December 12, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ದಾಖಲೆ ಪ್ರಸಾರ – ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಜಾನುವಾರು ಸಾಗಾಟದ ಯಾವುದೇ ಅನುಮತಿ ನೀಡಿಲ್ಲ – ಪಶು ವೈದ್ಯಾಧಿಕಾರಿ ಸ್ಪಷ್ಟನೆ

ಜಾನುವಾರುಗಳ ಖರೀದಿ ರಶೀದಿಗಳು – ತಿದ್ದುಪಡಿ ಮಾಡಲ್ಪಟ್ಟ ಸುಳ್ಳು ದಾಖಲೆಗಳು – ಮಾರುಕಟ್ಟೆ ಸಮಿತಿ ಕಾರ್ಯದರ್ಶಿ

ಆರೋಪಿಗಳನ್ನು ರಕ್ಷಿಸಲು ಒಳಸಂಚು ರೂಪಿಸಿ, ಸುಳ್ಳು ದಾಖಲೆ ಸೃಷ್ಟಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡಿದ ಪ್ರಕರಣ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಅ.ಕ್ರ: 115/2025 ರಂತೆ, ಭಾರತೀಯ ನ್ಯಾಯ ಸಂಹಿತೆ 2023ರ ಕಲಂ 132, 109, 303(2) r/w 3(5) ಹಾಗೂ ಕರ್ನಾಟಕ ಜಾನುವಾರು ಹತ್ಯೆ ಪ್ರತಿ ಬಂಧಕ ಕಾಯ್ದೆ ಮತ್ತು ಸಂರಕ್ಷಣಾ ಕಾಯ್ದೆ 2020ರ ಕಲಂ 4, 5, 6, 12 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ ಸದ್ರಿ ವಾಹನದಲ್ಲಿ ಸಾಗಿಸಲಾಗುತ್ತಿದ್ದ ಜಾನುವಾರುಗಳ ಖರೀದಿ ರಶೀದಿಗಳೆಂದು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗಿದ್ದ ದಾಖಲೆಗಳನ್ನು ವಿಚಾರಿಸಿದಾಗ, ಚನ್ನರಾಯಪಟ್ಟಣ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿಯವರು ಜಾನುವಾರು ಸಂತೆ ಶುಕ್ರವಾರದಂದು ಮಾತ್ರ ನಡೆಯುವುದಾಗಿ ಹಾಗೂ ಪ್ರಸಾರವಾಗಿದ್ದ ರಶೀದಿಗಳು (ಕ್ರಮ ಸಂಖ್ಯೆ: 27653 ಮತ್ತು 27654) ತಿದ್ದುಪಡಿ ಮಾಡಲ್ಪಟ್ಟ ಸುಳ್ಳು ದಾಖಲೆಗಳೆಂದು ದೃಢಪಡಿಸಿದ್ದಾರೆ.

ಇದೇ ವೇಳೆ RTO ಅಧಿಕಾರಿ ಹಾಗೂ ಪಶು ವೈದ್ಯಾಧಿಕಾರಿಗಳು ಕೂಡಾ ಸದ್ರಿ ವಾಹನಕ್ಕೆ ಜಾನುವಾರು ಸಾಗಾಟದ ಯಾವುದೇ ಅನುಮತಿ ನೀಡಿಲ್ಲವೆಂದು ತಿಳಿಸಿದ್ದಾರೆ. ಪೊಲೀಸರು ಮುಂದುವರಿದು ಈ ಸುಳ್ಳು ದಾಖಲೆಗಳ ಬಗ್ಗೆ ತಿಳಿದಿದ್ದರೂ ಕೂಡಾ ಆರೋಪಿಗಳನ್ನು ರಕ್ಷಿಸುವ ಉದ್ದೇಶದಿಂದ State Office SDPI Karnataka ಹೆಸರಿನ “X” ಖಾತೆ, Thejasnews.com ನ ಮಾಲಕ/ಸಂಪಾದಕ ಸಾದತ್ ಬಜತೂರು ಸೇರಿದಂತೆ ಇತರ ಸಾಮಾಜಿಕ ಜಾಲತಾಣ ಬಳಕೆದಾರರು ಸುಳ್ಳು ಸುದ್ದಿಯನ್ನು ಪ್ರಸಾರ ಮಾಡಿದರೆಂದು ಪತ್ತೆಹಚ್ಚಿದ್ದಾರೆ.

