ಕೊಡಿಪ್ಪಾಡಿ ಗ್ರಾಮ ಉಪ್ಪಿನಂಗಡಿ ಹೋಬಳಿಯಿಂದ ಪುತ್ತೂರು ಹೋಬಳಿಗೆ ವರ್ಗಾವಣೆ – ಶೀಘ್ರ ಕ್ರಮಕ್ಕೆ ಜಿಲ್ಲಾಧಿಕಾರಿಗೆ ಸೂಚನೆ
ಜನರ ಬೇಡಿಕೆಗೆ ಸ್ಪಂದನೆ ನೀಡಿದ ಶಾಸಕ ಅಶೋಕ್ ರೈ

ಕೊಡಿಪ್ಪಾಡಿ ಗ್ರಾಮವು ಭೌಗೋಳಿಕವಾಗಿ ಪುತ್ತೂರು ಹೋಬಳಿಗೆ ಹತ್ತಿರವಿದ್ದರೂ, ಆಡಳಿತಾತ್ಮಕವಾಗಿ ಉಪ್ಪಿನಂಗಡಿ ಹೋಬಳಿಗೆ ಸೇರಿತ್ತು. ಇದರ ಪರಿಣಾಮವಾಗಿ ಗ್ರಾಮಸ್ಥರಿಗೆ ಕಂದಾಯ ಇಲಾಖೆಯ ಕೆಲಸಕಾರ್ಯಗಳಿಗಾಗಿ ದೂರದ ಉಪ್ಪಿನಂಗಡಿಗೆ ತೆರಳಬೇಕಾದ ಅನಿವಾರ್ಯತೆ ಉಂಟಾಗಿತ್ತು. ಈ ಸಮಸ್ಯೆಯಿಂದ ಗ್ರಾಮಸ್ಥರು ಹಲವು ವರ್ಷಗಳಿಂದ ಸ್ಥಳೀಯ ಜನಪ್ರತಿನಿಧಿಗಳು ಮತ್ತು ಇಲಾಖೆಗೆ ಮನವಿ ಸಲ್ಲಿಸುತ್ತಿದ್ದರು.

ಜನರ ಬೇಡಿಕೆಗೆ ಸ್ಪಂದನೆ ನೀಡಿದ ಶಾಸಕ ಅಶೋಕ್ ರೈ:
ಗ್ರಾಮಸ್ಥರ ಈ ದೀರ್ಘಕಾಲದ ಬೇಡಿಕೆಗೆ ಸ್ಪಂದಿಸಿದ ಪುತ್ತೂರು ಶಾಸಕರಾದ ಅಶೋಕ್ ರೈಯವರು ವಿಷಯವನ್ನು ಕಂದಾಯ ಸಚಿವ ಕೃಷ್ಣ ಬೈರೇಗೌಡರವರ ಗಮನಕ್ಕೆ ತಂದು, ಕೊಡಿಪ್ಪಾಡಿ ಗ್ರಾಮವನ್ನು ಪುತ್ತೂರು ಹೋಬಳಿಗೆ ಸೇರಿಸುವಂತೆ ವಿನಂತಿಸಿದ್ದರು. ಕಂದಾಯ ಸಚಿವರು ತಕ್ಷಣ ಸ್ಪಂದಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರಿಗೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ, ಇದರಿಂದ ಗ್ರಾಮಸ್ಥರ ಬಹುಕಾಲದ ಬೇಡಿಕೆ ಈಡೇರಲಿದೆ. ಗ್ರಾಮವನ್ನು ಪುತ್ತೂರು ಹೋಬಳಿಗೆ ಸೇರಿಸುವುದರಿಂದ ಕೊಡಿಪ್ಪಾಡಿ ಗ್ರಾಮಸ್ಥರಿಗೆ ಸರ್ಕಾರಿ ಕಚೇರಿಗಳಿಗೆ ತೆರಳುವ ಅಂತರ ಕಡಿಮೆಯಾಗುತ್ತದೆ ಮತ್ತು ಆಡಳಿತಾತ್ಮಕ ಕಾರ್ಯಗಳು ಸುಗಮಗೊಳ್ಳಲಿವೆ.




