July 11, 2026
Karavali Suddi | Bilingual Kannada/English Weekly Newspaper | ಕರಾವಳಿ ಸುದ್ದಿ - ಅರವಿನತ್ತ ನಮ್ಮ ಚಿತ್ತ
Follow Us
News

ನಕಲಿ ದಾಖಲೆ ಪ್ರಕರಣದಲ್ಲಿ ಆರೋಪಿ ಅಬ್ದುಲ್ ಹಾಶೀಮ್ ಬಂಧನ

ನಕಲಿ ದಾಖಲೆ ಸೃಷ್ಟಿಸಿ ನ್ಯಾಯಾಲಯವನ್ನು ವಂಚಿಸಿದ ಭೂಪ

ಪುತ್ತೂರು ತಾಲೂಕಿನ ಪಡುವನ್ನೂರು ಗ್ರಾಮದ 34 ವರ್ಷ ಪ್ರಾಯದ ಅಬ್ದುಲ್ ಹಾಶೀಮ್  ಎಂಬಾತನನ್ನು ಉಪ್ಪಿನಂಗಡಿ ಪೊಲೀಸರು ನವೆಂಬರ್ 6ರಂದು ಗುರುವಾರ ನಕಲಿ ದಾಖಲೆ ಸೃಷ್ಟಿಸಿ ನ್ಯಾಯಾಲಯವನ್ನು ವಂಚಿಸಿದ ಆರೋಪದಲ್ಲಿ ಪುತ್ತೂರು ತಾಲೂಕಿನ ಪಡುವನ್ನೂರು ಗ್ರಾಮದಿಂದ ಬಂಧಿಸಿದ್ದಾರೆ. ಆರೋಪಿ ಪುತ್ತೂರು ತಾಲೂಕಿನ ನೆಕ್ಕಿಲಾಡಿ ಗ್ರಾಮದ ಎನ್‌. ಅಬೂಬಕ್ಕರ್ ರವರ ಹೆಸರಿನಲ್ಲಿರುವ ಜಮೀನಿನ RTCಯನ್ನು ತನ್ನ ಹೆಸರಿನ ಜಮೀನಿನ ದಾಖಲೆ ಎಂದು ತೋರಿಸಿ ಮಂಗಳೂರು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಸಲ್ಲಿಸಿದ್ದ. ಇದರ ಆಧಾರದ ಮೇಲೆ ಆರೋಪಿಗೆ ಜಾಮೀನು ದೊರಕಿತ್ತು. ಈ ಕುರಿತು ಎನ್‌. ಅಬೂಬಕ್ಕರ್ ನೀಡಿದ ದೂರಿನ ಮೇರೆಗೆ ಉಪ್ಪಿನಂಗಡಿ ಪೊಲೀಸ್‌ ಠಾಣೆಯಲ್ಲಿ ಸೆಪ್ಟೆಂಬರ್ 27ರಂದು ಭದ್ರತಾ ದಾಖಲೆಗಳ ನಕಲು ಹಾಗೂ ವಂಚನೆ ಆರೋಪದಡಿ (IPC ಸೆಕ್ಷನ್‌ಗಳು 417, 419, 467, 468, 471) ಪ್ರಕರಣ ದಾಖಲಾಗಿತ್ತು.

ತನಿಖೆ ಕೈಗೊಂಡ ಪೊಲೀಸರು ನಕಲಿ ಸಹಿ ಹಾಗೂ ಸುಳ್ಳು ಹೇಳಿಕೆಗಳ ಮೂಲಕ ವಂಚನೆ ಎಸಗಿದ್ದ ಅಬ್ದುಲ್ ಹಾಶೀಮ್ ಎಂಬಾತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಇದೇ ಪ್ರಕರಣದಲ್ಲಿ ಮುಂಚೆಯೇ 32 ವರ್ಷ ಪ್ರಾಯದ ಅಬೂಬಕ್ಕರ್,  ಬಿನ್. ಹಮ್ಮದ್ ಬ್ಯಾರಿ ಎಂಬಾತನನ್ನೂ ಪೊಲೀಸರು ಬಂಧಿಸಿದ್ದರು.

ಸಾರ್ವಜನಿಕರ ಆತಂಕ – ಪುತ್ತೂರಿನಲ್ಲಿ ನಕಲಿ ದಾಖಲೆ ಜಾಲ ಸಕ್ರಿಯ?

ಈ ಘಟನೆ ಹಿನ್ನೆಲೆಯಲ್ಲಿ ಸಾರ್ವಜನಿಕರು ಪುತ್ತೂರು ತಾಲೂಕಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ ಜಾಮೀನು ನೀಡುವ ಹಾಗೂ ಇತರ ಅಪರಾಧಗಳಲ್ಲಿ ತೊಡಗಿರುವ ಸಂಘಟಿತ ಜಾಲವೊಂದು ಕಾರ್ಯನಿರ್ವಹಿಸುತ್ತಿದೆ ಎಂಬ ಗಂಭೀರ ಆರೋಪ ಮಾಡಿದ್ದಾರೆ. ಪೊಲೀಸರು ಈ ಬಗ್ಗೆ ಗಂಭೀರವಾಗಿ ತನಿಖೆ ನಡೆಸಬೇಕು ಹಾಗೂ ಇಂತಹ ಸಮಾಜಘಾತಕ ಚಟುವಟಿಕೆಗಳಿಗೆ ತಡೆ ನೀಡಬೇಕು ಎಂದು ಸಾಮಾಜಿಕ ಮುಖಂಡರು ಆಗ್ರಹಿಸಿದ್ದಾರೆ.

You may also like

News

Father Muller Principal Wins Prestigious Global Young Investigator Award at MASCC/ISOO Congress in Australia

In a moment of immense pride for the nation and the physiotherapy fraternity, Prof. Cherishma Dsilva, Principal of Father Muller
News

ಮಂಗಳೂರಿನ ಸಂದೇಶ ಫೌಂಡೇಶನ್‌ನಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿಯ ಹೊಸ ಅಧ್ಯಾಯ

‘Mangalore IAS – A School for Civil Services’ಗೆ ಚಾಲನೆ ನೀಡಿದ ಬಳ್ಳಾರಿ ಧರ್ಮಕ್ಷೇತ್ರದ ಬಿಷಪ್ ಹೆನ್ರಿ ಡಿಸೋಜ ನಾಗರಿಕ ಸೇವೆಗಳ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗೆ

You cannot copy content of this page