ಈ ಕೃತ್ಯದಿಂದ ಸಾರ್ವಜನಿಕರಲ್ಲಿ ಉದ್ವೇಗ ಉಂಟಾಗಿ, ಗುಂಪು ಸೇರಿ ಅಶಾಂತಿ ಉಂಟುಮಾಡುವ ಸನ್ನಿವೇಶ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ, ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 123/2025, ಕಲಂ 233, 240, 338, 353(1)(b), 192, 61(2)(b), 238(c) r/w 3(5) ಭಾರತೀಯ ನ್ಯಾಯ ಸಂಹಿತೆ 2023ರಂತೆ ಮತ್ತೊಂದು ಪ್ರಕರಣ ದಾಖಲಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆಯವರು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಹಾಗೂ ಪ್ರಚೋದನಾಕಾರಿ ಪೋಸ್ಟ್‌ಗಳನ್ನು ಹಂಚುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದೆಂದು ಎಚ್ಚರಿಸಿದ್ದಾರೆ. ಸಾಮಾಜಿಕ ಜಾಲತಾಣ ಬಳಕೆದಾರರು ಜವಾಬ್ದಾರಿಯುತವಾಗಿ ಪ್ಲ್ಯಾಟ್‌ಫಾರ್ಮ್‌ಗಳನ್ನು ಬಳಸುವಂತೆ ಸಾರ್ವಜನಿಕರಿಗೆ ವಿನಂತಿ ಮಾಡಲಾಗಿದೆ.

You may also like

News

ಪುತ್ತೂರಿಗೆ ಶಾಸಕ ಅಶೋಕ್ ರೈ ಕನಸು ನನಸಾದಂತೆ — ರೂಪಾಯಿ 5 ಕೋಟಿ ವೆಚ್ಚದ ಹೊಸ ತಾಲೂಕು ಪಂಚಾಯತ್ ಕಟ್ಟಡಕ್ಕೆ ನಾಳೆ ಡಿಸೆಂಬರ್ 13ರಂದು ಶಿಲಾನ್ಯಾಸ

ಪುತ್ತೂರಿನ ಅಭಿವೃದ್ಧಿ ಕನಸುಗಳು ಒಂದೊಂದಾಗಿ ಸಫಲವಾಗುತ್ತಿವೆ. ಹಳೆಯ ಮತ್ತು ಅಪರಿಹಾರ್ಯವಾಗಿರುವ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪುತ್ತೂರು ತಾಲೂಕು ಪಂಚಾಯತ್ ಕಚೇರಿಗೆ ಹೊಸ ಕಟ್ಟಡದ ಅಗತ್ಯವನ್ನು ಆಗಲೇ ಗುರುತಿಸಿದ್ದ ಶಾಸಕರಾದ
News

ಲೋಕಸಭೆಯಲ್ಲಿ ಮಾಜಿ ಸೈನಿಕರ ಪರ ಧ್ವನಿಯೆತ್ತಿದ ಸಂಸದ ಕ್ಯಾಪ್ಟನ್ ಬ್ರಿಜೇಶ್‌ ಚೌಟ

ಯೋಧರ ಚಿಕಿತ್ಸಾ ತೊಂದರೆ ಗಂಭೀರ – ಖಾಸಗಿ ಆಸ್ಪತ್ರೆಗಳು ಹಿಂದೆ ಸರಿಯುತ್ತಿರುವುದೇ ಆತಂಕ ಕೊಡಗಿನಲ್ಲಿ ECHS ಆಸ್ಪತ್ರೆಗಳ ಕೊರತೆ – ನಿವೃತ್ತ ಯೋಧರು 100–150 ಕಿ.ಮೀ ಪ್ರಯಾಣಿಸುವ

You cannot copy content of this page