May 2, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ಮಂಗಳೂರು CCB ಪೊಲೀಸರ ಕಾರ್ಯಾಚರಣೆ – ಇಬ್ಬರ ಬಂಧನ

ಸಾರ್ವಜನಿಕರಿಗೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತು ಸರಬರಾಜು

ನಿಷೇದಿತ ಮಾದಕ ವಸ್ತುವಾದ MDMA ನ್ನು ಖರೀದಿಸಿಕೊಂಡು ಮಂಗಳೂರು ನಗರದ ಸಾರ್ವಜನಿಕರಿಗೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಸರಬರಾಜು ಮಾಡುತ್ತಿದ್ದ ಇಬ್ಬರನ್ನು ಮಂಗಳೂರು CCB ಪೊಲೀಸರು ದಸ್ತಗಿರಿ ಮಾಡಿ ಅವರಿಂದ 24.57 ಗ್ರಾಂ ತೂಕದ MDMA ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ.

ನವಂಬರ್ 4ರಂದು ಮಂಗಳವಾರ ಮಂಗಳೂರು ನಗರದ ಬಂದರು ಮತ್ತು ದಕ್ಕೆಯ ಪರಿಸರದಲ್ಲಿ ಆಟೋ ರಿಕ್ಷಾದಲ್ಲಿ ಮಾದಕವಸ್ತು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಸಿಸಿಬಿ ಪೊಲೀಸರು ಎಸ್.ಹೆಚ್. ನಗರ, ದಯಾಂಬು, ಅಡ್ಯಾರ್ ಕಣ್ಣೂರು ನಿವಾಸಿ 39 ವರ್ಷ ಪ್ರಾಯದ ಆಟೋ ಅಬ್ದುಲ್ ಸಲಾಮ್ ಎಂಬಾತನನ್ನು ವಶಕ್ಕೆ ಪಡೆದುಕೊಂಡು ಆತನ ವಶದಿಂದ ರೂಪಾಯಿ 1,20,000/- ಮೌಲ್ಯದ ನಿಷೇದಿತ ಮಾದಕ ವಸ್ತುವಾದ MDMA, ಆಟೋ ರಿಕ್ಷಾ, ಮೊಬೈಲ್ ಫೋನ್, ತೂಕಮಾಪನ, ಖಾಲಿ ಜಿಪ್ ಲಾಕ್ ಕವರ್ ಸಹಿತ ಒಟ್ಟು ರೂಪಾಯಿ 2,30,500/- ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಇನ್ನೊಂದು ಪ್ರಕರಣದಲ್ಲಿ ನವಂಬರ್ 6ರಂದು ಸಾರ್ವಜನಿಕರಿಗೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಬೋಳಿಯಾರು ಪರಿಸರದಲ್ಲಿ ಮಾದಕವಸ್ತು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ CCB ಪೊಲೀಸರು ಜಾರದಗುಡ್ಡೆ ಹೌಸ್, ಬೋಳಿಯಾರು, ಉಳ್ಳಾಲ ತಾಲೂಕು ನಿವಾಸಿ 28 ವರ್ಷ ಪ್ರಾಯದ ಮೊಹಮ್ಮದ್ ನಾಸೀರ್ @ ಶಾಕೀರ್@ ಚಾಕಿ ಎಂಬಾತನನ್ನು ವಶಕ್ಕೆ ಪಡೆದುಕೊಂಡು ಆತನಿಂದ ರೂಪಾಯಿ 1,20,000/- ಮೌಲ್ಯದ ನಿಷೇದಿತ ಮಾದಕ ವಸ್ತುವಾದ MDMA, ಕಪ್ಪು ಬಣ್ಣದ ಯಮಹಾ ಕಂಪೆನಿಯ ಯಮಹಾ FZ ಬೈಕ್, ಮೊಬೈಲ್ ಫೋನ್, ಖಾಲಿ ಜೆಪ್ ಲಾಕ್ ಕವರ್, ಸಹಿತ ಒಟ್ಟು ರೂಪಾಯಿ 2,05,000/- ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಾದಕವಸ್ತು ಮಾರಾಟ/ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರೆದಿದೆ. ಈ ಮಾದಕ ವಸ್ತು MDMA ಮಾರಾಟ/ಸಾಗಾಟದ ಪತ್ತೆ ಕಾರ್ಯದಲ್ಲಿ CCB ಘಟಕದ ಅಧಿಕಾರಿ ಮತ್ತು ಸಿಬ್ಬಂದಿಗಳು ಭಾಗವಹಿಸಿರುತ್ತಾರೆ.

You may also like

News

ಉಡುಪಿಯಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ವಾರ್ಷಿಕ ಸಭೆ – ಸಂಘಟನೆ ಬಲವರ್ಧನೆಗೆ ಪಣ

ಉಡುಪಿ: ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ವಾರ್ಷಿಕ ಮಹಾಸಭೆಯು ಮೇ 1ರಂದು ಶುಕ್ರವಾರ ಬ್ರಹ್ಮಗಿರಿಯ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಯಶಸ್ವಿಯಾಗಿ ಜರುಗಿತು. ಜಿಲ್ಲೆಯ ಯುವ ಶಕ್ತಿಯನ್ನು ರಾಜಕೀಯವಾಗಿ
News

Mumbai Archbishop Cardinal Oswald Gracias Offers Solace to Residents of Saint Anthony’s Ashram

MANGALURU: His Eminence Cardinal Oswald Gracias, Archbishop of Mumbai and a member of the Pope’s Council of Cardinals, paid a

You cannot copy content of this page