December 12, 2025
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

EPFO ಕೋ ಆಪರೇಟಿವ್ ಸೊಸೈಟಿಯಲ್ಲಿ ಕೋಟಿ ಕೋಟಿ ವಂಚನೆ

CEO ಸೇರಿ ಇಬ್ಬರು ಆರೋಪಿಗಳ ಬಂಧನ

ಸುಮಾರು 300 ಖಾತೆದಾರರ 70 ಕೋಟಿ ರೂಪಾಯಿ ಹಣವನ್ನು ಕೊ-ಆಪರೇಟೀವ್ ಬ್ಯಾಂಕ್ ಸಿಬ್ಬಂದಿಗಳೇ ಯಾಮಾರಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. EPFO ಸಿಬ್ಬಂದಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಲ್ಲಿ ನಡೆದ 70 ಕೋಟಿ ರೂಪಾಯಿ ವಂಚನೆ ಪ್ರಕರಣ ಸಂಬಂಧ CEO ಸೇರಿ ಇಬ್ಬರು ಪ್ರಮುಖ ಆರೋಪಿಗಳನ್ನು ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸರು ಬಂಧಿಸಿದ್ದಾರೆ. ಸೊಸೈಟಿಯ CEO ಗೋಪಿನಾಥ್‌ ಹಾಗೂ ಸಿಬ್ಬಂದಿ ಲಕ್ಷ್ಮಿ ಜಗದೀಶ್ ಬಂಧಿತ ಆರೋಪಿಗಳು.

ಪ್ರಸ್ತುತ ಮತ್ತು ನಿವೃತ್ತ EPFO ಸಿಬ್ಬಂದಿಗಳು ತಮ್ಮ ಉಳಿತಾಯವನ್ನು ಈ ಸೊಸೈಟಿಯಲ್ಲಿ FD ಮಾಡಿದ್ದರು. ಈ ಠೇವಣಿಗಳಿಗೆ ಪ್ರತಿ ತಿಂಗಳು ಬಡ್ಡಿ ಹಣ ನೀಡಲಾಗುತ್ತಿತ್ತು. ಕಳೆದ ಮೂರು ತಿಂಗಳಿಂದ ಹೂಡಿಕೆದಾರರಿಗೆ ಬಡ್ಡಿ ಹಣ ಖಾತೆಗೆ ಜಮೆಯಾಗದ ಕಾರಣ ಅನುಮಾನಗೊಂಡು ಹೂಡಿಕೆದಾರರು ಸ್ವತಃ ಪರಿಶೀಲಿಸಿದಾಗ ಸೊಸೈಟಿಯಲ್ಲಿ ಇರಿಸಿದ್ದ FD ಹಣ ನಾಪತ್ತೆಯಾಗಿರುವುದು ಬಯಲಾಗಿದೆ. ಕೇವಲ ಮೂರು ಕೋಟಿ ರೂಪಾಯಿಗಳನ್ನು ಮಾತ್ರ ಸಾಲವಾಗಿ ನೀಡಲಾಗಿದ್ದು, ಉಳಿದ 70 ಕೋಟಿ ರೂಪಾಯಿ ಹಣ ದುರ್ಬಳಕೆಯಾಗಿದೆ ಎಂದು ಆರೋಪಿಸಲಾಗಿದೆ. ಸುಮಾರು 300ಕ್ಕೂ ಹೆಚ್ಚು ಠೇವಣಿದಾರರು ಈ ವಂಚನೆಗೆ ಒಳಗಾಗಿದ್ದಾರೆ ಎನ್ನಲಾಗಿದೆ.


ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಪೊಲೀಸರು ನ್ಯಾಯಾಲಯದಿಂದ ಸರ್ಚ್ ವಾರಂಟ್ ಪಡೆದು ಆರೋಪಿಗಳ ಮನೆಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿ ಕೆಲವು ದಾಖಲೆಗಳನ್ನು ಸೀಜ್ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

You may also like

News

ಪುತ್ತೂರಿಗೆ ಶಾಸಕ ಅಶೋಕ್ ರೈ ಕನಸು ನನಸಾದಂತೆ — ರೂಪಾಯಿ 5 ಕೋಟಿ ವೆಚ್ಚದ ಹೊಸ ತಾಲೂಕು ಪಂಚಾಯತ್ ಕಟ್ಟಡಕ್ಕೆ ನಾಳೆ ಡಿಸೆಂಬರ್ 13ರಂದು ಶಿಲಾನ್ಯಾಸ

ಪುತ್ತೂರಿನ ಅಭಿವೃದ್ಧಿ ಕನಸುಗಳು ಒಂದೊಂದಾಗಿ ಸಫಲವಾಗುತ್ತಿವೆ. ಹಳೆಯ ಮತ್ತು ಅಪರಿಹಾರ್ಯವಾಗಿರುವ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪುತ್ತೂರು ತಾಲೂಕು ಪಂಚಾಯತ್ ಕಚೇರಿಗೆ ಹೊಸ ಕಟ್ಟಡದ ಅಗತ್ಯವನ್ನು ಆಗಲೇ ಗುರುತಿಸಿದ್ದ ಶಾಸಕರಾದ
News

ಲೋಕಸಭೆಯಲ್ಲಿ ಮಾಜಿ ಸೈನಿಕರ ಪರ ಧ್ವನಿಯೆತ್ತಿದ ಸಂಸದ ಕ್ಯಾಪ್ಟನ್ ಬ್ರಿಜೇಶ್‌ ಚೌಟ

ಯೋಧರ ಚಿಕಿತ್ಸಾ ತೊಂದರೆ ಗಂಭೀರ – ಖಾಸಗಿ ಆಸ್ಪತ್ರೆಗಳು ಹಿಂದೆ ಸರಿಯುತ್ತಿರುವುದೇ ಆತಂಕ ಕೊಡಗಿನಲ್ಲಿ ECHS ಆಸ್ಪತ್ರೆಗಳ ಕೊರತೆ – ನಿವೃತ್ತ ಯೋಧರು 100–150 ಕಿ.ಮೀ ಪ್ರಯಾಣಿಸುವ

You cannot copy content of this page