳನ್ನು ಪೂರೈಕೆ ಮಾಡಿ ರೋಗಿಗಳ ಜೀವದೊಂದಿಗೆ ಆಟವಾಡಿದ ಗಂಭೀರ ಅಕ್ರಮದ ಕುರಿತಾಗಿ ಯಾವುದೇ ಕ್ರಮ ಕೈಗೊಳ್ಳದಿರುವುದನ್ನು ಶಾಸಕ ವೇದವ್ಯಾಸ ಕಾಮತ್
News

ಪುತ್ತೂರಿಗೆ ಶಾಸಕ ಅಶೋಕ್ ರೈ ಕನಸು ನನಸಾದಂತೆ — ರೂಪಾಯಿ 5 ಕೋಟಿ ವೆಚ್ಚದ ಹೊಸ ತಾಲೂಕು ಪಂಚಾಯತ್ ಕಟ್ಟಡಕ್ಕೆ ನಾಳೆ ಡಿಸೆಂಬರ್ 13ರಂದು ಶಿಲಾನ್ಯಾಸ

ಪುತ್ತೂರಿನ ಅಭಿವೃದ್ಧಿ ಕನಸುಗಳು ಒಂದೊಂದಾಗಿ ಸಫಲವಾಗುತ್ತಿವೆ. ಹಳೆಯ ಮತ್ತು ಅಪರಿಹಾರ್ಯವಾಗಿರುವ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪುತ್ತೂರು ತಾಲೂಕು ಪಂಚಾಯತ್ ಕಚೇರಿಗೆ ಹೊಸ ಕಟ್ಟಡದ ಅಗತ್ಯವನ್ನು ಆಗಲೇ ಗುರುತಿಸಿದ್ದ ಶಾಸಕರಾದ

You cannot copy content of this page